ರಿಪ್ಪನ್ಪೇಟೆ : ಓಟಿಪಿ ನಂಬರ್ ಪಡೆದು ಲಕ್ಷಾಂತರ ರೂ ವಂಚನೆ – ಮನೆ ಮಾರಿದ ಹಣ ಕಳೆದುಕೊಂಡ ಅಮಾಯಕ|cyber crime
ಭಾರತದಲ್ಲಿ ನೋಟ್ ಬ್ಯಾನ್ ಆದ ನಂತರ ಜನ ಡಿಜಿಟಲ್ ಹಣಕಾಸಿನ ವ್ಯವಹಾರದ ಕಡೆ ಮುಖ ಮಾಡಿದರು. ಇದರಿಂದ ಜೀವನ ಒಂದು ಮಟ್ಟಕ್ಕೆ ಸುಧಾರಿಸಿತು ಎನ್ನುವಾಗಲೇ ಡಿಜಿಟಲ್ ಮೋಸಗಳು ಹೆಚ್ಚುತ್ತಿದ್ದು, ಹಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕೆವೈಸಿ ಅಪ್ಡೇಟ್ ಮಾಡಬೇಕು ಎಂದು ನಂಬಿಸಿ ಓಟಿಪಿ ನಂಬರ್ ಪಡೆದ ವ್ಯಕ್ತಿಯೊಬ್ಬರಿಗೆ ಸೈಬರ್ ಕಳ್ಳರು 1.80 ಲಕ್ಷ ರೂ. ವಂಚಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಚೌಡೇಶ್ವರಿ ಬೀದಿಯ ಸ್ವಾಮಿ (55) ವಂಚನೆಗೊಳಗಾದವರು. ಏಪ್ರಿಲ್…


