Headlines

ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ :

ಸಾಗರ : ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಜೋಗದ ಶಿರೂರು ಕೆರೆಯಲ್ಲಿ ಶುಕ್ರವಾರ ನಡೆದಿದೆ. ಗಾಯಿತ್ರಿ(43), ಮೃತ ದುರ್ಧೈವಿಯಾಗಿದ್ದಾರೆ.ಇವರು ಕೆ.ಇ.ಬಿ  ನೌಕರ ಶಂಕರ್ ಅವರ ಪತ್ನಿ ಎಂದು ತಿಳಿದು ಬಂದಿದೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಹಿಳೆ ಕೆರೆಗೆ ಹಾರುತ್ತಿರುವುದನ್ನು ಹೋಂ ಗಾರ್ಡ್ ಒಬ್ಬರು ಗಮನಿಸಿದ್ದಾರೆ. ಈ ಮಾಹಿತಿಯನ್ನು ಜೋಗ ಠಾಣೆಯ ಪಿಎಸ್ಐ ಅವರಿಗೆ ನೀಡಿದ್ದು,ತಕ್ಷಣ  ಸ್ಥಳಕ್ಕಾಗಮಿಸಿದ ಸಬ್ ಇನ್ಸ್ ಪೆಕ್ಟರ್ ನಿರ್ಮಲಾ ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತಿದ್ದಾರೆ. ಕಾರ್ಗಲ್ ಪೊಲೀಸ್…

Read More

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ ರಿಪ್ಪನ್‌ಪೇಟೆ;-ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು ಮೇ.1 ರಿಂದ 4 ರವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯದೊಂದಿಗೆ ಆದ್ದೂರಿಯಾಗಿ ನಡೆದು ಇಂದು ಸಂಪನ್ನಗೊಂಡಿತು. ಶಿವಮೊಗ್ಗದ ವೇ.ಬ್ರ.ವಸಂತಭಟ್ ಇವರ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕಚಂದ್ರಶೇಖರಭಟ್ ಮತ್ತು ಗುರುರಾಜಭಟ್ ಇವರ ಸಹಯೋಗದಲ್ಲಿ ಗಣಪತಿ ಮತ್ತು ಅಮ್ಮನವರಿಗೆ ಕುಂಭಾಭಿಷೇಕ.ಮಹಾಪೂಜೆ.ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗದೊಂದಿಗೆ ಧಾರ್ಮಿಕ…

Read More

ಸಂಸದ ಬಿ ವೈ ರಾಘವೇಂದ್ರ ಖಾತೆಯಿಂದ 16 ಲಕ್ಷ ಎಗರಿಸಿದ‌ ಮುಂಬೈ ಹ್ಯಾಕರ್ |Hacker

ಸಂಸದ ಬಿ ವೈ ರಾಘವೇಂದ್ರ ರವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಹಣ ಲಪಟಾಯಿಸಿದ್ದ ಪ್ರಕರಣ ನಡೆದಿದೆ.  ಈ ಬಗ್ಗೆ ಸ್ವತಃ ಬಿ ವೈ ರಾಘವೇಂದ್ರ ರವರೇ ಶಿಕಾರಿಪುರದ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ. ಮತ್ತು ಈ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿ ಹಣ ಹಿಂದಿರುಗುಸುವಲ್ಲಿ ಯಶಸ್ವಿಯಾಗಿದ್ದಾರೆ ಶಿವಮೊಗ್ಗದ ಇಂಜಿನಿಯರಿಂಗ್ ಕಾಲೇಜಿಗೆ ಸಂಬಂಧಿಸಿದ ಸಂಸದರ ಬ್ಯಾಂಕ್ ಖಾತೆಯಿಂದ 16 ಲಕ್ಷ ರೂ. ಹಣ ದಿಢೀರ್ ವರ್ಗಾವಣೆಯಾಗಿತ್ತು. ಆದರೆ ಆ ಖಾತೆಯಿಂದ ಅವರು ಯಾವುದೆ…

Read More

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ ಏರಿಸೀಮೆ ಕಿರುಚಿತ್ರ ಈಗಾಗಲೇ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತಿದ್ದು ಮಲೆನಾಡಿನ ಯುವ ಪ್ರತಿಭೆ ಅಜಿತ್ ಸಿಂಹ ಅದ್ಬುತ ನಟನೆಗೆ ಯಾರು ತುಟಿಕ್ ಪಿಟಿಕ್ ಅನ್ನುವಂತಿಲ್ಲ. ಅಷ್ಟರಮಟ್ಟಿಗೆ  ಕಿರುಚಿತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದಾರೆ. ಸತ್ಯ ರಾಧಕೃಷ್ಣರವರ ಸಂಗೀತ ನೋಡುಗರನ್ನು ಹೊಸಲೋಕಕ್ಕೆ ಕರೆದುಕೊಂಡು ಹೋಗುವಲ್ಲಿ ಮತ್ತು ಚಿತ್ರದೊಂದಿಗೆ ಬೆಸೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಆಹಾನ್ ಆ್ಯಕ್ಷನ್​​​ ಕಟ್​​ ಹೇಳಿರುವ ‘ಏರಿಸೀಮೆ’ಯಲ್ಲಿ ಅಜಿತ್ ಸಿಂಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸೋನಾಲಿ…

Read More

ಪ್ರವೇಶ ಪತ್ರ ಹರಿದು ಹಾಕಿ ಪರೀಕ್ಷೆ ಬಹಿಷ್ಕರಿಸಿದ ಕಾನೂನು ವಿದ್ಯಾರ್ಥಿಗಳು :

ಶಿವಮೊಗ್ಗ : ಕಾನೂನು ವಿದ್ಯಾರ್ಥಿಗಳು ಇಂದು ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಾನೂನು ವಿದ್ಯಾರ್ಥಿಗಳ ಪರೀಕ್ಷೆ ನಡೆಸುವುದರ ಬಗ್ಗೆ ಪ್ರಕರಣ ನ್ಯಾಯಾಲಯದಲ್ಲಿದ್ದರೂ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಇಂದು 20 ವಿದ್ಯಾರ್ಥಿಗಳು ಪರೀಕ್ಷೆ ವಿರೋಧಿಸಿ ಪ್ರತಿಭಟಿಸಿದರು. ಎಟಿಎನ್ ಸಿಸಿ ಕಾಲೇಜಿನ ಕಾನೂನು ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಪರೀಕ್ಷೆಗೆ ಅವಕಾಶವಿದೆ. ಆದರೆ ಈ ಆನ್ ಲೈನ್ ನ್ನ ವಿಶ್ವವಿದ್ಯಾಲಯ ರದ್ದುಪಡಿಸಿ ಆಫ್ ಲೈನ್ ನಲ್ಲಿ ಮಾತ್ರ 5 ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದೆ. ಪಿಯುಸಿ ನಂತರದ ಕಾನೂನು…

Read More

ನಾಪತ್ತೆಯಾದವರ ಪತ್ತೆಗೆ ಮನವಿ | Missing

ನಾಪತ್ತೆಯಾದವರ ಪತ್ತೆಗೆ ಮನವಿ | Missing ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆ  ವ್ಯಾಪ್ತಿಯಿಂದ ಇಬ್ಬರು ನಾಪತ್ತೆ ಪ್ರಕರಣ ದಾಖಲಾಗಿದೆ.  ನಗರದ ಸಮೀವುಲ್ಲಾ ಬಿನ್ ಅಬ್ದುಲ್ ಮಜೀದ್ ಎಂಬ 36 ವರ್ಷದ ಪುರುಷ ಮಾರ್ಚ್-2023 ರಲ್ಲಿ ಕಾಣೆಯಾಗಿದ್ದಾರೆ.ಇವರು ಮೂಲತಃ ರಿಪ್ಪನ್‌ಪೇಟೆಯವರಾಗಿದ್ದು ಕಳೆದ ಕೆಲವು ದಿನಗಳಿಂದ ಶಿವಮೊಗ್ಗದಲ್ಲಿ ನೆಲೆಸಿದ್ದಾರೆ. ಈವೆರೆಗೂ ಪತ್ತೆಯಾಗಿರುವುದಿಲ್ಲ. ಈ ವ್ಯಕ್ತಿಯ ಚಹರೆ ಸುಮಾರು 5.4 ಅಡಿ ಎತ್ತರ ದುಂಡುಮುಖ ಕಪ್ಪಕೂದಲು ಗೋಧಿ ಬಣ ಬಿಳಿ ಬಣ್ಣದ ಶರ್ಟ್ ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಇನ್ನೊಂದು…

Read More

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿದ್ದ ಪ್ರಕರಣದಲ್ಲಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ಗಾಯಗೊಂಡಿದ್ದರು. ಕಳಸ ಗ್ರಾಮದ ಮನೋಜ್ (19) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಕೆಂಚನಾಲ ಗ್ರಾಮದ ಅಕ್ಷಯ್ ಎಂಬ ಯುವಕನಿಗೆ ಕಾಲು ಮುರಿತವಾಗಿದ್ದು…

Read More

ಉದ್ಯೋಗಾಂಕ್ಷಿಗಳ ಗಮನಕ್ಕೆ – ಆ.23ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್ಸಿ, ಪಿಯುಸಿ, ಐಟಿಐ, ದಿಪ್ಲೋಮಾ ಮತ್ತು ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ…

Read More

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ ಹೊಸನಗರ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ಎಚ್.ಜೆ.ರಶ್ಮಿ ಬೇಧಿಸಿದ್ದಾರೆ. ಹೊಸನಗರ ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು ಸರಕಾರಿ ದಸ್ತಾವೇಜುಗಳ ನಕಲಿ ದಾಖಲೆ ಸೃಷ್ಠಿಸಿ ಮಾರುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದರು….

Read More

ತೀರ್ಥಹಳ್ಳಿಯಲ್ಲಿ ರೋಹಿತ್ ಚಕ್ರತೀರ್ಥ ವಿರುದ್ದ ಗೋಬ್ಯಾಕ್ ಪ್ರತಿಭಟನೆ – ಪ್ರತಿಭಟನಾಕಾರರ ಪೊಲೀಸ್ ವಶಕ್ಕೆ|thirthahalli

ರೋಹಿತ್ ಚಕ್ರತೀರ್ಥ ವಿರುದ್ದ ಭಾರಿ ಪ್ರತಿಭಟನೆ  ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಕಡೆಗೋಲು ವಿಚಾರ ಮಂಥನ ವೇದಿಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ ಅವರು ಕುವೆಂಪು ಸಾಹಿತ್ಯ ಮತ್ತು ರಾಷ್ಟ್ರೀಯತೆ ವಿಷಯ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ.ಇದು ಕುವೆಂಪು ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿದೆ. ಕುವೆಂಪು ಅವರನ್ನು ಅವಮಾನಿಸುವ ಮೂಲಕ ರೋಹಿತ್ ಚಕ್ರತೀರ್ಥ ವಿಕೃತಿ ಮೆರೆದಿದ್ದಾರೆ. ಇವರಿಗೆ ಕುವೆಂಪು ಅವರ ಬಗ್ಗೆ ಮಾತನಾಡಲು ಅವಕಾಶ ನೀಡಬಾರದು ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂದಿನಿಂದಲೇ ಪ್ರತಿಭಟನೆ ವ್ಯಕ್ತವಾಗಿತ್ತು. ಗೋ ಬ್ಯಾಕ್ ಪ್ರತಿಭಟನೆಯೂ…

Read More