Headlines

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದ ಘಟನೆಯ ಬಗ್ಗೆ ಗುತ್ತಿಗೆದಾರ ಉದಯ್ ಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಕಗ್ಗಲಿಜೆಡ್ಡು ಗ್ರಾಮದಲ್ಲಿ ಸೇತುವೆ ಕಾಮಗಾರಿ ನಡೆಸುತಿದ್ದಾಗ ಆಕಸ್ಮಿಕವಾಗಿ ಸೆಂಟ್ರಿಂಗ್ ವಾಲಿದ್ದು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಅವರನ್ನು ಶಿವಮೊಗ್ಗದ ಮೆಗ್ಗಾನ್…

Read More

ಅಪ್ರಾಪ್ತನಿಂದ ತ್ರಿಬಲ್ ರೈಡಿಂಗ್ – ಬೈಕ್ ಮಾಲೀಕನಿಗೆ 25 ಸಾವಿರ ರೂ.ದಂಡ

ಅಪ್ರಾಪ್ತನಿಂದ ತ್ರಿಬಲ್ ರೈಡಿಂಗ್ – ಬೈಕ್ ಮಾಲೀಕನಿಗೆ 25 ಸಾವಿರ ರೂ.ದಂಡ ಶಿವಮೊಗ್ಗ : ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ   ಹಳೇಮಂಡ್ಲಿ ಪಂಪ್ ಹೌಸ್ ಹತ್ತಿರ ಸಂಚಾರಿ ಎಸ್ ಯ  ಭಾರತಿ.ಬಿ.ಹೆಚ್,  ವಾಹನ ತಪಾಸಣೆ ಮಾಡುವ ಸಮಯದಲ್ಲಿ ಕೆಎ ೧೪-೧೪ ಇ ಡಬ್ಲು ೭೬೧೮ ನಂಬರಿನ ಹೀರೋ ಸ್ಪ್ಲೆಂಡರ್ ಪ್ಲಸ್ ಮೋಟಾರ್ ಬೈಕ್ ಅನ್ನು ತಪಾಸಣೆ ಮಾಡಿದಾಗ ಅಪ್ರಾಪ್ತ ಮತ್ತು ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಚಲಾಯಿಸುತ್ತಿರುವುದು ಪತ್ತೆಯಾಗಿದೆ. ಜೊತಗೆ  ಅಪ್ರಾಪ್ತ ಬಾಲಕನು ಹೆಲ್ಮೆಟ್ ಧರಿಸದೇ…

Read More

ಬಿಜೆಪಿ ಯುವಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ

ತೀರ್ಥಹಳ್ಳಿ: ಭಾರತದ ಪ್ರಧಾನಮಂತ್ರಿ  ನರೇಂದ್ರ ಮೋದಿಯವರ 71 ನೇ ಜನ್ಮದಿನಾಚರಣೆ ಅಂಗವಾಗಿ ದೇಶಾದ್ಯಂತ ಸೇವೆ ಮತ್ತು ಸಮರ್ಪಣಾ ಅಭಿಯಾನ ನಡೆಯುತ್ತಿದೆ. ಇದರ ಪ್ರಯುಕ್ತ ತೀರ್ಥಹಳ್ಳಿ ಮಂಡಲ ಬಿಜೆಪಿ ಯುವಮೋರ್ಚಾ ಮಂಗಳವಾರ ರಾಮ ಮಂದಿರದಲ್ಲಿ ರಕ್ತದಾನ  ಕಾರ್ಯಕ್ರಮ ನಡೆಸಿದರು.  ಈ ಶಿಬಿರದಲ್ಲಿ  ಬರೋಬ್ಬರಿ 157 ಯೂನಿಟ್ ರಕ್ತದಾನವಾಗಿದ್ದು 78 ಜನರು  ಮೊದಲ ಬಾರಿ ರಕ್ತದಾನ ಮಾಡಿದ್ದಾರೆ.  ಈ ಕಾರ್ಯಕ್ರಮದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಹರಿಕೃಷ್ಣ, ಉಪಾಧ್ಯಕ್ಷರಾದ ಗಣೇಶ್ ಬಿಳಕಿ ,ಸುಹಾಸ್ ಶಾಸ್ತ್ರಿ, ರಕ್ಷಿತ್ ಮೇಗರವಳ್ಳಿ, ಕಾರ್ಯದರ್ಶಿಗಳಾದ ಮೇಘರಾಜ್ ಹೊಳಲೂರು,…

Read More

ಸಿಡಿಲು ಬಡಿದು ಎತ್ತು ಸಾವು | lighting

ಸಿಡಿಲು ಬಡಿದು ಎತ್ತು ಸಾವು | lighting ಸೊರಬ ಪಟ್ಟಣದ ಸೇರಿ ತಾಲೂಕಿನಾದ್ಯಂತ ಬಿರುಸಿನ ಗಾಳಿ, ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ಅರೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟ ಘಟನೆ ನಡೆದಿದೆ. ಗ್ರಾಮದ ಮಂಜಪ್ಪ ಅವರು ಅಮೃತ್‍ ಮಹಲ್ ತಳಿಯ ಒಂದು ಜೊತೆ ಎತ್ತಗಳನ್ನು ಸಾಕಿದ್ದರು.ಅವರ ಜಮೀನಿನಲ್ಲಿ ಜಾನುವಾರಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿ ಸಂಜೆ ವೇಳೆ ಅಮೃತ್ ಮಹಲ್ ತಳಿಗೆ ಸೇರಿದ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಪರಿಣಾಮ ಎತ್ತು ಸ್ಥಳದಲ್ಲೆ ಸಾವನ್ನಪ್ಪಿದೆ.  ಮೃತ ಎತ್ತಿನ…

Read More

ಗವಟೂರು ಹೊಳೆಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆದ ಎಳ್ಳಮವಾಸ್ಯೆ ಜಾತ್ರಾ ಮಹೋತ್ಸವ:

ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಹೊಳೆಸಿದ್ದೇಶ್ವರ ಸ್ವಾಮಿಯ ಎಳ್ಳಮವಾಸ್ಯೆ ಜಾತ್ರಾಮಹೋತ್ಸವ ಕಾರ್ಯಕ್ರಮ ಮತ್ತು ಧರ್ಮಸಮಾರಂಭ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಜಾತ್ರಾಮಹೋತ್ಸವ ಕಾರ್ಯಕ್ರಮ ಮತ್ತು ಧರ್ಮಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅಶೀರ್ವಚನ ನೀಡಿದ ಮಳಲಿಮಠದ ಷ.ಬ್ರ.ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿಗಳು ಸಂಘಟನೆ ಸದ್ಭಾವನೆಯೊಂದಿಗೆ ಯುವಜನಾಂಗ ಧಾರ್ಮಿಕ ಅಚರಣೆಗಳಲ್ಲಿ ತೊಡಗಿಸಿಕೊಂಡು ಸುಸಂಸ್ಕೃತ ಸಮಾಜ ನಿರ್ಮಾಣದಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು,  ದುಡಿಮೆಯಿಂದ ಗಳಿಸಿದ ಹಣವನ್ನು ದಾನ, ಧರ್ಮಕ್ಕಾಯಕ್ಕೆ ವಿನಿಯೋಗಿಸಿದರೆ ಪುಣ್ಯನಾದರು ಬರುತ್ತದೆ ಅದೇ ಬಚ್ಚಿಟ್ಟರೆ ಪರರ ಪಾಲಾಗುತ್ತದೆ ಈಗಲಾದರೂ ಗಳಿಸಿದ ಸಂಪತ್ತು ಇನ್ನೊಬ್ಬರಿಗೆ ದಾನ…

Read More

ರಿಪ್ಪನ್ ಪೇಟೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಸಂಭ್ರಮ : ಸಂಭ್ರಮದ ಯಶಸ್ವಿಗೆ ಸಕಲ ಸಿದ್ಧತೆ : ಮಂಜುಳಾ ಕೇತಾರ್ಜಿ ರಾವ್

ರಿಪ್ಪನ್ ಪೇಟೆ : ಆಜಾದ್ ಕಿ ಅಮೃತ್ ಮಹೋತ್ಸವ ಅಂಗವಾಗಿ ರಿಪ್ಪನ್ ಪೇಟೆಯ ಗ್ರಾಮಾಡಳಿತ ಸಕಲಸಿದ್ಧತೆಯನ್ನು ಮಾಡಿದ್ದು 3000ಕ್ಕೂ ಅಧಿಕ ಜನರು ಈ ಸಂಭ್ರಮಕ್ಕೆ ಸಾಕ್ಷಿಗಳಾಗಲಿದ್ದಾರೆ ಎಂದು ಪಟ್ಟಣದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೇತರ್ಜಿ ರಾವ್ ಹೇಳಿದರು.  ಇಂದು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿದ ಅವರು ನಮ್ಮ ದೇಶದ ಸ್ವಾತಂತ್ರ್ಯೋತ್ಸವದ ಆಜಾದ್ ಕೀ ಅಮೃತ್ ಮಹೋತ್ಸವವನ್ನು ಸಡಗರದಿಂದ ಆಚರಿಸಲು ದೇಶಾದ್ಯಂತ ಸಡಗರ ಹಾಗೂ ಸಂಭ್ರಮದಿಂದ ಸಿದ್ಧತೆಯನ್ನು ನಡೆಸುತ್ತಿದ್ದಾರೆ ಹಾಗೆಯೇ ನಮ್ಮ ರಿಪ್ಪನ್ ಪೇಟೆ ಗ್ರಾಮ…

Read More

ಭದ್ರಾವತಿ ನಗರಸಭೆ ಕಾಂಗ್ರೆಸ್ ತೆಕ್ಕೆಗೆ :

ಭದ್ರಾವತಿ: ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ.2 ರ ಸದಸ್ಯೆ ಗೀತಾ ರಾಜ್‌ಕುಮಾರ್ ಹಾಗು ಉಪಾಧ್ಯಕ್ಷರಾಗಿ ಚನ್ನಪ್ಪ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ಗೀತಾ ಕೆ.ಜಿ ರಾಜ್‌ಕುಮಾರ್ ಮತ್ತು ಚನ್ನಪ್ಪ ತಲಾ 8 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಕೆ.ಜಿ ರಾಜ್‌ಕುಮಾರ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.15 ರ ಮಂಜುಳ ಬಿ.ಎಸ್ ಸುಬ್ಬಣ್ಣ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.5 ರ ಶಶಿಕಲಾ ಬಿ.ಎಸ್ ನಾರಾಯಣಪ್ಪ ಸ್ಪರ್ಧಿಸಿದ್ದು,…

Read More

ಕೆರೆ ಕಾಮಗಾರಿ ಹಣ ದುರ್ಬಳಕೆ – 6 ವರ್ಷ ಕಠಿಣ ಶಿಕ್ಷೆ ,20 ಸಾವಿರ ದಂಡ

ಕೆರೆ ಬಳಕೆದಾರರ ಸಂಘಗಳಿಗೆ ತಪ್ಪು ಮಾಹಿತಿ, ಚೆಕ್‌ಗಳಿಗೆ ಪೋರ್ಜರಿ ಸಹಿ ಮಾಡಿ ₹ 2.54 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಜಲ ಸಂವರ್ಧನೆ ಯೋಜನಾ ಸಂಘದ ಸಾಮಾಜಿಕ ತಜ್ಞನಿಗೆ ಶಿಕಾರಿಪುರದ ಎರಡನೇ ಅಧಿಕ ಸಿಜೆ ಮತ್ತು ಜೆಎಂಎಫ್ ನ್ಯಾಯಾಲಯ ಆರು ವರ್ಷ ಕಠಿಣ ಶಿಕ್ಷೆ ಹಾಗೂ ₹ 20,000 ದಂಡ ವಿಧಿಸಿ ಆದೇಶಿಸಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ವಿನೋದ್ ಎಲ್. ರಾಮದುರ್ಗ (29) ಶಿಕ್ಷೆಗೆ ಒಳಗಾದವರು. ವಿನೋದ್ 2011ರ ಮಾರ್ಚ್ 23ರಿಂದ 2013ರ ಮಾರ್ಚ್…

Read More

ಮೈಸೂರು ಗ್ಯಾಂಗ್‍ರೇಪ್ ಪ್ರಕರಣ ಸಂಬಂಧ ಕಾರ್ಯಾಚರಣೆ ಯಶಸ್ವಿ: ಗೃಹ ಸಚಿವ

ಬೆಂಗಳೂರು: ಮೈಸೂರಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನಾನು ಈಗ ಮಾಹಿತಿ ಕೊಡಲು ಸಾಧ್ಯವಿಲ್ಲ. ಆದರೆ ಇನ್ನೆರಡು ಗಂಟೆಯ ಒಳಗೆ ನಿಮಗೆ ಎಲ್ಲಾ ಮಾಹಿತಿ ನೀಡುತ್ತೇವೆ. ನಾನು ಅಥವಾ ಪೊಲೀಸರು ಸುದ್ದಿಗೋಷ್ಠಿ ನಡೆಸುತ್ತಾರೆ ಎಂದು ತಿಳಿಸಿದರು. ಪ್ರಕರಣ ಸಂಬಂಧ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ….

Read More

ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಸದಸ್ಯರ ಮೇಲೆ ಭೂ ಕಬಳಿಕೆ ಆರೋಪ ಮಾಡಿದ್ದ ಪತ್ರಕರ್ತನ ವಿರುದ್ಧ ಕೇಸ್​!

ಮೂರು ದಿನಗಳ ಹಿಂದೆ ಪತ್ರಕರ್ತ ವಿನೀತ್​ ನರೈನ್​ ಬಹಿರಂಗವಾಗಿ ಫೇಸ್‌ಬುಕ್ ಪೋಸ್ಟ್‌ನಲ್ಲಿ, ಚಂಪತ್ ರಾಯ್ ಮತ್ತು ಅವರ ಸಹೋದರರು  ಬಿಜ್ನೋರ್‌ನಲ್ಲಿ ಭೂ ಕಬಳಿಕೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದರು. ಉತ್ತರಪ್ರದೇಶ (ಜೂನ್ 21); ಶತಮಾನಗಳಿಂದ ಇತ್ಯರ್ಥವಾದಗ ರಾಮ ಜನ್ಮಭೂಮಿ ವಿವಾದಕ್ಕೆ ಸುಪ್ರೀಂ ಕೋರ್ಟ್​ ಪೂರ್ಣ ವಿರಾಮ ಇಡುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಕಳೆದ ವರ್ಷ ಭೂಮಿ ಪೂಜೆ ನೆರವೇರಿಸಿ ದ್ದರು. ಅಲ್ಲದೆ, ದೇವಾಲಯ ನಿರ್ಮಾಣಕ್ಕೆ ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ಅನ್ನು ನಿರ್ಮಿಸಿ, ದೇಶದಾದ್ಯಂತ…

Read More