ಕೆಂಚನಾಲ ಮಾರಿಕಾಂಬ ಜಾತ್ರೆಗೆ ಹರಿದು ಬಂದ ಭಕ್ತಸಾಗರ :

ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು.  ಜಗತ್ತನ್ನೇ ತಲ್ಲಣ ಗೊಳಿಸಿದ ಕೊರೊನಾ ಸೋಂಕಿನಿಂದ ಕಳೆದ ಎರಡು ವರ್ಷ ಜಾತ್ರೆಯನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಜಾತ್ರೆಗೆ ಯಾವುದೇ ನಿರ್ಬಂಧಗಳು ಇಲ್ಲದೆ ಇರುವ ಕಾರಣದಿಂದ ಮಾರಿಕಾಂಬೆ ದೇವಿಯ ಭಕ್ತರು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ…

Read More

ಸಾಗರದಲ್ಲಿ ವಿದ್ಯಾರ್ಥಿನಿಯರ ಮೇಲೆ ಟಿಪ್ಪರ್ ಹರಿದ ಘಟನೆ | ಟಿಪ್ಪರ್ ಚಾಲಕನಾಗಿದ್ದ ಕೃಷ್ಣಾಚಾರಿ ಸಾವು|sagara

ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ನಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ, ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದರು.ಆ ಅಪಘಾತದಲ್ಲಿ ಟಿಪ್ಪರ್ ಚಾಲಕನಾಗಿದ್ದ ಕೃಷ್ಣಾಚಾರಿಯವರು ಸಾವನ್ನಪ್ಪಿದ್ಧಾರೆ.  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಣ್ಣಮನೆ ಸೇತುವೆ ಬಳಿ ಜೋಗದ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಆಕ್ಸಿಡೆಂಟ್​ನಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರಿಗೆ ತಕ್ಷಣವೇ ಚಿಕಿತ್ಸೆ ನೀಡಲಾಯ್ತಾದರೂ, ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.  ಈ ಘಟನೆಯ ಬೆನ್ನಲ್ಲೆ ಸಾರ್ವಜನಿಕರು ಚಾಲಕನ ವಿರುದ್ಧ ಆಕ್ರೋಶ ಹೊರಹಾಕಿದ್ದರು.  ಇದರ ಬೆನ್ನಲ್ಲೆ ನಿನ್ನೆ ಅನಾರೋಗ್ಯ…

Read More

ಕಾರಿಗೆ ಅಡ್ಡ ಬಂದ ಹಾವು ತಪ್ಪಿಸಲು ಹೋಗಿ ಚಾನೆಲ್ ಗೆ ಇಳಿದ ಕಾರು : ಒಬ್ಬರ ಸಾವು

ಕಾರಿಗೆ ಅಡ್ಡ ಬಂದ ಹಾವನ್ನು ತಪ್ಪಿಸಲು ಹೋಗಿ ತುಂಗಾ ಚಾನೆಲ್ ಗೆ ಕಾರು ಬಿದ್ದು  ಗಾಜನೂರಿನ ನವೋದಯ ಶಾಲೆಯ ಗೇಟ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗಿನ ಜಾವ 2 ಗಂಟೆಯ ಸಮಯದಲ್ಲಿ ಸಂಭವಿಸಿದೆ. ಗಾಜನೂರಿನ ನವೋದಯ ಶಾಲೆಯ ಗೇಟ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಸುಷ್ಮ.ಇ(28) ಮೃತ ದುರ್ಧೈವಿ. ಸುಷ್ಮ ಮತ್ತು ಪತಿ ಚೇತನ್ ಕುಮಾರ್ ತುಮಕೂರಿನಲ್ಲಿರುವ ಅತ್ತೆಗೆ (ಚೇತನ್ ತಾಯಿಗೆ) ಎದೆ ನೋವು ಕಾಣಿಸಿಕೊಂಡಿದ್ದರಿಂದ ತುಮಕೂರಿಗೆ ಕಾರಿನಲ್ಲಿ…

Read More

Coffee shop ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವೀಡಿಯೋ – ಶಿವಮೊಗ್ಗ ಮೂಲದ ಆರೋಪಿಯ ಬಂಧನ

Coffee shop ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವೀಡಿಯೋ – ಶಿವಮೊಗ್ಗ ಮೂಲದ ಆರೋಪಿಯ ಬಂಧನ ಕಾಫಿ ಶಾಪ್ ನ ವಾಶ್ ರೂಮ್ ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್ ಬಂಧಿತ ಆರೋಪಿ. ಬೆಂಗಳೂರಿನ ಬಿಇಎಲ್ ರಸ್ತೆಯ ಥರ್ಡ್ ವೇವ್ ಕೆಫೆಯಲ್ಲಿ ಈ ಘಟನೆ ನಡೆದಿದೆ. ಕೆಫೆಯಲ್ಲಿ ಕಾಫಿ ಮೇಕರ್ ಆಗಿದ್ದ ಮನೋಜ್ ತನ್ನ ಮೊಬೈಲ್ ನ್ನು ಫ್ಲೈಟ್ ಮೋಡ್ ನಲ್ಲಿ…

Read More

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ದೆವ್ವ – ಪೊಲೀಸರಿಂದ ಖಡಕ್ ವಾರ್ನಿಂಗ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ದೆವ್ವ – ಪೊಲೀಸರಿಂದ ಖಡಕ್ ವಾರ್ನಿಂಗ್ ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಗರದ ಕಾರ್ಗಲ್‌ನಲ್ಲಿ ಭೂತದ ಕಾಟದ ಕಾರಣ ಇಬ್ಬರು ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ ಎಂದು ಫೋಟೋಗಳ ಸಹಿತ ಸುದ್ದಿ ಹರಿದಾಡಿ ಜನ ಆತಂಕಿತರಾದ ಹಿನ್ನೆಲೆ ತನಿಖೆ ನಡೆಸಿದ ಪೊಲೀಸ್ ಇಲಾಖೆ, ಈ ಸುಳ್ಳು ಸುದ್ದಿ ಹರಡಿ ಕುಚೋದ್ಯ ಮಾಡಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ. ಅ. 27 ರಂದು ರಾತ್ರಿ ತಾಲೂಕಿನ ಕಾರ್ಗಲ್‌ನ ಸಮೀಪ ಕಂಚಿಕೈ ರಸ್ತೆಯಲ್ಲಿ ಎರಡು ಜನ…

Read More

ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್‍ಗೆ ಜೀವ ಬೆದರಿಕೆ : ದೂರು ದಾಖಲು

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್‍ಗೆ ಜೀವ ಬೆದರಿಕೆವೊಡ್ಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನಲೆಯಲ್ಲಿ ಫೆ.21ರಂದು ಅವರಿಗೆ ಬೆದರಿಕೆ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾನೆ ಎಂದು ಆರೋಪಿಸಲಾಗಿದೆ. ನಿಮ್ಮ…

Read More

ರಿಪ್ಪನ್ ಪೇಟೆ: ಕಾಂಗ್ರೆಸ್ ಮುಖಂಡ ಸುಳುಕೋಡು ನಾರಾಯಣಪ್ಪ ನಿಧನ : ಗಣ್ಯರ ಸಂತಾಪ

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳಕೋಡು ಗ್ರಾಮದ ನಾರಾಯಣಪ್ಪ (68) ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಹಾಗೂ ಮಾಜಿ ಶಾಸಕ ಜಿ.ಡಿ. ನಾರಾಯಣಪ್ಪ ಅವರ ಆತ್ಮೀಯರಾಗಿದ್ದ ಸುಳುಗೋಡು ನಾರಾಯಣಪ್ಪ ಅವರು ಕಾಂಗ್ರೆಸ್ ಪಕ್ಷ ಹಾಗೂ ಈಡಿಗ ಸಮಾಜದಲ್ಲಿ ಪ್ರಮುಖ ನಾಯಕರಿಂದ ಗುರುತಿಸಿಕೊಂಡಿದ್ದರು. ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ ಅವರು ಕೃಷಿಕರಾಗಿದ್ದರೂ ಸಹ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು,…

Read More

ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ಗಾಳಿಬೈಲು ಗ್ರಾಮದಲ್ಲಿ ಈದ್ ಮಿಲಾದ್ ಸಂಭ್ರಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಇಲ್ಲಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ…

Read More

ಹಸೆಮಣೆ ಏರಬೇಕಿದ್ದ ಪೊಲೀಸ್ ಸಿಬ್ಬಂದಿಯ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ

ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ ನ.11ರಂದು ಮದುವೆಯಾಗಬೇಕಿದ್ದ ಪೊಲೀಸ್ ಪೇದೆಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ದುದ್ದ ಗ್ರಾಮದ ಹೊರವಲಯದ ಡಾಬಾ ಸರ್ಕಲ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೊಲೆಯಾದ ಪೇದೆ ಬಾಗೇಶಪುರ ಗ್ರಾಮದ ನಿವಾಸಿ ಹರೀಶ್ ವಿ (32) ಎಂದು ಗುರುತಿಸಲಾಗಿದ್ದು, ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೊಲೆಯಾದ ಹರೀಶ್ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯಲ್ಲಿ…

Read More

ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಾಲಯ ವಿರೂಪಗೊಳಿಸಿದ ದುಷ್ಕರ್ಮಿಗಳು|chandragutti temple

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಾಲಯವನ್ನು ದುಷ್ಕರ್ಮಿಗಳು ವಿರೂಪ ಗೊಳಿಸಿದ್ದಾರೆ.  ದೇವಾಲಯದ ಬಾಗಿಲು ಒಡೆದು ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿದ ಕಿಡಿಗೇಡಿಗಳು, ದೇವಾಲಯದ ಗರ್ಭಗುಡಿಯಲ್ಲಿ ಇರುವ ಮೂಲ ದೇವರ ಬೆಳ್ಳಿಯ ಹೊದಿಕೆಯನ್ನು ಹೊರ ಎಸೆದಿದ್ದಾರೆ. ಅಲ್ಲದೇ ದೇವಾಲಯದಲ್ಲಿರುವ ಹುಂಡಿ ಹಾಗೂ ಪೂಜಾ ಸಾಮಾಗ್ರಿಗಳನ್ನು ಚೆಲ್ಲಾಪಿಲ್ಲಿ ಗೊಳಿಸಿದ್ದಾರೆ. ದೇವರ ಬೆಳ್ಳಿ ಮುಖವಾಡವನ್ನು ಗರ್ಭಗುಡಿಯಿಂದ ದೇವಸ್ಥಾನದ ಹೊರಗಡೆ ವರಂಡದಲ್ಲಿ ಎಸೆದಿದ್ದು, ಕಳ್ಳತನ ಮಾಡುವ ಉದ್ದೇಶ ಇರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.  ದೇವಸ್ಥಾನದ ಕೆಳಭಾಗದಲ್ಲಿರುವ…

Read More