ಚೋರಡಿ ಅಪಘಾತ – ಮತ್ತೊಬ್ಬ ಗಾಯಾಳು ಸಾವು | ನಿನ್ನೆ ಕರ್ತವ್ಯ ಪ್ರಜ್ಞೆ ಮೆರೆದ ಜಿಲ್ಲೆಯ 108 ಆಂಬ್ಯುಲೆನ್ಸ್ ಸಿಬ್ಬಂದಿಗಳು – ಅಪಘಾತದ ಸಂಪೂರ್ಣ ಮಾಹಿತಿ
ನಿನ್ನೆ ಚೋರಡಿಯಲ್ಲಿ ಸಂಭವಿಸಿದ ಭೀಕರ ಅಪಘಾತದ ಘಟನೆಯಲ್ಲಿ ಸಾವನ್ನಪ್ಪಿರುವ ಸಂಖ್ಯೆ ಮೂರಕ್ಕೆ ಏರಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಇವತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ಧಾರೆ. ನಿನ್ನೆ ಸಂಜೆ ಸುಮಾರು ಆರು ಗಂಟೆಯ ಹೊತ್ತಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಇವತ್ತು ಶಿಕಾರಿಪುರ ತಾಲೂಕಿನ ಜೋಗಿಹಳ್ಳಿ ಗ್ರಾಮದ ಮಹೇಶ್ (45 ವರ್ಷ) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕುಮದ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಹಿಂದಿನಿಂದಲೂ ಡೇಂಜರಸ್ ಸ್ಪಾಟ್. ಹಳೇಸೇತುವೆ ಪಕ್ಕದಲ್ಲಿ ಅಗಲವಾದ ಹೊಸಸೇತುವೆ ಕಟ್ಟಿ, ಹೈವೆ ಮಾಡಿದರೂ ಇಲ್ಲಿ…