Headlines

ಹಲವು ರಾಜಕೀಯ ಮುಖಂಡರಿಗೆ ಸಾವಿದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಹಲವು ರಾಜಕೀಯ ಮುಖಂಡರಿಗೆ ಸಾವಿದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೋಡಿಮಠದ ಶ್ರೀಗಳು ಆಗಾಗ ದೇಶದ, ರಾಜ್ಯದ ಬಗ್ಗೆ ಭವಿಷ್ಯವನ್ನ ನುಡಿಯುತ್ತಲೇ ಇರುತ್ತಾರೆ. ಅದು ಯಾವಾಗಲೂ ನಿಜವಾಗಿದೆ ಕೂಡ. ಇದೀಗ ಮತ್ತೆ ಭವಿಷ್ಯ ನುಡಿದಿದ್ದಾರೆ. ಮತ್ತೆ ರಾಜಕೀಯ ಕುರಿತು ಭವಿಷ್ಯ ನುಡಿದಿದ್ದು, ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ ಎಂದು ಹೇಳಿದ್ದಾರೆ. ಇನ್ನು ಕೊರೊನ ಸೋಂಕು ಕುರಿತು ಈಗಾಗಲೇ ಅಲ್ಲಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈ ಸಂಬಂಧ ಈಗಾಗಲೇ ಜನರಿಗೆ ಆತಂಕ ಶುರುವಾಗಿದೆ….

Read More

ಲಂಚ ಪಡೆಯುತ್ತಿದ್ದ ವೇಳೆ ಗ್ರಾಪಂ ಅಧ್ಯಕ್ಷೆ ಮೇಲೆ ಎಸಿಬಿ ದಾಳಿ

ಶಿವಮೊಗ್ಗ : ಕಾಮಗಾರಿಯ ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತ್‌ ಅಧ್ಯಕ್ಷೆಯೊಬ್ಬರ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಮುದ್ದಿನಕೊಪ್ಪ ಗ್ರಾಪಂ ಅಧ್ಯಕ್ಷೆ ವೇಣಿ ಕಣ್ಣನ್ (47) ಎಸಿಬಿ ಬಲೆಗೆ ಬಿದ್ದವರು. ಮುದ್ದಿನಕೊಪ್ಪ ಗ್ರಾಮದ ನಿವಾಸಿಯೊಬ್ಬರು ಗುತ್ತಿಗೆದಾರರೊಬ್ಬರ ಪರವಾಗಿ ಕಟ್ಟಡ ಕಾಮಗಾರಿಯೊಂದನ್ನು ಪೂರ್ಣಗೊಳಿಸಿದ್ದರು. 2020ರ ಜನವರಿಯಲ್ಲೇ ಕಾಮಗಾರಿ ಮುಕ್ತಾಯವಾಗಿತ್ತು. ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು 50 ಸಾವಿರ ರೂ. ಕೊಡುವಂತೆ ಗ್ರಾಪಂ ಅಧ್ಯಕ್ಷೆ ವೇಣಿ ಕಣ್ಣನ್ ಬೇಡಿಕೆ…

Read More

Ripponpet | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಹಾರಿದ ಕಾರು – ತಪ್ಪಿದ ಭಾರಿ ಅನಾಹುತ

Ripponpet | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಹಾರಿದ ಕಾರು – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ  ಘಟನೆ ನಡೆದಿದೆ. ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ತಾವರೆಕೆರೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದಿದೆ. ಬೆಂಗಳೂರಿನಿಂದ ರಿಪ್ಪನ್‌ಪೇಟೆ ಮಾರ್ಗವಾಗಿ ಸೊನಲೆಗೆ ತೆರಳುತಿದ್ದಾಗ ತಾವರೆಕೆರೆಯ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಉರುಳಿ ಬಿದ್ದಿದೆ. ಕಾರಿನಲ್ಲಿ ಸೊನಲೆ ಮೂಲದ ಸುರೇಶ್ ಹಾಗೂ ಅವರ ಪತ್ನಿ ಮತ್ತು…

Read More

ರಿಪ್ಪನ್‌ಪೇಟೆ : ಗ್ರಾಪಂ ಸದಸ್ಯರ ಕಡೆಗಣನೆ ವಿರೋಧಿಸಿ ಕಾಂಗ್ರೆಸ್ ಸದಸ್ಯರ ಪ್ರತಿಭಟನೆ – ಕಾಮಗಾರಿ ಉದ್ಘಾಟನೆಯ ಪ್ಲೆಕ್ಸ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯನ ಫೋಟೋನೂ ಇಲ್ಲ, ಹೆಸರು ಇಲ್ಲ..!!!!!|Ripponpet

ರಿಪ್ಪನ್‌ಪೇಟೆ : ಇಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗವಟೂರು ವಾರ್ಡ್ ನಲ್ಲಿ ಶನಿವಾರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ನೆರವೇರಿಸಿದ  ಸಂಪರ್ಕ ರಸ್ತೆ ಡಾಂಬರೀಕರಣ ಕಾಮಗಾರಿ ಗುದ್ದಲಿಪೂಜೆಯ ಸಂದರ್ಭದಲ್ಲಿ ವಾರ್ಡ್ ನ ಸದಸ್ಯ ಗಣಪತಿ ಪೋಟೋವನ್ನು ಪ್ಲೆಕ್ಸ್ ನಲ್ಲಿ ಹಾಕದೇ ನಿರ್ಲಕ್ಷಿಸಿದ್ದಾರೆಂದು ಅರೋಪಿಸಿ ಇಂದು ಗ್ರಾಮ ಪಂಚಾಯ್ತಿ ಕಛೇರಿ ಎದುರು ಗಾಂಧಿ ಭಾವಚಿತ್ರವನ್ನಿಟ್ಟುಕೊಂಡು ಕಾಂಗ್ರೆಸ್ ಬೆಂಬಲಿತ ಸದಸ್ಯರು ಪ್ರತಿಭಟನೆ ನಡೆಸಿದರು. ಗವಟೂರು ವಾರ್ಡ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿ ಇಬ್ಬರು, ಓರ್ವ ಕಾಂಗ್ರೆಸ್ ಬೆಂಬಲಿತ ಸದಸ್ಯ ಚುನಾವಣೆಯಲ್ಲಿ…

Read More

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು ಬಿರಿಯಾನಿ ತಿನ್ನಲು ಹೊಟೇಲ್ ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್‌ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಹೊಳೆಹೊನ್ನೂರಿನ ಕನಸಿನಕಟ್ಟೆ ರಸ್ತೆಯ ಬಾರ್ ನಲ್ಲಿ ನಡೆದಿದೆ. ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್‌ನಲ್ಲಿ ಘಟನೆ ಸಂಭವಿಸಿದೆ. ರವಿ…

Read More

ನೇದರವಳ್ಳಿಯ ಸೊಪ್ಪಿನ ಬೆಟ್ಟ ಕಾಡು ಲೂಟಿಯಾಗುತ್ತಿದ್ದರೂ ಸುಮ್ಮನೆ ಕುಳಿತಿರುವ ಅಧಿಕಾರಿಗಳು : ಪರಿಸರ ಪ್ರೇಮಿ ಮಂಜಪ್ಪ ಗಂಭೀರ ಆರೋಪ.

ಸಾಗರ : ತಾಲ್ಲೂಕಿನ ಹೊಸೂರು ಗ್ರಾಮ ಪಂಚಾಯ್ತಿಯ ನೇದರವಳ್ಳಿಯಲ್ಲಿ ಸರ್ವೆ ನಂಬರ್  10 ಮತ್ತು 11 ರಲ್ಲಿ  43ಎಕರೆ ಸೊಪ್ಪಿನ ಬೆಟ್ಟದಲ್ಲಿ ತೋಟಕ್ಕೆ ಮುಫತ್ತು ಎಂದು ಕಾಡು ಇತ್ತು. ಆದರೆ ಇತ್ತೀಚಿನ ಹತ್ತು ವರ್ಷದ ಈ ಕಡೆ ನೇದರವಳ್ಳಿ ಗ್ರಾಮದ 20 ಕ್ಕೂ ಹೆಚ್ಚು ಜನ ಈ ಕಾಡನ್ನು ಇದೀಗ ಒತ್ತುವರಿ ಮಾಡಿದ್ದಾರೆ ಟ್ರಂಚ್ ಹೊಡೆಸಿದ್ದಾರೆ ಹಾಗೂ ಬೆಳೆಯನ್ನು ಸಹ ಮಾಡಿದ್ದಾರೆ. ಹಾಗೂ ಕಾಡಿನ ಜಾಗದಲ್ಲಿ ಇದೀಗ ಕ್ರಿಕೆಟ್ ಮೈದಾನವನ್ನು ಮಾಡಿದ್ದು ಇದಕ್ಕೆ ಅವಕಾಶವನ್ನು ನೀಡಿದವರು ಯಾರು…

Read More

Shivamogga | ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಬೇಜವಾಬ್ದಾರಿಗೆ ಬಾಲಕಿ ಬಲಿ..!!

Shivamogga | ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ..!! ತರಕಾರಿ ಬೆಳೆದು ಬದುಕುತ್ತಿದ್ದ ಸುಂದರ ಸಂಸಾರದ ಮುದ್ದು ಮಗಳು ರೈಲ್ವೆ ಕಾಮಗಾರಿಯ ಅಸಮರ್ಪಕ ಕಾರ್ಯಕ್ಕೆ ಬಲಿಯಾಗಿರುವ ಘಟನೆ ನಿನ್ನೆ ಸಂಜೆ ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನಲ್ಲಿ ನಡೆದಿದೆ. ರೈಲ್ವೆ ಟರ್ಮಿನಲ್ ನಿರ್ಮಾಣದ ಹಿನ್ನೆಲೆಯಲ್ಲಿ ರೈತರಿಂದ ಭೂಮಿ ಪಡೆದು ನಡೆಯುತ್ತಿರುವ ಕಾಮಗಾರಿಯಲ್ಲಿ ಕೋಟೆಗಂಗೂರು ಹಾಗೂ ಅಲ್ಲಿಂದ ಅನ್ಯ ಊರಿನ ಸಂಪರ್ಕ ಹಾಗೂ ತೋಟ ಹೊಲಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಆಳವಾದ ಗುಂಡಿಯನ್ನು ತೆಗೆದಿದ್ದರು.  ಅಲ್ಲಿ ಓಡಾಡುವ ಜನರ ರಕ್ಷಣೆಗೆ ಅಗತ್ಯ ವ್ಯವಸ್ಥೆ…

Read More

ಕೆಂಚನಾಲದಲ್ಲಿ ಪ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ : ಗ್ರಾಮಸ್ಥರ ಮಧ್ಯಸ್ಥಿಕೆ |Flex

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಪ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ನಂತರ ಗ್ರಾಮಸ್ಥರ ಮಧ್ಯಸ್ಥಿಕೆಯಿಂದಾಗಿ ತಿಳಿಗೊಂಡಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚನಾಲ ಗ್ರಾಮದ ವೃತ್ತದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಕಟ್ಟುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.  ಟಿಪ್ಪು ಬ್ಯಾನರ್ ಕಟ್ಟಲು ಕೆಲ ಯುವಕರು ಮುಂದಾದಾಗ ಕೆಲ ಯುವಕರು ಆಕ್ಷೇಪಿಸಿದ್ದಾರೆ. ಕೆಂಚನಾಲ ವೃತ್ತದಲ್ಲಿ ಇದುವರೆಗೂ ಯಾವ ಬ್ಯಾನರ್ ಗಳನ್ನು ಹಬ್ಬದ ಸಂದರ್ಭದಲ್ಲಿಯೂ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ : ಯುವ ಕಾಂಗ್ರೆಸ್ ವತಿಯಿಂದ ಗೃಹ ಸಚಿವರ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು :

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಗೃಹಸಚಿವ ಆರಗ ಜ್ಞಾನೇಂದ್ರ ಕೋಮುಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿದ್ದಾರೆ ಈ ಕಾರಣಕ್ಕೆ ಆದಷ್ಟು ಬೇಗ ರಾಜೀನಾಮೆ ಕೊಟ್ಟು ತೀರ್ಥಹಳ್ಳಿಯ ಗೌರವ ಕಾಪಾಡಿ ಎಂದು ಇಂದು ತೀರ್ಥಹಳ್ಳಿಯ ತಾಲೂಕು ಕಛೇರಿ ಮುಂಭಾಗ ನೆಡದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಕಿಮ್ಮನೆ ರತ್ನಾಕರ್ ವಾಗ್ದಾಳಿ ನೆಡೆಸಿದರು.  ಅವರೊಬ್ಬ ರಾಜ್ಯದ ಗೃಹಸಚಿವ, ರಾಜ್ಯದಲ್ಲಿ  ಶಾಂತಿ ಕಾಪಾಡುವಂತೆ ಮಾಡುವ ಕೆಲಸ ಅವರದ್ದು  ಯಾವುದೇ ಕೇಸ್ ಗೆ ಸಂಬಂಧಪಟ್ಟ ವಿಷಯವಾದರೂ ತನಿಖೆ ನೆಡೆಯುವದರೊಳಗೆ ಹೇಳಿಕೆ ನೀಡಬಾರದು. ಆದರೆ ಗೃಹಸಚಿವರು ವಿಷಯ…

Read More

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರು ಗಂಭೀರ!

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರಿಗೆ ಗಾಯ ನಿಶ್ಚಿತಾರ್ಥದ ಫೋಟೋಶೂಟಿಂಗ್ ಕೆಲಸಕ್ಕಾಗಿ ನಾಲ್ವರು ಕ್ರೆಟಾ ಕಾರಿನಲ್ಲಿ ಹೋಗುವಾಗ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಅರ್ಜುನ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದಷ್ಟರಲ್ಲಿ ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ನಡೆಯಲಿದ್ದ ನಿಶ್ಚಿತಾರ್ಥ ಕಾರ್ಯಕ್ರಮದ ಫೋಟೋ ಶೂಟಿಂಗ್‌ಗೆ ತೆರಳುತ್ತಿದ್ದ ಶಿವಮೊಗ್ಗದ ಯುವಕರ ಕಾರು ಚಳ್ಳಕೆರೆ ಹತ್ತಿರ ನಿಲ್ಲಿಸಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಘಟನೆದಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ…

Read More
Exit mobile version