Headlines

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ ರಿಪ್ಪನ್ ಪೇಟೆ : ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಾಳೆ (ಆ.21) ಬೆಳಗ್ಗೆ 10:30ಕ್ಕೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದಲ್ಲಿ ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿಸಭೆ ಏರ್ಪಡಿಸಲಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. ಈ ಸಭೆಗೆ ಠಾಣಾ ವ್ಯಾಪ್ತಿಯ ಎಲ್ಲಾ…

Read More

ಪಂಚರತ್ನ ಕಾರ್ಯಕ್ರಮ ನೆರವೇರಿಸದೆ ಇದ್ದರೆ ಜೆಡಿಎಸ್ ಪಕ್ಷ ವಿಸರ್ಜನೆ ಮಾಡುತ್ತೇನೆ : ಹೆಚ್ ಡಿ ಕುಮಾರಸ್ವಾಮಿ

ನಮ್ಮಪಕ್ಷದ ಪಂಚರತ್ನ ಕಾರ್ಯಕ್ರಮವನ್ನ ಅಧಿಕಾರಕ್ಕೆ ಬಂದ ಮೇಲೆ ನೆರವೇರಿಸದಿದ್ದರೆ ನನ್ನ ಪಕ್ಷವನ್ನ ವಿಸರ್ಜಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಘೋಷಿಸಿದ್ದಾರೆ. ಅವರು ತಾಲೂಕಿನ ಕೂಡ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ, ಶಿಕ್ಷಣ,ಆರೋಗ್ಯ ವಸತಿ ಉದ್ಯೋಗ ಮತ್ತು ಸ್ವಾಲಂಬಿ ಜೀವನಕ್ಕೆ ರೂಪು ರೇಷ ಹಮ್ಮಿಕೊಂಡಿದ್ದೇನೆ. ಈ ಕಾರ್ಯಕ್ರಮವನ್ನ ಜನತಾ ಜಲಧಾರೆಯ ನಂತರ ಪ್ರಕಟಿಸುವೆ ಎಂದರು. ಯಾವುದೇ ಖಾಯಿಲೆ ಕಾಣಿಸಿಕೊಂಡರೂ ಗ್ರಾಪಂ ವ್ಯಾಪ್ತಿಯಲ್ಲಿ 24 ಗಂಟೆ ವೈದ್ಯರ ಸೇವೆ, ಮತ್ತು ಆಸ್ಪತ್ರೆ ವ್ಯವಸ್ಥೆ ಮಾಡಲಾಗುತ್ತದೆ. ರೈತ…

Read More

Ripponpete | ಅಯೋಧ್ಯ ಶ್ರೀರಾಮಮಂದಿರ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

ರಿಪ್ಪನ್‌ಪೇಟೆ : ಜನವರಿ 22 ಎಂದು ಆಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವದ ಆಮಂತ್ರಣ ಮತ್ತು ಮಂತ್ರಾಕ್ಷತೆ ವಿತರಣೆಯ ಅಂಗವಾಗಿ ರಿಪ್ಪನ್‌ಪೇಟೆ ವಿನಾಯಕ ವೃತ್ತಕ್ಕೆ ಅಯೋಧ್ಯ ಶ್ರೀರಾಮಮಂದಿರ ಮಂತ್ರಾಕ್ಷತೆ ಬರುತ್ತಿದ್ದಂತೆ ಭವ್ಯ ಸ್ವಾಗತದೊಂದಿಗೆ ಮೆರವಣಿಗೆಯ ಮೂಲಕ ಶಿವಮೊಗ್ಗ ರಸ್ತೆಯಲ್ಲಿರುವ ಶ್ರೀ ವಿಘ್ನನಿವಾರಕ ದೇವಸ್ಥಾನದಲ್ಲಿಟ್ಟು ಪೂಜೆ ಸಲ್ಲಿಸಿದರು. ಎನ್.ಸತೀಶ್ ಮಂತ್ರಾಕ್ಷತೆಯ ಕೊಡಪಾನವನ್ನು ಹೊತ್ತು ಮೆರವಣಿಗೆಯಲ್ಲಿ ಅಪಾರ ಭಕ್ತ ಸಮೂಹದೊಂದಿಗೆ ಭಕ್ತಿ ಶ್ರದ್ದೆಯಿಂದ ಶ್ರೀರಾಮನ ಜಯಘೋಷಣೆಯೊಂದಿಗೆ ತೆರಳಿದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಈಶ್ವರ್ ಶೆಟ್ಟಿ ,…

Read More

ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ನಾಳೆ ರಿಪ್ಪನ್ ಪೇಟೆಗೆ:

ರಿಪ್ಪನ್ ಪೇಟೆ : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಕೆ ಎಸ್ ಈಶ್ವರಪ್ಪ ರವರು ನಾಳೆ ರಿಪ್ಪನ್ ಪೇಟೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಈಶ್ವರಪ್ಪರವರು ರಿಪ್ಪನ್ ಪೇಟೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ವರದಿ : ಸಬಾಸ್ಟಿನ್ ಮ್ಯಾಥ್ಯೂಸ್‌…

Read More

ಕಸ್ತೂರಿ ರಂಗನ್ ವರದಿಗೆ ತಾತ್ಕಾಲಿಕ ಬ್ರೇಕ್ : ನಿಟ್ಟುಸಿರು ಬಿಟ್ಟ ಮಲೆನಾಡಿಗರು

ಪಶ್ಚಿಮ ಘಟ್ಟ ಪ್ರದೇಶಗಳ ಜನಜೀವನದಲ್ಲಿ ಭಯ ಹುಟ್ಟಿಸಿರುವ ಡಾ. ಕೆ. ಕಸ್ತೂರಿ ರಂಗನ್‌ ಸಮಿತಿ ವರದಿಯನ್ನು ಜಾರಿ ಮಾಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ತಮ್ಮನ್ನು ಭೇಟಿ ಮಾಡಿದ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಮಿತಿಗೆ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ತಿಳಿಸಿದ್ದಾರೆ. ವರದಿ ಜಾರಿಗೆ ತಾತ್ಕಾಲಿತ ತಡೆ ನೀಡಲಾಗಿದೆ ಎಂದಿರುವ ಭೂಪೇಂದ್ರ ಯಾದವ್‌, ವಸ್ತುಸ್ಥಿತಿ ಅಧ್ಯಯನಕ್ಕೆ ಐಎಫ್‌ಎಸ್‌ ಅಧಿಕಾರಿ ನೇತೃತ್ವದ ಉನ್ನತಾಧಿಕಾರ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿಯು ಪಶ್ಚಿಮಘಟ್ಟ…

Read More

ಹೈಕೋರ್ಟ್ ನ್ಯಾಯವಾದಿ ಕೆ ದಿವಾಕರ್ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ :

ಹೈಕೋರ್ಟ್ ನ್ಯಾಯವಾದಿ ಸಾಗರದ ಕೆ. ದಿವಾಕರ್ ಅವರು ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರಿದ್ದಾರೆ.  ದಿವಾಕರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾನೂನು ಸಲಹೆಗಾರರಾಗಿದ್ದರು ಹಾಗೂ ಪ್ರಸ್ತುತ ಕೆಪಿಸಿಸಿ ವಕ್ತಾರರೂ ಆಗಿದ್ದರು.ಮುಂದಿನ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದಿಂದ ಕೆ ದಿವಾಕರ್ ಸ್ಪರ್ಧಿಸುವ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನಲಾಗುತ್ತಿದೆ‌. ಈ ಬಗ್ಗೆ ಆಮ್ ಆದ್ಮಿ ಪಕ್ಷದ  ಸಂಚಾಲಕ ಅಮೃತರಾಜ್ ಮಾತನಾಡಿ…

Read More

ರಿಪ್ಪನ್‌ಪೇಟೆ : ಗಣೇಶನ ಸಮ್ಮುಖದಲ್ಲಿ ಭಕ್ತಾಕರ್ಷಣೆಗೊಂಡ ಕೋಲಾಟ ನೃತ್ಯ ಪ್ರದರ್ಶನ|Rpet news

ಗಣೇಶನ ಸಮ್ಮುಖದಲ್ಲಿ ಭಕ್ತಾಕರ್ಷಣೆಗೊಂಡ ಕೋಲಾಟ ನೃತ್ಯ ಪ್ರದರ್ಶನ ರಿಪ್ಪನ್‌ಪೇಟೆ;-ಗ್ರಾಮೀಣ ಪ್ರದೇಶದಲ್ಲಿ ಹಾಸುಹೊಕ್ಕಾಗಿರುವ ಜಾನಪದ ಕಲೆಗಳಲ್ಲಿ ಒಂದಾದ ವಿವಿಧ ಭಂಗಿಯ ಕೋಲಾಟ ಪ್ರದರ್ಶನವು ಭಕ್ತಾಕರ್ಷಣೆಗೊಂಡಿತು. ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದು ಮಹಾಸಭಾದ 56 ನೇ ವರ್ಷದ ಗಣೇಶೋತ್ಸವ ಸಮಿತಿಯವರು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಬಳೆಕೋಲಾಟ ಪ್ರದರ್ಶನದಲ್ಲಿ ಕೆದಲುಗುಡ್ಡೆ ಮತ್ತು ಚಿಪ್ಪಿಳ್ಳಿ ಕೋಲಾಟ ತಂಡದವರ ಜಡೆ ಕೋಲಾಟ ಪ್ರದರ್ಶನ ಜನಾಕರ್ಷಣೆಗೊಂಡಿತು. ಹಿಂದೂ ಮಹಾಸಭಾ ಕಟ್ಟಡ ಸಮಿತಿಯ ಅಧ್ಯಕ್ಷ ಎಂ.ಬಿ.ಮಂಜುನಾಥ ಮಾತನಾಡಿ ನಶಿಸಿ ಹೋಗುತ್ತಿರುವ ಜಾನಪದ ಕಲೆಯನ್ನು ಉಳಿಸಿ ಪ್ರೋತ್ಸಾಹಿಸುವ…

Read More

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ  ರಿಪ್ಪನ್‌ಪೇಟೆ : ರೈಲ್ವೆ ಹಳಿಗೆ ಮರ ಅಡ್ಡಲಾಗಿ ಬಿದ್ದಿರುವುದರಿಂದ ಇಂಟರ್ ಸಿಟಿ ರೈಲು ಜಾಮ್ ಆಗಿದ್ದು ಅರಸಾಳು ಸಮೀಪದಲ್ಲಿ ನಿಂತು ಪ್ರಯಾಣಿಕರು ಪರದಾಡುವಂತಾಗಿದೆ. ಶಿವಮೊಗ್ಗ – ಸಾಗರ ನಡುವೆ ರೈಲು ಸಂಚಾರ ವ್ಯತ್ಯಯವಾಗಿದೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಟಿದ್ದ ಇಂಟರ್‌ಸಿಟಿ ರೈಲಿಗೆ ಅಡ್ಡಲಾಗ ಸೂಡೂರು ಬಳಿ ಮರ ಬಿದ್ದಿದೆ. ವಿದ್ಯುತ್ ವಯರ್‌ ತುಂಡಾಗಿ…

Read More

SAGARA | ಮನೆ ಹಾಗೂ ದನಗಳ್ಳತನ ಮಾಡುತಿದ್ದ ಆರೋಪಿಗಳ ಬಂಧನ – ಲಕ್ಷಾಂತರ ರೂ ಮೌಲ್ಯದ ನಗದು , ಚಿನ್ನಾಭರಣ ವಶಕ್ಕೆ..!

SAGARA | ಮನೆ ಹಾಗೂ ದನಗಳ್ಳತನ ಮಾಡುತಿದ್ದ ಆರೋಪಿಗಳ ಬಂಧನ – ಲಕ್ಷಾಂತರ ರೂ ಮೌಲ್ಯದ ನಗದು , ಚಿನ್ನಾಭರಣ ವಶಕ್ಕೆ..! ಸಾಗರ : ಪಟ್ಟಣದ ಪೇಟೆ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಗಳ್ಳತನ, ದನಗಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 2 ಲಕ್ಷ ಮೌಲ್ಯದ ಚಿನ್ನಾಭರಣ, 20 ಲಕ್ಷ ಮೌಲ್ಯದ ವಾಹನ ಜಪ್ತಿ ಮಾಡಿದ್ದಾರೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯ್ಕ್ ಅವರು ಮಾಹಿತಿ ನೀಡಿದ್ದು,…

Read More

ಮಾನವೀಯತೆ ಮೆರೆದ ಸಾಗರದ ಜೈನ್ ಶೇಖ್ :

ಸಾಗರ : ಹೊಂಡಾ ಆಕ್ಟೀವಾ ಸ್ಕಿಡ್ ಆಗಿ ಅಪಘಾತಕ್ಕೀಡಾದ ಗಾಯಾಳನ್ನು ವಾಹನ ಸವಾರರೊಬ್ಬರು ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ಒದಗಿಸಿ ಮಾನವೀಯತೆ ಮೆರೆದ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಕೆಳದಿ ರಸ್ತೆಯಲ್ಲಿರುವ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಮುಂಭಾಗ ಹೊಂಡಾ ಆಕ್ಟೀವಾದಲ್ಲಿ ತೆರಳುತ್ತಿದ್ದ ಕೂಲಿ ಕಾರ್ಮಿಕ ಅರುಣ್ ಕುಮಾರ್ (30), ಅಪಘಾತವಾಗಿ ತಲೆಗೆ ತೀವ್ರತರವಾದ ಗಾಯವಾಗಿ ರಕ್ತ ಸೋರುತ್ತಿತ್ತು.ಅದೇ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಸಿವಿಲ್ ಕಂಟ್ರಾಕ್ಟರ್ ಜೈನ್ ಶೇಖ್ ಎಂಬುವವರು ಜನ ಸೇರಿದ್ದನ್ನು ಗಮನಿಸಿ ಕಾರು ನಿಲ್ಲಿಸಿ ನೋಡಿದಾಗ ಅರುಣ್ ಕುಮಾರ್…

Read More
Exit mobile version