Headlines

ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.!

ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.! ಹೊಸನಗರ : ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯ ಪಿಎಸೈ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ಕಟ್ಟಿನಹೊಳೆ ನಿವಾಸಿ ಶರತ್ ಎಂಬಾತನನ್ನು ಬಂಧಿಸಿ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ಬೈಕ್ ನ್ನು ವಶಕ್ಕೆ ಪಡೆಯಲಾಗಿದೆ….

Read More

RIPPONPETE | ನೆವಟೂರಿನಲ್ಲಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು

A 74-year-old man, M. Bhadrachar from Nevaturu, died after being hit by a train near Ripponpet on Saturday afternoon. Police visited the spot and further investigation is underway. ರಿಪ್ಪನ್‌ಪೇಟೆ: ಸಮೀಪದ ನೆವಟೂರು ಗ್ರಾಮದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ದುರ್ಮರಣಕ್ಕೀಡಾದ ದುರ್ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ನೆವಟೂರು ನಿವಾಸಿ ಎಂ. ಭದ್ರಾಚಾರ್ (74) ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ ಸುಮಾರು 3.30 ಗಂಟೆಯ ವೇಳೆಗೆ ರೈಲು…

Read More

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಭದ್ರಾವತಿ , ಜ. 4: ಮನೆಗಳ್ಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಳೆಹೊನ್ನೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ತಿಮ್ಲಾಪುರದ ಕೊರಚರಹಟ್ಟಿ ಗ್ರಾಮದ ನಿವಾಸಿಗಳಾದ ದರ್ಶನ್ (21), ಧನಂಜಯ (24) ಹಾಗೂ ರವಿ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 28-12-2024 ರಂದು ಸದರಿ ಆರೋಪಿಗಳನ್ನು…

Read More

ರಿಪ್ಪನ್ ಪೇಟೆ ಪಟ್ಟಣದಲ್ಲಿ ರಸ್ತೆ ಅಗಲೀಕರಣ : ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಹರತಾಳು ಹಾಲಪ್ಪ ಚರ್ಚೆ

ರಿಪ್ಪನ್ ಪೇಟೆ : ಪಟ್ಟಣದ ರಸ್ತೆಗಳ  ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಇಂದು ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪರವರು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈಗಾಗಲೇ ಪಟ್ಟಣದ ರಸ್ತೆಗಳ ಅಗಲೀಕರಣಕ್ಕೆ 6ಕೋಟಿ ಹಣ ಬಿಡುಗಡೆಯಾಗಿದ್ದು ಇನ್ನೂ ಹೆಚ್ಚಿನ 2ಕೋಟಿ ಅನುದಾನ ನೀಡುವಂತೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಹಾಗೆಯೇ ಸಾಗರದ ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಶಾಸಕರು ಇದೇ ಸಂದರ್ಭದಲ್ಲಿ ಚರ್ಚೆ ನಡೆಸಿದರು.

Read More

ಬೈಕ್ ರಿಪೇರಿಗೆಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ – ಸುಳಿವು ಪತ್ತೆಗೆ ಮನವಿ | Person missing

ಬೈಕ್ ರಿಪೇರಿಗೆಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ – ಸುಳಿವು ಪತ್ತೆಗೆ ಮನವಿ | Person missing ಕೋಣಂದೂರು : ಬೈಕ್ ರಿಪೇರಿ ಮಾಡಿಸಿಕೊಂಡು ಬರುತ್ತೇನೆ ಎಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಅಕ್ಲಾಪುರ ನಿವಾಸಿ ರಾಘು ಶೆಟ್ಟಿಗಾರ್ (41) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾನೆ. ಜುಲೈ 15 ರ ಬೆಳಿಗ್ಗೆ ಅಕ್ಲಾಪುರದಲ್ಲಿರುವ ಮನೆಯಿಂದ ಬೈಕ್ ರಿಪೇರಿ ಮಾಡಿಸಿಕೊಂಡು ಬರುತ್ತೇನೆ ಎಂದು ಹೊರಹೋದ ವ್ಯಕ್ತಿ ನಾಪತ್ತೆಯಾಗಿದ್ದು ಆತನ ಬೈಕ್…

Read More

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಒಂದು ವರ್ಷದ ಹೆಣ್ಣು ಮಗುವನ್ನು ನೆಲಕ್ಕೆ ಅಪ್ಪಳಿಸಿ ಸಾಯಿಸಲು ಮುಂದಾದನಾ ಪಾಪಿ ತಂದೆ..!!?? ರಿಪ್ಪನ್‌ಪೇಟೆ : ಗಂಡು ಮಗು ಆಗಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪಟ್ಟಣದ ಸಮೀಪದ ಅರಸಾಳು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅರಸಾಳು ಗ್ರಾಮದ ಕಿರಣ್ ಡಿಸೋಜಾ , ಅತ್ತೆ ಸೂರಿನ್ ಡಿಸೋಜಾ , ನಾದಿನಿ ನಿರ್ಮಲ ಮತ್ತು…

Read More

ವಿದ್ಯಾರ್ಥಿಗಳಿಗೆ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ :

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-19 ರಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಷನ್ ವತಿಯಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ. 24 ಸಾವಿರಗಳು, 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರೂ. 30 ಸಾವಿರಗಳು, ವೃತ್ತಿಪರ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರೂ. 60 ಸಾವಿರಗಳು ಹಾಗೂ ಸಾಮಾನ್ಯ ವೃತ್ತಿಪರ ಪದವಿಪೂರ್ವ ವಿದ್ಯಾರ್ಥಿಗಳಿಗೆ ರೂ. 36…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ, ಶುಶ್ರೂಷಕಿಯರಿಗೆ ವೈದ್ಯರಿಂದ ಮಾನಸಿಕ ಕಿರುಕುಳ : ಗ್ರಾಮ ಪಂಚಾಯಿತಿಗೆ ದೂರು……!!!!!

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ  ಡಾ. ಆಂಜನೇಯರವರು ನಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಶುಶ್ರೂಷಕಿಯರು ಗ್ರಾಮ ಪಂಚಾಯತ್ ನ ಆರೋಗ್ಯ ರಕ್ಷಾ ಸಮಿತಿಗೆ ದೂರು ನೀಡಿರುವ ಘಟನೆ ಇಂದು ನಡೆದಿದೆ. ಆಸ್ಪತ್ರೆಯ ವೈದ್ಯರು ಹೆಚ್ಚುವರಿ ಕೆಲಸ ನೀಡಿದಾಗ ವಿರೋದ ವ್ಯಕ್ತಪಡಿಸಿದರೆ ಏಕವಚನದಲ್ಲಿ ನಿಂದಿಸುವುದಲ್ಲದೇ ಸಾರ್ವಜನಿಕರ ಸಮ್ಮುಖದಲ್ಲಿ ಅಗೌರವ ಸೂಚಕ ಪದದಲ್ಲಿ ನಿಂದಿಸಿ,ಸಂಬಳ ಹಾಜರಾತಿಗೆ ಸಹಿ ಹಾಕುವುದಿಲ್ಲ ಎಂದು ಬೆದರಿಕೆ ಹಾಕುವ ಮೂಲಕ ಮಾನಸಿಕ ಕಿರುಕುಳ ನೀಡುತಿದ್ದಾರೆ. ಆದ್ದರಿಂದ ಗ್ರಾಮ…

Read More

ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !!

ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !! ತೀರ್ಥಹಳ್ಳಿ : ನಿಂತಿದ್ದ ಆಟೋವೊಂದಕ್ಕೆ ಸುಜುಕಿ ಕ್ಯಾರಿ ಶಾಮಿಯಾನ ವಾಹನವೊಂದು ಅತೀ ವೇಗವಾಗಿ ಬಂದು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಘಟನೆ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಸಂಜೆ ಮೇಲಿನಕುರುವಳ್ಳಿಯ ರೇಷ್ಮೆ ಫಾರಂ ರಸ್ತೆಯ ಎದುರು ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಕಟ್ಟೆಹಕ್ಲು ಭಾಗದ ಶಾಮಿಯಾನ ಹಾಕುವ ಗಾಡಿ ಅತ್ಯಂತ ವೇಗವಾಗಿ ಬಂದಿದೆ. ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಆಟೋವೊಂದಕ್ಕೆ ಡಿಕ್ಕಿ ಹೊಡೆದು ಚರಂಡಿಗೆ…

Read More

ಅರಸಾಳು ಹುಸೇನ್ ಸಾಬ್ ನಿಧನ

ಅರಸಾಳು ಹುಸೇನ್ ಸಾಬ್ ನಿಧನ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಹುಸೇನ್ ಸಾಬ್(69) ನಿಧನರಾಗಿದ್ದಾರೆ. ಇತ್ತೀಚಿನ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಹುಸೇನ್ ಸಾಬ್ ಇಂದು ಬೆಳಿಗ್ಗೆ ಅರಸಾಳಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಹೆಣ್ಣು ಮಕ್ಕಳು , ಓರ್ವ ಮಗ ಹಾಗೂ ಅಪಾರ ಬಂಧ ಬಳಗವನ್ನು ಅಗಲಿದ್ದಾರೆ.

Read More
Exit mobile version