ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ|accident
ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಂಭತ್ತಿ ಗ್ರಾಮದಲ್ಲಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಟಿವಿಎಸ್ ವಾಹನದಲ್ಲಿ ಬರುತ್ತಿದ್ದ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಇದು ರಸ್ತೆ ಅಪಘಾತ ಎಂದು ಕಂಡು ಬಂದರು ಇದೊಂದು ವ್ಯವಸ್ಥಿತವಾಗಿ ನಡೆದ ಕೊಲೆ ಎಂದು ಮೃತನ ಕುಟುಂಬ ಆರೋಪಿಸಿದೆ. ಕುಟುಂಬದಲ್ಲಿದ್ದ ಜಮೀನು ವಿವಾದದ ಹಿನ್ನಲೆಯಲ್ಲಿ…