ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯುವಕರ ಮೇಲೆ ಹಲ್ಲೆ – ಆಸ್ಪತ್ರೆಗೆ ದೌಡಾಯಿಸಿದ ಹಿಂದೂ ಕಾರ್ಯಕರ್ತರು|assault
ಶಿವಮೊಗ್ಗ : ಕ್ಷುಲಕ ವಿಚಾರಕ್ಕೆ ಎರಡು ಕೋಮಿನ ಯುವಕರ ಮಧ್ಯೆ ಟಿಪ್ಪು ನಗರದಲ್ಲಿ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಘಟನೆ ಕೋಮು ಸ್ವರೂಪ ಪಡೆದಿತ್ತು. ರಸ್ತೆಯಲ್ಲಿ ಹೋಗುವಾಗ ಬೈಕ್ ಮತ್ತು ಆಟೋ ತಾಗಿವೆ. ಇದೆ ವಿಚಾರಕ್ಕೆ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಸಂದೇಶ್ ಎಂಬಾತನ ಕಣ್ಣಿನ ಬಳಿ ಗಾಯವಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ….