ರಿಪ್ಪನ್ಪೇಟೆ : ನಾಯಿ ದಾಳಿ – 25 ಕುರಿಗಳ ಬಲಿ
ರಿಪ್ಪನ್ಪೇಟೆ : ಇಲ್ಲಿನ ಕೆಂಚನಾಲ,ಅರಸಾಳು ವ್ಯಾಪ್ತಿಯಲ್ಲಿ ಇತ್ತೀಚಿಗೆ ಚಿರತೆಯಿಂದ ಆತಂಕಕ್ಕೊಳಗಾಗಿರುವ ರೈತರಿಗೆ ಈಗ ನಾಯಿಗಳ ಕಾಟದಿಂದಾಗಿ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ. ಅರಸಾಳು ಸಮೀಪ ಮಾಣಿಕೆರೆ ಗ್ರಾಮದಲ್ಲಿ ಬುಧವಾರ ನಾಯಿಗಳ ದಾಳಿಗೆ ವೇಲಾಯದನ್ ಅವರಿಗೆ ಸೇರಿದ ಸುಮಾರು 25 ಕುರಿಗಳು ಬಲಿಯಾಗಿವೆ. ಎಂದಿನಂತೆ ವೇಲಾಯದನ್ ಮಾಣಿಕೆರೆ ಗ್ರಾಮದಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದಾರೆ. ಆಗ ಮನೆಯ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಗಳ ಹಿಂಡು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಲು ಆರಂಭಿಸಿವೆ. ವಿಷಯ ತಿಳಿದು ಸ್ಥಳಕ್ಕೆ ಹೋಗುವ…


