Headlines

ಸಾಗರದಲ್ಲಿ ವಿದ್ಯಾರ್ಥಿನಿಯರ ಮೇಲೆ ಟಿಪ್ಪರ್ ಹರಿದ ಘಟನೆ | ಟಿಪ್ಪರ್ ಚಾಲಕನಾಗಿದ್ದ ಕೃಷ್ಣಾಚಾರಿ ಸಾವು|sagara

ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ನಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ, ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದರು.ಆ ಅಪಘಾತದಲ್ಲಿ ಟಿಪ್ಪರ್ ಚಾಲಕನಾಗಿದ್ದ ಕೃಷ್ಣಾಚಾರಿಯವರು ಸಾವನ್ನಪ್ಪಿದ್ಧಾರೆ.  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಣ್ಣಮನೆ ಸೇತುವೆ ಬಳಿ ಜೋಗದ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಆಕ್ಸಿಡೆಂಟ್​ನಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರಿಗೆ ತಕ್ಷಣವೇ ಚಿಕಿತ್ಸೆ ನೀಡಲಾಯ್ತಾದರೂ, ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.  ಈ ಘಟನೆಯ ಬೆನ್ನಲ್ಲೆ ಸಾರ್ವಜನಿಕರು ಚಾಲಕನ ವಿರುದ್ಧ ಆಕ್ರೋಶ ಹೊರಹಾಕಿದ್ದರು.  ಇದರ ಬೆನ್ನಲ್ಲೆ ನಿನ್ನೆ ಅನಾರೋಗ್ಯ…

Read More

ಕೃಷ್ಣ ಮೃಗದ ಚರ್ಮ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯ ಮಾಲು ಸಮೇತ ಬಂಧನ

ಶಿವಮೊಗ್ಗ ಜಿಲ್ಲೆಯ ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದ ಬಳಿ ಕೃಷ್ಣ ಮೃಗ ಚರ್ಮಗಳ ಮಾರಾಟದಲ್ಲಿ ತೊಡಗಿರುವ ವ್ಯಕ್ತಿಯನ್ನು ಅರಣ್ಯ ಸಂಚಾರಿದಳದ ಪೋಲೀಸರು ಬಂಧಿಸಿದ್ದಾರೆ. ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದಲ್ಲಿ ಕೃಷ್ಣ ಮೃಗದ ಚರ್ಮ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಾಗರ ಅರಣ್ಯ ಸಂಚಾರಿ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಿಕಾರಿಪುರ ತಾಲೂಕಿನ ಮಳವಳ್ಳಿ ತಾಂಡದ ಮುರಳೀಧರ್ ನಾಯ್ಕ್ ಬಂಧಿತ ವ್ಯಕ್ತಿ. ಈತನಿಂದ ಕೃಷ್ಣ ಮೃಗದ ಚರ್ಮಗಳನ್ನು ಮಾಲು ಸಮೇತ  ವಶಪಡಿಸಿಕೊಂಡು,ಪ್ರಕರಣ ದಾಖಲಿಸಿದ್ದಾರೆ. ಪೋಲೀಸ್ ಅರಣ್ಯ ಸಂಚಾರಿದಳದ ಸಬ್…

Read More

ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ | Crime News

ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ  ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಸಿದ್ಲಿಪುರ ಎಂಬ ಗ್ರಾಮದಲ್ಲಿ ನಡೆದಿದೆ.  ಘಟನೆಯಲ್ಲಿ ಮಗುವಿಗೂ ಕೂಡ ವಿಷ ನೀಡಿಲಾಗಿದೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಗಂಡನ ಮನೆಯವರ ವಿರುದ್ಧ ಆರೋಪಿಸುತ್ತಿದ್ದಾರೆ. ಗಂಡನ ಮನೆಯವರು ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪತ್ನಿ ಕಸ್ತೂರಿ ಗಂಡ…

Read More

ಇನ್ನೂ ಪತ್ತೆಯಾಗದ ವೃದ್ದನನ್ನು ರಕ್ಷಿಸಲು ಚಾನೆಲ್ ಗೆ ಹಾರಿ ನಾಪತ್ತೆಯಾಗಿದ್ದ ರಿಪ್ಪನ್ ಪೇಟೆಯ ಯುವಕ : ಅಗ್ನಿಶಾಮಕ ದಳದವರಿಂದ ಬಿರುಸಿನ ಕಾರ್ಯಾಚರಣೆ

ದಾವಣಗೆರೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಚಾನೆಲ್ ನಲ್ಲಿ ವೃದ್ದನೊಬ್ಬನನ್ನು  ರಕ್ಷಿಸಲು ಹೋಗಿ ರಿಪ್ಪನ್‌ಪೇಟೆಯ ಯುವಕನೊಬ್ಬ ನಾಪತ್ತೆಯಾಗಿ ಸುಮಾರು 48 ಗಂಟೆ ಕಳೆದಿದ್ದು ಇನ್ನೂ ಯುವಕನ ಸುಳಿವು ಪತ್ತೆಯಾಗಿಲ್ಲ.   ರಿಪ್ಪನ್ ಪೇಟೆ ನೆಹರು ನಗರ ನಿವಾಸಿ ಅನೀದ್ (22) ವರ್ಷ ಎಂಬ ಯುವಕ ಮಂಗಳವಾರ ಬೆಳಿಗ್ಗೆ ದಾವಣಗೆರೆಯಿಂದ ಲಾರಿಯೊಂದರಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಸಿದ್ದಾಪುರ ರಸ್ತೆ ಬದಿಯ ಚಾನೆಲ್ ಬಳಿ ಸೇರಿದ ಜನಸ್ತೋಮವನ್ನು ನೋಡಿ ಪ್ರಶ್ನಿಸಿದ್ದಾನೆ. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಚಾನೆಲ್ ಗೆ ಹಾರಿರುವ ವಿಚಾರ ಗಮನಕ್ಕೆ ಬಂದಿದ್ದು,ತಕ್ಷಣವೇ…

Read More

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ ರಿಪ್ಪನ್ ಪೇಟೆ : ಸಮೀಪದ ಅಮೃತ ಗ್ರಾಪಂ ವತಿಯಿಂದ ಆಯೋಜಿಸಿದ್ದ ವರ್ಗಾವಣೆ ಹೊಂದಿದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರವೀಣ್ ಎಸ್ ಪಿ ಹಾಗೂ ಉಪ ವಲಯ ಅರಣ್ಯಧಿಕಾರಿ ಅಕ್ಷಯ್ ಕುಮಾರ್ ರವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಗೌರವಿಸಿದರು. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಜನರ ಜನ ಮಾನಸದಲ್ಲಿ ಉಳಿದ ದಕ್ಷ ಅಧಿಕಾರಿ ಪ್ರವೀಣ್ ಎಸ್ ಪಿ ಯವರು ಇಂದು ಅವರ…

Read More

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC result 2025) ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ 66.14 ಶೇಕಡ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಿನ ಫಲಿತಾಂಶ ಲಭ್ಯವಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. ಎಂದಿನಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ (ಶೇ.91.12) ಹಾಗೂ ಉಡುಪಿ (ಶೇ. 89.96)…

Read More

ರಿಪ್ಪನ್‌ಪೇಟೆಯಲ್ಲಿ ಹಾನಗಲ್ ಕುಮಾರೇಶ್ವರ ರಥಯಾತ್ರೆಗೆ ಅದ್ದೂರಿ ಸ್ವಾಗತ|Viraagi

ರಿಪ್ಪನ್‌ಪೇಟೆ : ಹಾನಗಲ್ ಶ್ರೀ ಗುರುಕುಮಾರೇಶ್ವರ ಶಿವಯೋಗಿಗಳ ಕುರಿತು ಜನವರಿ ೧೨ ರಂದು ಬಿಡುಗಡೆಯಾಗಲಿರುವ ವಿರಾಟಪುರ ವಿರಾಗಿ ಚಲನಚಿತ್ರಕ್ಕೆ ಸಂಬಂಧಿಸಿದಂತೆ ಶ್ರೀ ಕುಮಾರೇಶ್ವರ ರಥ ಯಾತ್ರೆ ನಾಡಿನ ವ್ಯಾಪ್ತಿ ಸಂಚರಿಸುತ್ತಿದ್ದು ಇಂದು ಅನಂದಪುರ ಮಾರ್ಗವಾಗಿ ರಥವು ರಿಪ್ಪನ್‌ಪೇಟೆಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಸಾಗರ ರಸ್ತೆಯ ಒಕ್ಕಲಿಗರ ಸಮುದಾಯ ಭವನದ ಬಳಿ ಅದ್ದೂರಿಯಾಗಿ ಸ್ವಾಗತಿಸಿ ಬೈಕ್ ರ‍್ಯಾಲಿ ಮೂಲಕ ವಿನಾಯಕ ವೃತ್ತದ ಮೂಲಕ ಭೂಪಾಳಂ ಚಂದ್ರಶೇಖರಯ್ಯ ಸಬಾಭವನಕ್ಕೆ ಕರೆ ತರಲಾಯಿತು. ಭೂಪಾಳಂ ಚಂದ್ರಶೇಖರಯ್ಯ ಸಬಾಭವನದಲ್ಲಿ ಹತ್ತು ನಿಮಿಷದ ಹಾನಗಲ್ ಕುಮಾರೇಶ್ವರ…

Read More

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಹಾಡಹಗಲೇ ಕಳ್ಳತನ ಮಾಡಿ ಕಳ್ಳ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಹೊಸನಗರ ರಸ್ತೆಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳ ಕದ್ದೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಟ್ಟಣದ ಸಮೀಪದ ಬೆನವಳ್ಳಿ ಗ್ರಾಮದ ಪರಶುರಾಮ್ ಎಂಬುವರು ಹೊಸನಗರ ರಸ್ತೆಯಲ್ಲಿರುವ ಅರಳಿಕಟ್ಟೆ ಬಳಿಯಲ್ಲಿ ಬೈಕ್(KA 15…

Read More

ಮುಳುಗಡೆ ಸಂತ್ರಸ್ತರಿಗೆ ಹಲವು ದಶಕಗಳಿಂದ ಪರಿಹಾರ ನೀಡದೇ ವಂಚಿಸುತ್ತಿರುವ ಸರ್ಕಾರದ ವಿರುದ್ದ ಶರಾವತಿ ಚಳುವಳಿ : ಆರ್ ಎಂ ಮಂಜುನಾಥ್ ಗೌಡ

ರಿಪ್ಪನ್ ಪೇಟೆ : ಶರಾವತಿ,ವರಾಹಿ,ಚಕ್ರ ಮತ್ತು ಸಾವೇಹಕ್ಲು ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ಹೋರಾಟ ಸಮಿತಿಯ ವತಿಯಿಂದ ಹಲವಾರು ದಶಕಗಳಿಂದ ಸೂಕ್ತ ಪರಿಹಾರ ನೀಡದೇ ವಂಚಿಸುತ್ತಿರುವ ಸರ್ಕಾರವು ಕೂಡಲೇ ಅವರಿಗೆ ಪರಿಹಾರ ನೀಡಬೇಕೆಂದು ಮಾಜಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡ ಆರ್ ಎಂ ಮಂಜುನಾಥ್ ಗೌಡ ಆಗ್ರಹಿಸಿದರು. ಇಂದು ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಾ 1962 ರಲ್ಲಿ ಲಿಂಗನಮಕ್ಕಿ ಜಲಾಶಯಕ್ಕಾಗಿ ಶರಾವತಿ ನದಿ ಪಾತ್ರದ 504 ಹಳ್ಳಿಗಳು ಮುಳುಗಡೆಯಾಗಿ ಇಪ್ಪತೈದು ಸಾವಿರ…

Read More

ಪರಂಪರೆಯ ಜಾಡನ್ನು ವಿಶಿಷ್ಟವಾಗಿ ಶೋಧಿಸುವ ಕೃತಿ ‘ಬೇರು ಬಿಳಲು’ – ಡಾ. ಎ. ಬಿ. ರಾಮಚಂದ್ರಪ್ಪ.

ರಿಪ್ಪನ್ ಪೇಟೆ :ಪುರಾಣ ಇತಿಹಾಸ ಜಾನಪದದ ಬೇರುಗಳು ಕಾಲ ದೇಶಗಳ ಗತಿಯಲ್ಲಿ ಪಡೆದುಕೊಂಡ ರೂಪಾಂತರಗಳನ್ನು ಮತ್ತು ವರ್ತಮಾನದಲ್ಲಿ ಅವುಗಳ ಬಿಳಲುಗಳು ವಿಸ್ತಾರಗೊಂಡ  ವಿಶಿಷ್ಟತೆಯನ್ನು, ಸೂಕ್ಷ್ಮ ಸಂವಾದಕ್ಕೆ ಒಳಪಡಿಸಿರುವ ಕೃತಿ ‘ಬೇರು ಬಿಳಲು’ ಎಂದು ಚಿಂತಕರಾದ ಡಾ. ಎ. ಬಿ. ರಾಮಚಂದ್ರಪ್ಪ ಹರಿಹರ ಅವರು ಹೇಳಿದರು. ಸಾರ ಕೇಂದ್ರ ದೊಂಬೆಕೊಪ್ಪ, ವಂಶಿಪ್ರಕಾಶನ ಬೆಂಗಳೂರು, ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜಾನಪದ ಪರಿಷತ್,ಹೊಸನಗರ.ಸಹಮತ ವೇದಿಕೆ,ತುಮರಿ. ಕಲಾ ಸಿಂಚನ, ಸಾಗರ. ರೇಣುಕಪ್ಪಗೌಡ ಪ್ರತಿಷ್ಠಾನ ಮಸರೂರು ಇವರುಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಲಾಗಿದ್ದ; ಡಾ….

Read More