Headlines

ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯ – ಕಿಮ್ಮನೆ ರತ್ನಾಕರ್|Press Day

ಹೊಸನಗರ,ಜು.೧೯: ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯವಾಗಿದೆ. ಹಿಂಸೆಯನ್ನು ಪ್ರಚೋದಿಸುವ ವರದಿಗಾರಿಕೆಯಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕವು ಇಲ್ಲಿನ ಈಡಿಗರ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ,ಮಾದಕ ವ್ಯಸನ ಜಾಗೃತ ಅಭಿಯಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರು ರಂಜನೆಗಿಂತ ವಾಸ್ತವಕ್ಕೆ ಆದ್ಯತೆ ನೀಡಬೇಕು. ಪತ್ರಿಕೆ ಒಮ್ಮೆ ಮುದ್ರಣಗೊಂಡು ಹೊರಬಿದ್ದರೆ ಅದು ಸಾರ್ವಜನಿಕ ಸ್ವತ್ತಾಗುತ್ತದೆ…

Read More

ಬ್ಯಾಂಕ್ ಉದ್ಯೋಗಿಗೆ ಆನ್ ಲೈನ್ ನಲ್ಲಿ ಲಕ್ಷಾಂತರ ರೂ ವಂಚನೆ – ದೂರು ದಾಖಲು

ಬ್ಯಾಂಕ್  ಉದ್ಯೋಗಿಗೆ  ಲಕ್ಷಾಂತರ ರೂ ವಂಚಿಸಿದ ಆನ್ ಲೈನ್ ಖದೀಮರು ಶಿವಮೊಗ್ಗ: ಪ್ರತಿಷ್ಠಿತ ಟ್ರೇಡಿಂಗ್‌ ಕಂಪನಿಯೊಂದರ ಹೆಸರು ದುರ್ಬಳಕೆ ಮಾಡಿಕೊಂಡು ಬ್ಯಾಂಕ್‌ ಉದ್ಯೋಗಿಯೊಬ್ಬರಿಗೆ (ಹೆಸರು ಗೌಪ್ಯ) ಆನ್‌ಲೈನ್‌ ವಂಚಕರು 11.26 ಲಕ್ಷ ರೂ. ವಂಚಿಸಿದ್ದಾರೆ. ಬ್ಯಾಂಕ್‌ ಒಂದರ ಮಹಿಳಾ ಉದ್ಯೋಗಿಯ ಮೊಬೈಲ್‌ಗೆ ಪ್ರತಿಷ್ಠಿತ ಷೇರು ವಹಿವಾಟು ಸಂಸ್ಥೆಯೊಂದರ ಹೆಸರಿನಲ್ಲಿ ಮೆಸೇಜ್‌ ಬಂದಿತ್ತು. ಪರಿಶೀಲಿಸಿದ ಬ್ಯಾಂಕ್‌ ಉದ್ಯೋಗಿ ಹಣ ಹೂಡಿಕೆಗೆ ಒಪ್ಪಿಗೆ ಸೂಚಿಸಿದ್ದರಿಂದ ಅವರ ಮೊಬೈಲ್‌ಗೆ ಲಿಂಕ್‌ ಕಳುಹಿಸಲಾಗಿತ್ತು. ಆ ಲಿಂಕ್‌ ಬಳಸಿ ಮೊಬೈಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು…

Read More

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಆರೋಗ್ಯ ಮತ್ತು ರಾಜಕೀಯವಾಗಿ ಇನ್ನೂ ಹೆಚ್ಚಿನ ಶಕ್ತಿ ಕರುಣಿಸಲೆಂದು ವಿನಾಯಕ ಸ್ವಾಮಿಯಲ್ಲಿ ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಸದಸ್ಯರು ,ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು. 81ನೇ ವಸಂತಕ್ಕೆ ಕಾಲಿಟ್ಟ…

Read More

ಶಿವಮೊಗ್ಗ ಗೃಹರಕ್ಷಕದಳದ ನೂತನ ಸದಸ್ಯರ ನೋಂದಣಿಗೆ ಅರ್ಜಿ ಆಹ್ವಾನ ।ರಿಪ್ಪನ್ ಪೇಟೆಯಲ್ಲಿ 12 ಹೊಸನಗರದಲ್ಲಿ 10 ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ |Home guards

ಜಿಲ್ಲೆಯ ಗೃಹ ರಕ್ಷಕ ದಳದ ಘಟಕದಲ್ಲಿ ಖಾಲಿ ಇರುವ ಒಟ್ಟು 240 ಗೃಹರಕ್ಷಕ ಸದಸ್ಯರ ಸ್ಥಾನಗಳನ್ನು ನಿಷ್ಕಾಮ ಸೇವೆ ಧ್ಯೇಯದ ಅಡಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ 53, ಭದ್ರಾವತಿ 22, ತೀರ್ಥಹಳ್ಳಿ 10, ಸಾಗರ 20, ಹೊಸನಗರ 10, ಶಿಕಾರಿಪುರ 20, ಜೋಗ 05, ಸೊರಬ 30, ಶಿರಾಳಕೊಪ್ಪ 15, ಹೊಳೆಹೊನ್ನೂರು 20, ರಿಪ್ಪನ್‍ಪೇಟೆ 12, ಆನಂದಪುರಂ 10, ಹಾರನಹಳ್ಳಿ 10 ಒಟ್ಟು 240 ಗೃಹ ರಕ್ಷಕ ದಳದ ನೂತನ…

Read More

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು ಶಿವಮೊಗ್ಗ ಜಿಲ್ಲೆಯ ಸಾಗರದ ಬಳಿಯಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ , ಇನ್ನೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದು , ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಭೀಕರ ಅಪಘಾತ ನಡೆದಿದ್ದು ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಮೃತ ಪಟ್ಟಿರುವ…

Read More

ಹುಂಚ : ಏಕಾಏಕಿ ಮನೆ ತೆರವು ಪ್ರಕರಣ – ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ದ ಕಿಮ್ಮನೆ ನೇತ್ರತ್ವದಲ್ಲಿ ನಾಳೆ ಪಾದಯಾತ್ರೆ ಮತ್ತು ಪ್ರತಿಭಟನೆ

ಹುಂಚ : ದಿನಾಂಕ 6-09-2022ರಂದು ಮಂಗಳವಾರ  ಹುಂಚ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮ ಒತ್ತುವರಿ ತೆರವು ನೆಪದಲ್ಲಿ ಬಡವರ ಜೀವನ ಜತೆ ಆಟವಾಡುತ್ತಿರುವ ಸರ್ಕಾರದ ವಿರುದ್ಧ  ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಆಧಾರವಿಲ್ಲದೆ ಹುಂಚ ಗ್ರಾಪಂ ವ್ಯಾಪ್ತಿಯ ಹಡ್ಲುಬೈಲ್ ನಿವಾಸಿ ಜೀವನ್ ಅವರ ಮನೆ ನೆಲಸಮಗೊಳಿಸಿದ ಕಂದಾಯ ಅಧಿಕಾರಿಗಳ ವಿರುದ್ಧ ದಿನಾಂಕ  6-9-2022ರಂದು ಮಂಗಳವಾರ ಬೆಳಿಗ್ಗೆ 9ಗಂಟೆಗೆ ಸರಿಯಾಗಿ ಹಡ್ಲುಬೈಲ್ ಜೀವನ್ ಅವರ ಮನೆಯಿಂದ ಪಾದಯಾತ್ರೆ ಆರಂಭವಾಗಿ ಹುಂಚ…

Read More

ಭಾರಿ ಮಳೆಗೆ ಧರೆ ಕುಸಿದು ನೆಲಕ್ಕುರುಳಿದ 30 ಕ್ಕೂ ಹೆಚ್ಚು ಅಡಿಕೆ ಮರ

ಭಾರಿ ಮಳೆಗೆ ಧರೆ ಕುಸಿದು ನೆಲಕ್ಕುರುಳಿದ 30 ಕ್ಕೂ ಹೆಚ್ಚು ಅಡಿಕೆ ಮರ ತೀರ್ಥಹಳ್ಳಿ: ತಾಲೂಕಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಮಳೆಯಿಂದ ಧರೆ ಕುಸಿದು ಅಡಿಕೆ ಮರ ಬಿದ್ದ ಘಟನೆ ತೂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ತೂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಮೂಡ್ಲು ಎಂಬ ಗ್ರಾಮದ ಮಂಜುನಾಥ್ ಶೆಟ್ಟಿ ಎಂಬುವರ ತೋಟದ ಹಿಂಭಾಗ ಹಳ್ಳದ ನೀರು ಹರಿಯುತ್ತಿದ್ದು ಹಳ್ಳದ ನೀರಿನ ರಭಸಕ್ಕೆ ಧರೆ ಕುಸಿದು 30 ಕ್ಕೂ ಹೆಚ್ಚು ಅಡಿಕೆ ಮರ ನೆಲಕ್ಕೆ ಉರುಳಿದ್ದವು. ವಿಷಯ ತಿಳಿಯುತ್ತಿದ್ದಂತೆ ತಾಲೂಕು…

Read More

ರಿಪ್ಪನ್‌ಪೇಟೆಯ ನೂತನ ಪಿಎಸ್ ಐ ಆಗಿ ಪ್ರವೀಣ್ ಎಸ್ ಪಿ – ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿದ್ದ ಇವರು ಎಲ್ಲಿನವರೂ ಗೊತ್ತಾ…????

ರಿಪ್ಪನಪೇಟೆ : ರಾಜ್ಯ ಸರ್ಕಾರದ ಸಾಮಾನ್ಯ ವರ್ಗಾವಣೆ ಅನ್ವಯ ರಾಜ್ಯಾದ್ಯಂತ 50 ಪಿಎಸ್ಐ ಗಳನ್ನು ವರ್ಗಾವಣೆ ಗೊಳಿಸಿ ಆದೇಶ ಹೊರಡಿಸಿದೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ನೂತನವಾಗಿ ವರ್ಗಾವಣೆಯಾಗಿರುವ ಪ್ರವೀಣ್ ಎಸ್ ಪಿ ರವರು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿದ್ದಾರೆ. .         -ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಪಿಎಸ್ ಐ ಆಗಿ ಕಾರ್ಯ…

Read More

ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ | ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ; ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|koduru

ರಿಪ್ಪನ್‌ಪೇಟೆ : ಸಾರ್ವಜನಿಕ ಸಮಸ್ಯೆ ಪರಿಹರಿಸಲು‌ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದು ಹೊಸನಗರ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ತಿಳಿಸಿದರು. ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿಂದು ಆಯೋಜಿಸಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು. ಹಳ್ಳಿ ಜನರ ಕಷ್ಟ ಸುಖ ಮೇಲ್ಮಟ್ಟದ ಅಧಿಕಾರಿಗಳಿಗೆ ಗೊತ್ತಾಗೋದು ಇಲ್ಲಿ ಬಂದಾಗ ಮಾತ್ರ. ಹೀಗಾಗಿ ರಾಜ್ಯ…

Read More

ಸೊರಬ ಪುರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಜ್ಜು:

ಸೊರಬ: ಅಚ್ಚರಿಯ ಬೆಳವಣಿಗೆಯಲ್ಲಿ ಜಿಲ್ಲೆಯ ಸೊರಬ ಪುರಸಭೆ ಸದಸ್ಯರು ಪುರಸಭೆಯ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಅವಕಾಶ ನೀಡುವಂತೆ ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮೆಟ್ಟಿಲೇರಿದ್ದಾರೆ. ಸೊರಬ ಪುರಸಭ ಅಧ್ಯಕ್ಷ ಎಂ.ಡಿ.ಉಮೇಶ್ ಅವರ ನಡುವಳಿಕೆಯಿಂದ ಬೇಸತ್ತು ಇಂದು ಪುರಸಭೆಯ 11 ಜನ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿಯ ಬಾಗಿಲು ತಟ್ಟಿದ್ದಾರೆ. 12 ಜನ ಸದಸ್ಯರಿರುವ ಸೊರಬ ಪುರಸಭೆಯಲ್ಲಿ 6 ಜನ ಸದಸ್ಯರು ಬಿಜೆಪಿ ಪಕ್ಷದ ಸದಸ್ಯರಿದ್ದು 4 ಜನ ಕಾಂಗ್ರೆಸ್, ಒಬ್ಬರು ಜೆಡಿಎಸ್ ಒಬ್ಬರು ಪಕ್ಷೇತರರಿದ್ದಾರೆ. ವಿಪಕ್ಷ ನಾಯಕ…

Read More