ಕಾರು ಅಪಘಾತ – ಹೊಸನಗರ ಕಾಂಗ್ರೆಸ್ ಮುಖಂಡ ನಾಗರಾಜ್ ಗೌಡ ಸ್ಥಳದಲ್ಲೇ ಸಾವು|accident
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಕೋಡೂರು ಸಮೀಪದ ತುರುಕೋಡು ನಾಗರಾಜ್ ಗೌಡ (55) ಎಂದು ಗುರುತಿಸಲಾಗಿದೆ. ಶಿಕಾರಿಪುರದಿಂದ ವಾಪಾಸ್ ಆಗುವ ವೇಳೆ ಇಂದು ಮಧ್ಯಾಹ್ನ ಗೌತಮಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ನಾಗರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಹೊಸನಗರ ತಾಲೂಕಿನ ಮುಂಬಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯ…