ರಿಪ್ಪನ್‌ಪೇಟೆ: ಗಾಂಜಾ ಸೇವಿಸಿ ಅಸಭ್ಯ ವರ್ತನೆ — ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಯುವಕರ ಬಂಧನ

Three youths were arrested by Ripponpete police in Shivamogga district for consuming ganja and behaving indecently in public places. Separate cases have been registered under the NDPS Act. ರಿಪ್ಪನ್‌ಪೇಟೆ: ಗಾಂಜಾ ಸೇವಿಸಿ ಅಸಭ್ಯ ವರ್ತನೆ — ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಯುವಕರ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರು…

Read More

ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಕ್ಯಾಮರಾ ಹಾಗೂ ಡಿವಿಆರ್ ನ್ನು ಪುಷ್ಕರಣಿಗೆ ಎಸೆದ ಭೂಪರು|theft

ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಟಿವಿಯನ್ನು ಪುಷ್ಕರಣಿಗೆ ಎಸೆದ ಭೂಪರು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗುಳುಗುಳಿ ಶಂಕರ ಗ್ರಾಮದ ಇತಿಹಾಸ ಪ್ರಸಿದ್ದ  ಶಂಕರೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಕಿಟಕಿಯ ರಾಡ್ ತುಂಡರಿಸಿ ದೇವಸ್ಥಾನದ ಒಳಹೊಕ್ಕಿರುವ ಖತರ್ ನಾಕ್‌ ಕಳ್ಳರು ಹುಂಡಿಯನ್ನು ಒಡೆದು ಹಣವನ್ನು ಕದ್ದಿದ್ದಾರೆ. ಕಳ್ಳತನದ ಬಳಿಕ ದೇವಸ್ಥಾನದಲ್ಲಿ ಭದ್ರತೆ ಹಿನ್ನಲೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಹಾಗೂ ಡಿವಿಆರ್ ನ್ನು ಕಿತ್ತು ಅಲ್ಲೆ ಸಮೀಪದಲ್ಲಿರುವ ಪುಷ್ಕರಣಿಗೆ ಎಸೆದು ಹೋಗಿದ್ದಾರೆ….

Read More

ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ಕು.ಶ್ರೇಯಾ ಮತ್ತು ಕು.ಶ್ರಾವ್ಯ|Kabbadi

ರಿಪ್ಪನ್‌ಪೇಟೆ : ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ ಬಿ ಆರ್ ನಾಯಕ್ ಮತ್ತು ಶ್ರಾವ್ಯ ಹೆಚ್ ಓ ರವರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನ 22 ರ ಮಂಗಳವಾರ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆದ ರಾಜ್ಯಮಟ್ಟದ 14 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಮುಂದಿನ ತಿಂಗಳು ಪಂಜಾಬ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾವಳಿಗೆ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ…

Read More

ಸಾಗರದ ಮಾಜಿ ಶಾಸಕರಾದ ಬಿ ಧರ್ಮಪ್ಪ ನಿಧನ|ex mla

ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ವಕೀಲರಾದ ಬಿ ಧರ್ಮಪ್ಪ ರವರು ವಯೋಸಹಜ ನಿಧನರಾಗಿದ್ದಾರೆ. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಇಂದು ಸಂಜೆ 3.40 ರ ಸಮಯದಲ್ಲಿ ಕೊನೆಯುಸಿರೆಳೆದರು. ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ದ 1500 ಮತಗಳ ಅಂತರದಿಂದ ಜಯಗಳಿಸಿದ್ದರು. ಮೂಲತಃ ಸಾಗರ ತಾಲೂಕಿನ ತಂಗಳವಾಡಿಯವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು. ಕೆಲವು ದಿನಗಳ…

Read More

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ|leopard

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ ಶಿವಮೊಗ್ಗ ತಾಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ ಮೇಲೆ ಎರಗಿ ಕೊಂದು ಹಾಕಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಾರ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಬೇಟೆಯಾಡಲು ಅಂದಿನಿಂದಲೇ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಶುಕ್ರವಾರ ಬನ್ನಿಕೆರೆಯ ಹೊಲದಲ್ಲಿ ಕಳೆ ಕೀಳಲು ತೆರಳಿದ್ದ ಯುವಕನೋರ್ವನಿಗೆ ಚಿರತೆ ಕಾಣಿಸಿಕೊಂಡಿತ್ತು. ಆ ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿತ್ತು. ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಕಳೆದ ರಾತ್ರಿ ಚಿರತೆ…

Read More

ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ

ಮೊಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ ಶಿವಮೊಗ್ಗ: ವಿಶ್ವ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ೧೫೦೦ನೇ ಜನ್ಮದಿನಾಚರಣೆಯನ್ನು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅನ್ನ ಸಂತರ್ಪಣೆ ಹಾಗೂ ಹಣ್ಣು-ಹಂಪಲು ವಿತರಣೆ ನಡೆಸಲಾಗಿದ್ದು, ಸರ್ವಧರ್ಮ ಸೌಹಾರ್ದತೆಯ ಸಂದೇಶ ಸಾರಲಾಯಿತು. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಲೀಮ್ ಪಾಷಾ ಮಾತನಾಡಿ, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ, ಬಾಂಧವ್ಯ ಹಾಗೂ ಸಹಬಾಳ್ವೆಯನ್ನು…

Read More

ಅಪಾಯದಂಚಿನಲ್ಲಿ ಕಾರಗೋಡು ಸರ್ಕಾರಿ ಶಾಲೆ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆಯ ಹಿಂಭಾಗವಿರುವ ಅಕೇಶಿಯ ಮರ ಬೀಳುವ ಆತಂಕದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ದಿನದೂಡುತಿದ್ದಾರೆ. ಇಲ್ಲಿನ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆ ಹಿಂಭಾಗದಲ್ಲಿ ಬೆಳೆದುನಿಂತ ಅಕೇಶಿಯ ನೆಡುತೋಪು ಇದ್ದು ಈ ಮರಗಳ ರೆಂಬೆಕೊಂಬೆಗಳು ಶಾಲೆಯ ಮೇಲ್ಛಾವಣಿಗೆ ಬಾಗಿ ನಿಂತಿವೆ. ಮಲೆನಾಡಿನ ಈ ಭಾಗದಲ್ಲಿ ಸುರಿಯುತ್ತಿರುವ  ಭಾರಿ ಮಳೆ ಗಾಳಿಯಿಂದ ಜನ ತತ್ತರಗೊಂಡಿದ್ದು ಇದೀಗ ಯಾವ  ಗಳಿಗೆಯಲ್ಲಾದರೂ ಶಾಲೆಯ ಮೇಲೆ ಮರ ಬೀಳಬಹುದೆಂಬ ಆತಂಕ ಪೋಷಕರನ್ನು ಕಾಡುತ್ತಿದೆ.ಇದರಿಂದ…

Read More

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ ಹೊಸನಗರ ತಾಲ್ಲೂಕಿನ ಗಡಿ ಭಾಗವಾದ ಸಾಗರ ತಾಲೂಕಿಗೆ ಹೊಂದಿಕೊಂಡಿರುವ ಪಟಗುಪ್ಪ ಸೇತುವೆ ಬಳಿ ಹಿನ್ನೀರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಶಿಕಾರಿಪುರ ಮೂಲದ ಶಿವರಾಜ್ (29) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಶಿಕಾರಿಪುರ ತಾಲ್ಲೂಕಿನ ಬಿಳಕಿ ಗ್ರಾಮದವರು ಎಂದು ತಿಳಿದುಬಂದಿದ್ದು , ಶಿವರಾಜ್‌ಗೆ ಮದ್ಯಪಾನ ವ್ಯಸನವಿದ್ದು, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಭಾರಿ ಗಾಳಿ-ಮಳೆಗೆ ಬೈಕ್ ಮೇಲೆ ಉರುಳಿದ ಮರ: ಸವಾರನಿಗೆ ಗಂಭೀರ ಗಾಯ

A biker was seriously injured after a tree fell on his moving bike during heavy rain and hailstorm near Ripponpet. The victim was shifted to Shivamogga for further treatment. ರಿಪ್ಪನ್ ಪೇಟೆ: ಸೋಮವಾರ ರಾತ್ರಿ ಪಟ್ಟಣದಾದ್ಯಂತ ಸುರಿದ ಆಲಿಕಲ್ಲು ಸಹಿತ ಗುಡುಗು ಮಳೆಯಿಂದ ಹಲವು ಅನಾಹುತಗಳು ಸಂಭವಿಸಿದ್ದು, ಬಾಳೂರು ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಮರ ಉರುಳಿದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ…

Read More

ಕೆಂಚನಾಲ ಗ್ರಾಪಂ ಉಪಾಧ್ಯಕ್ಷರಾಗಿ ಹೂವಮ್ಮ ರಾಮಪ್ಪ ಅವಿರೋಧ ಆಯ್ಕೆ

ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಹೂವಮ್ಮ ರಾಮಪ್ಪ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿದ್ದ ರಮ್ಯ ಶಶಿಕುಮಾರ್ ರಾಜೀನಾಮೆ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣಾಧಿಕಾರಿ ಶಿವಪ್ರಸಾದ್ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿತ್ತು. ಸ್ಥಾನಕ್ಕೆ ಹೂವಮ್ಮ ರಾಮಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ , ಗ್ರಾಪಂ ಸದಸ್ಯರಾದ ಮಹಮ್ಮದ್ ಷರೀಫ್ , ಕೃಷ್ಣೋಜಿರಾವ್ , ಪುಟ್ಟಮ್ಮ , ರಮ್ಯ  ಪಿಡಿಓ ರವಿಕುಮಾರ್ ,…

Read More