ತೀರ್ಥಹಳ್ಳಿಯಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಕಳ್ಳತನ :
ತೀರ್ಥಹಳ್ಳಿ : ಹಾಡುಹಗಲೇ ಮನೆಯ ಬೀಗ ಮುರಿದು ಸುಮಾರು ನಾಲ್ಕು ಲಕ್ಷಕ್ಕೂ ಅಧಿಕ ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣ ಹಾಗೂ ನಗದು ಹಣವನ್ನು ದೋಚಿದ ಘಟನೆ ತಾಲೂಕಿನ ಸಾಲೂರು ಗ್ರಾಪಂ ವ್ಯಾಪ್ತಿಯ ಮಾರಿಗುಣಿ ಸಮೀಪದ ಹೊನ್ನೆಕಟ್ಟೆಯ ಮಂಜುನಾಥ ಎಂಬುವವರ ಮನೆಯಲ್ಲಿ ಮಂಗಳವಾರ ನೆಡೆದಿದೆ. ಈ ಘಟನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳು ಸೇರಿದಂತೆ 7 ಸಾವಿರ ನಗದು ಹಣ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ. ಇವರ ಮನೆಯ ಕಾಂಪೌಂಡ್ ಗೆ ಹೊಂದಿಕೊಂಡಂತೆ ಎರಡೂ ಭಾಗದಲ್ಲಿ ಅಕ್ಕಪಕ್ಕ…