ರಿಪ್ಪನ್ಪೇಟೆ ಪೊಲೀಸರ ಮಿಂಚಿನ ಕಾರ್ಯಾಚರಣೆ : ಹದಿನೈದು ದಿನಗಳೊಳಗೆ ಮನೆ ಕಳ್ಳತನದ ಅರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು|theft
ರಿಪ್ಪನ್ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯಲ್ಲಿ 15 ದಿನಗಳ ಹಿಂದೆ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಿಂಚಿನ ಕಾರ್ಯಾಚರಣೆಯ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುದರ್ಶನ ಕೆ.ಎನ್ 23 ವರ್ಷ, ಆದರ್ಶ ಎಸ್ 23 ವರ್ಷ, ಮಧುಸೂದನ್ 30 ವರ್ಷ ಇವರನ್ನು ಬಂಧಿಸಿ ಐಪಿಸಿ ಸೆಕ್ಷನ್ 457.380 ರಡಿಯಲ್ಲಿ ಕೇಸ್ ದಾಖಲಿಸಿ ಆರೋಪಿತರಿಂದ ಕಳುವಾದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ತಿಂಗಳು 8 ರಂದು ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ…