ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ

ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ ಶಿವಮೊಗ್ಗ : ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿತನಿಂದ ಪಡೆದುಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 08 ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್.ಎಂ.ಎಲ್ ನಗರದ ನಿವಾಸಿ ಸೈಯದ್ ಸಾದಿಕ್‌ರವರ ಟಾಟಾ ಇನ್ನೋವಾ ಕಾರನ್ನು ಆತನ ಪರಿಚಯಸ್ಥನಾದ ಕಿರಣ್ ಕುಮಾರ್ @ ಗುಂಡ ಎಂಬಾತ ತೆಗೆದುಕೊಂಡು ಹೋಗಿ…

Read More

ಅಕ್ರಮ ಜಾನುವಾರು ಸಾಗಾಟ – ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ |bajarangdal

ಮಾರಾಟದ ಉದ್ದೇಶಕ್ಕಾಗಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಬಜರಂಗದಳದ ಕಾರ್ಯಕರ್ತರು ರಕ್ಷಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದಲ್ಲಿ ಇಂದು ನಡೆದಿದೆ.  ಹೊಸನಗರ ಕಡೆಯಿಂದ ಶಿರಾಳಕೊಪ್ಪದ ಕಡೆಗೆ ಅಶೋಕ್ ಲೈಲೆಂಡ್ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಎತ್ತಿನ ಹೋರಿ ಹಾಗೂ ಒಂದು ಎಮ್ಮೆ ಕರುವನ್ನು ಭಜರಂಗದಳದ ಕಾರ್ಯಕರ್ತರು ರಸ್ತೆಗೆ ಅಡ್ಡಗಟ್ಟಿ ವಶಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂದು ಬೆಳಿಗ್ಗೆ ಕೆಎ 17 ಎಎ 0196 ವಾಹನದಲ್ಲಿ ಸುಮಾರು ಆರು ಎತ್ತಿನಹೋರಿ ಹಾಗೂ ಒಂದು ಎಮ್ಮೆ…

Read More

ಬೇಳೂರು ಗೋಪಾಲಕೃಷ್ಣ ರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು – ಕಾಗೋಡು ತಿಮ್ಮಪ್ಪ|Sagara

ಶಿವಮೊಗ್ಗ ಜಿಲ್ಲೆಯ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಏಳು ಜನ ಆಕಾಂಕ್ಷಿಗಳು ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದರು ಅದರಲ್ಲಿ ಹಿರಿಯ ಮುತ್ಸದಿ ಕಾಗೋಡು ತಿಮ್ಮಪ್ಪ ಹಾಗೂ ಅವರ ಮಗಳು ಡಾ.ರಾಜನಂದಿನಿ ಪ್ರಬಲ ಆಕಾಂಕ್ಷಿಯಾಗಿದ್ದರು. ಕೊನೆಯಲ್ಲಿ ಹೈಕಮಾಂಡ್ ಪಕ್ಷದ ಆಂತರಿಕ ಸಮೀಕ್ಷೆಗೆ ಮನ್ನಣೆ ನೀಡಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರನ್ನು ಹೈಕಮಾಂಡ್ ಅಂತಿಮಗೊಳಿಸಿದ್ದು ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿಸಿತ್ತು. ಆದರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಬಣಗಳಿವೆ…

Read More

ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 17ಕ್ಕೆ

ರಿಪ್ಪನ್‌ಪೇಟೆ: ಪಟ್ಟಣದ ರೋಟರಿ ಕ್ಲಬ್‌ನ ನೂತನ ಪಧಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜುಲೈ 17ರ ಭಾನುವಾರ ವಿಶ್ವಮಾನವ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ನೂತನ ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ತಿಳಿಸಿದರು. ಪಟ್ಟಣದ ರೋಟರಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು ನಮ್ಮ ಸಂಸ್ಥೆಯ ಸದಸ್ಯರು ಪ್ರಪ್ರಥಮವಾಗಿ ಮಹಿಳಾ ಅಧ್ಯಕ್ಷರು ಮತ್ತು ಕಾರ್ಯದರ್ಶಿಯನ್ನು ಆಯ್ಕೆ ಮಾಡಿದ್ದಾರೆ, ಇದರ ಉದ್ದೇಶ ಮಹಿಳಾ ಸಬಲೀಕರಣವಾಗಿದ್ದು ಸೇವೆಯಲ್ಲಿ ಮಹಿಳೆಯರ ಹೆಚ್ಚು ಪಾಲ್ಗೊಳ್ಳುವಿಕೆಯನ್ನು ಪ್ರತಿನಿಧಿಸುತ್ತದೆ. ಸಂಸ್ಥೆಯು ಇಮ್ಯಾಜಿನ್ ರೋಟರಿ ಎಂಬ ಕಲ್ಪನೆಯನ್ನು ಕೊಟ್ಟಿದ್ದು ಸಮಾನ ಶಿಕ್ಷಣ,…

Read More

ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್!

ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್! ಹಾವೇರಿ : ಜೀವನ ನಡೆಸೋಕೆ ಕೆಲವರು ಕಳ್ಳತನದ ಕೆಟ್ಟ ದಾರಿ ತುಳಿದಿರೋದನ್ನ ನೋಡಿರುತ್ತೇವೆ. ಆದ್ರೆ ಇಲ್ಲೊಬ್ಬ ಕಳ್ಳ, ವೇಶ್ಯೆಯರೊಂದಿಗೆ ಸರಸ ಸಲ್ಲಾಪ ನಡೆಸಲು ದುಡ್ಡು ಬೇಕು ಅಂತ ಕಳ್ಳತನದ ಹಾದಿ ತುಳಿದಿರುವ ವಿಚಿತ್ರ ಘಟನೆ ನಡೆದಿದೆ. ಸಧ್ಯ ಈ ಕಿಲಾಡಿ ಕಳ್ಳ ಪೊಲೀಸರ ಕೈಗೆ ತಗಲಾಕೊಂಡಿದ್ದಾರೆ. ಹೌದು, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೇಲೆ ನಿವಾಸಿ…

Read More

ಶಾಂತ ರೀತಿಯಲ್ಲಿದ್ದ ಕರ್ನಾಟಕದಲ್ಲಿ ಗಲಭೆ,ದೊಂಬಿ ಎಬ್ಬಿಸುವ ಷಡ್ಯಂತ್ರ ನಡೆಯುತ್ತಿದೆ,ಇದು ಖಂಡನಾರ್ಹ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

 ಶಾಂತಿಯಲ್ಲಿದ್ದ ರಾಜ್ಯದಲ್ಲಿ ಕೊಲೆ, ದೊಂಬಿ ಮೂಲಕ ಗಲಭೆ ನಿರ್ಮಾಣದ ಷಡ್ಯಂತ್ರ ನಡೆಯುತ್ತಿದೆ. ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದ ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಒಬ್ಬ ಮೌಲ್ವಿ ಪೊಲೀಸ್ ಜೀಪ್ ಮೇಲೆ ನಿಂತು ಪ್ರಚೋದನೆ ಕೊಡುತ್ತಾನೆ.ತಲೆಗಳನ್ನು ಕತ್ತರಿಸಿ, ರುಂಡಗಳನ್ನು ಬೇರೆ ಮಾಡಿ ಎಂದು ಪ್ರಚೋಧಿಸುವ ಹೇಳಿಕೆ‌ ಕೊಡುತ್ತಾರೆ. ಕಾಂಗ್ರೆಸ್ ನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಮೌಲ್ವಿ ಪಕ್ಕದಲ್ಲಿ ನಿಂತು ಕಲ್ಲು ಹೊಡಿಯುವುದನ್ನು ನೋಡುತ್ತಿದ್ದಾರೆ. ಆಸ್ಪತ್ರೆ,…

Read More

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಪಕ್ಕದ ಊರು ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು…

Read More

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ – ಸಹೋದರರಿಬ್ಬರು ಸ್ಥಳದಲ್ಲಿಯೇ ಸಾವು|accident

ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಬಳಿ ನಡೆದಿದೆ. ಸಾಗರದ ರಾಮನಗರದ ವೆಲ್ಡಿಂಗ್ ಕೆಲಸಗಾರ ಸುಹೇಲ್ (27),ಸಯ್ಯದ್ ಆಫ್ರಿದ್(ಪಿಂಟು),(21) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಮದುವೆ ಕಾರ್ಯಕ್ರಮಕ್ಕೆಂದು ಉಳವಿ ಗ್ರಾಮಕ್ಕೆ ಹೋಗುತ್ತಿದ್ದಾಗ ಮಾರುತಿ ವ್ಯಾಗನಾರ್ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇಬ್ಬರು ಸಹೋದರರ ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Read More

SHIVAMOGGA | ಪೆಸಿಟ್ ಕಾಲೇಜು ಬಳಿ KSRTC ಬಸ್–ಬೈಕ್ ಅಪಘಾತ

SHIVAMOGGA | KSRTC bus-bike accident near Pesit College SHIVAMOGGA | ಪೆಸಿಟ್ ಕಾಲೇಜು ಬಳಿ KSRTC ಬಸ್–ಬೈಕ್ ಅಪಘಾತ SHIVAMOGGA | KSRTC bus-bike accident near Pesit College ಶಿವಮೊಗ್ಗ: ನಗರದ ಪೆಸಿಟ್ ಕಾಲೇಜು ಸಮೀಪ KSRTC ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸಿರಿಗೆರೆ ಮೂಲದ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಇಂದು ಮಧ್ಯಾಹ್ನದಿಂದ ಸಂಜೆವರೆಗೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸುಮಾರು 8ರಿಂದ 10…

Read More

ಭಾರಿ ಮಳೆಯ ಹಿನ್ನಲೆ – ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಣೆ|Rain

ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಡಿಡಿಪಿಐ ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ರವರ ಸೂಚನೆ ಮೇರೆಗೆ ಜು. 24 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.  ಈ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ…

Read More