Headlines

ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಕಾರು ನಡುವೆ ಡಿಕ್ಕಿ – 9 ಮಂದಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್ಸು- ಕಾರು ಡಿಕ್ಕಿ, 9 ಮಂದಿಗೆ ಗಾಯ ಶಿವಮೊಗ್ಗದಿಂದ ತರೀಕೆರೆಗೆ ತೆರಳುತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿವೆ. ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿವೆ. ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಶಿವಮೊಗ್ಗದಿಂದ ತರೀಕೆರೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ….

Read More

ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕನೆಕ್ಷನ್ ಇಲ್ಲದೇ ನೇತಾಡುತ್ತಿರುವ ಸಿಸಿ ಕ್ಯಾಮೆರಾಗಳು : ಕಾಟಾಚಾರಕ್ಕೆ ಹಾಕಿದ್ದೀರಾ ಅಧಿಕಾರಿಗಳೇ ????

ರಿಪ್ಪನ್ ಪೇಟೆ: ನಾಲ್ಕೂ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಿಪ್ಪನ್ ಪೇಟೆ ವಿನಾಯಕ ವೃತ್ತದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ  ಸಿಸಿ ಕ್ಯಾಮೆರಾಗಳು ಕನೆಕ್ಷನ್ ಇಲ್ಲದೇ ಕ್ಯಾಮೆರಾಗಳು ವೈರ್ ಗಳ ಜೊತೆ ನೇತಾಡುತ್ತಿವೆ. ಇದನ್ನು ನೋಡಿದರೆ “ನೇತಾಡುತ್ತಿರುವೆವೋ ನಾವು ಜೋತಾಡುತ್ತಿರುವೆವು” ಎಂದು ಯುಗಳ ಗೀತೆ ಹಾಡುತ್ತಿರುವಂತೆ ಭಾಸವಾಗುತ್ತದೆ !!! ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯು ನಾಲ್ಕು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವಂತಹ ಪಟ್ಟಣವಾಗಿದೆ.ಇಲ್ಲಿನ ವಿನಾಯಕ ವೃತ್ತ ದಲ್ಲಿ ಅಧಿಕಾರಿಗಳು ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ ಆದರೆ ಅದೀಗ ಸಂಪೂರ್ಣವಾಗಿ…

Read More

ತೀರ್ಥಹಳ್ಳಿ : ಮುಸ್ಲಿಂ ಮಹಿಳೆಯರಂತೆ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ತಿರುಗಾಡುತಿದ್ದ ಪುರುಷ ವಶಕ್ಕೆ|Thirthahalli

ತೀರ್ಥಹಳ್ಳಿ : ಪಟ್ಟಣದ ಕುವೆಂಪು ವೃತ್ತದಲ್ಲಿ ಮಹಿಳೆಯರಂತೆ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಮತ್ತು  ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಈತನ ಹೆಸರು ರಾಜಾ ಎನ್ನಲಾಗಿದ್ದು ಸುಮಾರು 35 ವರ್ಷ ವಯಸ್ಸಿನವನು. ತಾನು ರಾಯಚೂರಿನಿಂದ ಬಂದವನು ಎಂದು  ಪೋಲಿಸರ ಮುಂದೆ ಹೇಳಿಕೊಂಡಿದ್ದಾನೆ.  ಮಂಗಳವಾರ ಬೆಳಿಗ್ಗೆ ಕುವೆಂಪು ವೃತ್ತದಲ್ಲಿ ಬುರ್ಖಾ ಧರಿಸಿದ್ದ ಈತನ ವೇಷ ಭೂಷಣ ವರ್ತನೆಯನ್ನು ನೋಡಿ ಸಾರ್ವಜನಿಕರು ಅನುಮಾನದಿಂದ ಪೋಲೀಸರಿಗೆ ಮಾಹಿತಿಯನ್ನು ನೀಡಿ ಆತನನ್ನು ಪೊಲೀಸರಿಗೊಪ್ಪಿಸಿದ್ದರು. ರಾಜಾನನ್ನು ಠಾಣೆಗೆ ಕರೆದೊಯ್ದ ಪೋಲೀಸರು…

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಗಾಯಾಳು ಮೆಗ್ಗಾನ್ ಗೆ ದಾಖಲು|crime

ರಿಪ್ಪನ್‌ಪೇಟೆ : ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ & ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದಿದೆ. ಪಟ್ಟಣದ ಗಾಂಧಿನಗರದ ನಿವಾಸಿ ಮಂಜುನಾಥ್ (27) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ. ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ವೊಂದರ ಮುಂಂಭಾಗದಲ್ಲಿ ಕ್ಷುಲ್ಲಕ ಕಾರಣಕ್ಕೆ ತೀರ್ಥಹಳ್ಳಿ ರಸ್ತೆ ನಿವಾಸಿ ಪ್ರವೀಣ್ ಎಂಬಾತ ಮಂಜುನಾಥ್ ಮೇಲೆ ಏಕಾಏಕಿ ಬಿಯರ್ ಬಾಟಲಿಯಲ್ಲಿ ತಲೆಗೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಮಂಜುನಾಥ್ ನನ್ನು ಸ್ಥಳೀಯರು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ…

Read More

ನಾಳೆ (03-03-2023) ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಛತ್ರಪತಿ ಶಿವಾಜಿ ಜಯಂತ್ಯೋತ್ಸವ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಮರಾಠಾ ಸಮಾಜದ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಮರಾಠ ಸಂಘ ಹಾಗೂ ಕ್ಷತ್ರಿಯ ಮರಾಠ ಯುವ ವೇದಿಕೆ ವತಿಯಿಂದ ನಾಳೆ 03/03/2023 ರಂದು ಸಂಜೆ 4.30 ಗಂಟೆಗೆ ಅದ್ದೂರಿಯಾಗಿ ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ , ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ,ಮಾಜಿ…

Read More

ಬಿದರಹಳ್ಳಿ ಕುಮಧ್ವತಿ ನದಿಯಲ್ಲಿ ಮೀನುಗಳ ಮಾರಣಹೋಮ : ನದಿಯ ಒಡಲಿಗೆ ವಿಷ ಬೆರೆಸಿದ ಪಾಪಿಗಳು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಿದರಹಳ್ಳಿ ಗ್ರಾಮದ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ವಿಷ ಬೆರೆಸಿ ಮೀನು ಸೇರಿದಂತೆ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ನದಿಯ ನೀರಿಗೆ  ಮೈಲುತುತ್ತ ವಿಷ ಬೆರೆಸಿ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿದ್ದಾರೆ.ಕುಮದ್ವತಿ ನದಿಯಲ್ಲಿ ಬೇಸಿಗೆ ಕಾರಣದಿಂದ ನೀರು ಇಂಗಿ ಹೋಗಿದ್ದು ಅಲ್ಲಲ್ಲಿ ಕೆಲ ಹೊಂಡದಲ್ಲಿ ಪ್ರಾಣಿ ಪ್ರಭೇದಗಳು ಜೀವಿಸುತ್ತವೆ.ಇದನ್ನೇ ಗುರಿಯಾಗಿಸಿಕೊಂಡು ಕಿಡಿಗೇಡಿಗಳು ವಿಷಯುಕ್ತ “ಮೈಲುತುತ್ತ” ವನ್ನು ಆ ನೀರಿಗೆ ಬೆರೆಸಿ ಲಕ್ಷಾಂತರ…

Read More

ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿ 10 ಲಕ್ಷ ರೂ. ಚೆಕ್ ನೀಡಿದ ಬಿಜೆಪಿ ನಾಯಕರು :

ಶಿವಮೊಗ್ಗ ನಗರದಲ್ಲಿ ಭಾನುವಾರ (ಫೆ.20ರಂದು) ಬರ್ಬರವಾಗಿ ಹತ್ಯೆಯಾಗಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​​, ಉಪಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂಧರ್ಭದಲ್ಲಿ ಬಿಜೆಪಿ ಪಕ್ಷದ ವತಿಯಿಂದ10 ಲಕ್ಷ ರೂ. ಚೆಕ್​ಅನ್ನು ಹರ್ಷ ಪೋಷಕರಿಗೆ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಹರ್ಷ ಕಗ್ಗೊಲೆ ಆಗುತ್ತೆ ಅಂತ ಕಲ್ಪನೆಯೂ ಇರಲಿಲ್ಲ. ಸರ್ಕಾರ ಯಾರು ಗೂಂಡಾಗಳಿದ್ದಾರೆ ಅವರನ್ನ ಬಂಧನ ಮಾಡಿದೆ….

Read More

4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ

After 4 years, elections for Zilla Panchayats and TPAs ​​will finally be held in April. 4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ After 4 years, elections for Zilla Panchayats and TPAs will finally be held in April. ರಾಜ್ಯದ ಗ್ರಾಮ ಪಂಚಾಯತ್ ಸೇರಿದಂತೆ 6,500ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳ ಚುನಾವಣೆ ಏಪ್ರಿಲ್ ನಲ್ಲಿ: ಸಚಿವ ಸಂಪುಟ ತೀರ್ಮಾನ After 4…

Read More

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ -Grama One

ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಯು ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ…

Read More

ಸರ್ಕಾರಿ ಜಮೀನು ಒತ್ತುವರಿ ತೆರವು

ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು  ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…

Read More
Exit mobile version