Headlines

ರಿಪ್ಪನ್‌ಪೇಟೆ : 396 ನೇ ಶಿವಾಜಿ ಜಯಂತಿ ಆಚರಣೆ

ರಿಪ್ಪನ್‌ಪೇಟೆ : ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಮಾದರಿ. ಭಾರತೀಯರ ಕಣ ಕಣದಲ್ಲೂ ಶಿವಾಜಿಯ ಆದರ್ಶ ಗುಣಗಳು ಕರಗತವಾಗಬೇಕು. ಸಂಸ್ಕಾರಯುತ ಸಮಾಜದ ನಿರ್ಮಾಣದಲ್ಲಿ ಶಿವಾಜಿಯ ಹೋರಾಟದೊಂದಿಗೆ ಆತನಿಗೆ ಸ್ಫೂರ್ತಿ ನೀಡಿದ್ದ ತಾಯಿ ಜೀಜಾಬಾಯಿಯ ಕೊಡುಗೆಯೂ ಸ್ಮರಣೀಯ ಎಂದು ರಿಪ್ಪನ್‌ಪೇಟೆ ಮರಾಠ ಸಮಾಜದ ಅಧ್ಯಕ್ಷ ನಾಗೇಶ್ ಹೊಸಮನೆ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಾಗರ ರಸ್ತೆಯ ಶಿವಾಜಿ ಸರ್ಕಲ್  ನಡೆದ ಶಿವಾಜಿ ಜಯಂತಿ ಆಚರಣೆಯಲ್ಲಿ ಮಾತನಾಡಿ ಪರಕೀಯರ ಅಟ್ಟಹಾಸದಿಂದ ಭಾರತವನ್ನು ರಕ್ಷಿಸುವಲ್ಲಿ…

Read More

Ripponpete | ಸರ್ಕಾರಕ್ಕೆ ಸಲ್ಲಿಸಿರುವ ಬರಪೀಡಿತದ ವರದಿ ಅವೈಜ್ಞಾನಿಕ ; ತುರ್ತು ಸಮಗ್ರ ವರದಿಗೆ ಜೆಡಿಎಸ್ ಆಗ್ರಹ

ಸರ್ಕಾರಕ್ಕೆ ನೀಡಿದ ಬರಪೀಡಿತದ ವರದಿ ಅವೈಜ್ಞಾನಿಕ ; ತುರ್ತು ಸಮಗ್ರ ವರದಿಗೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ – ಶಿವಮೊಗ್ಗ ಜಿಲ್ಲೆಯಲ್ಲಿ ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿದ್ದು, ಬರಪೀಡಿತ ವರದಿ ಮಾತ್ರ ಅವೈಜ್ಞಾನಿಕವಾಗಿರುತ್ತದೆ. ಮಲೆನಾಡಿನ ಜಿಲ್ಲೆಯಲ್ಲಿ ಸಕಾಲದಲ್ಲಿ ಮಳೆ ಬರದಿದ್ದು, ಇದರಿಂದ ರೈತರು ತಮ್ಮ ಸಂಪೂರ್ಣ ಬೆಳೆಯನ್ನು ಕಳೆದುಕೊಂಡಿದ್ದು ಸರ್ಕಾರ ನೆಪಕ್ಕೆ ಮಾತ್ರ ಅಧಿಕಾರಿಗಳಿಂದ ವರದಿ ತರಿಸಿ ಶಿವಮೊಗ್ಗ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆಂದು ರಾಜ್ಯ ಜೆಡಿಎಸ್ ಪ್ರಧಾನಕಾರ್ಯದರ್ಶಿ ಆರ್.ಎ.ಚಾಬುಸಾಬ್ ಆರೋಪಿಸಿದರು. ರಿಪ್ಪನ್‌ಪೇಟೆಯಲ್ಲಿ ಇಂದು ನಾಡಕಛೇರಿಯ ಮುಂಭಾಗ ರಾಜ್ಯ…

Read More

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ ಶಿವಮೊಹ್ಗ: ಜು. 28: ಮನೆಯಲ್ಲಿಯೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪದ ಮೇರೆಗೆ, ತಮ್ಮನನ್ನು ಶಿವಮೊಗ್ಗ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಸಂತೋಷ್ (38) ಬಂಧಿತ ಆರೋಪಿಯಾಗಿದ್ದಾನೆ. ತುಂಗಾನಗರ ಠಾಣೆ ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ನೇತೃತ್ವದ ಪೊಲೀಸ್ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಸಫಲವಾಗಿದೆ. ಪ್ರಕರಣದ ಹಿನ್ನೆಲೆ : ಮೇಲಿನ ತುಂಗಾನಗರ…

Read More

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು

SHIVAMOGGA | ಪಾದಚಾರಿಗೆ ಬೈಕ್ ಡಿಕ್ಕಿ – ಸಾವು ಶಿವಮೊಗ : ಸಾಗರ ರಸ್ತೆಯ ಎಪಿಎಂಸಿ ಬಳಿ  ಹೊರಭಾಗದಲ್ಲಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ಈ ಘಟನೆಯಲ್ಲಿ ಪಾದಚಾರಿಯೊಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ರಸ್ತೆಯಲ್ಲಿ ಬರುವ ಸಾನ್ವಿ ಹೋಟೆಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಾಹನವೊಂದು ಅಪಘಾತ ಪಡಿಸಿ ನಿಲ್ಲಿಸದೆ ಮುಂದೆ ಸಾಗಿದೆ. ಅಪಘಾತದಲ್ಲಿ ಗಾಯಗೊಂಡವನನ್ನು ಸುಧಾಕರ (55) ಎಂದು ಗುರುತಿಸಲಾಗಿದೆ. ಸುಧಾಕರ್ ಶಿಕಾರಿಪುರ ತಾಲೂಕಿನ ಗಾಮ ಗ್ರಾಮದ ನಿವಾಸಿಯಾಗಿದ್ದು, ಶಿವಮೊಗ್ಗದಲ್ಲಿ ಪರಿಚಯಸ್ಥರು ಮನೆಕಟ್ಟಿಸುತ್ತಿದ್ದರಿಂದ ವಾಚರ್…

Read More

ಜೀವನದಲ್ಲಿ ಜಿಗುಪ್ಸೆಗೊಂಡ ರಿಪ್ಪನ್‌ಪೇಟೆಯ ಆಟೋ ಚಾಲಕ ಕಳೆನಾಶಕ ಸೇವಿಸಿ ಸಾವು|crime news

ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದಲ್ಲಿ ನಡೆದಿದೆ. ಬೆಳಕೋಡು ನಿವಾಸಿ ಬಿನೋಯ್ ಸ್ಕರಿಯಾ(52) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.  ರಿಪ್ಪನ್‌ಪೇಟೆ ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಆಟೋ ಚಾಲಕನಾಗಿದ್ದ ಬಿನೋಯ್ ಸ್ಕರಿಯಾ ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.ಆಟೋ ಓಡಿಸುವುದನ್ನು ಒಂದು ವರ್ಷದಿಂದ ನಿಲ್ಲಿಸಿದ್ದರು.ಅವರು ನಿನ್ನೆ ರಾತ್ರಿ ಬೆಳಕೋಡು ಗ್ರಾಮದಲ್ಲಿರುವ ಮನೆಯಲ್ಲಿ ಕಳೆನಾಶಕ ವಿಷ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು.  ಈ ವೇಳೆ…

Read More

ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ

ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ ಬಂಕಾಪುರ್ : ಹಾವೇರಿ ಜಿಲ್ಲೆಯ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಹಾವೇರಿ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಶಿಗ್ಗಾವಿ ತಾಲೂಕಿನ ಪತ್ರಕರ್ತರಾದ ಪರಸಪ್ಪ ಸತ್ಯಪ್ಪನವರ ಅವರು ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ಬಂಕಾಪುರ ಪಟ್ಟಣದ ಶ್ರೀ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವಕ ಮಂಡಳಿ ಯುವಕರು ಪರಸಪ್ಪ ಸತ್ಯಪ್ಪನವರ ಅವರಿಗೆ…

Read More

ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ

ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ ಆನಂದಪುರ ನಿವಾಸಿಯಾಗಿರುವ ಹೊಸನಗರ ತಾಲೂಕಿನ ಚಿಕ್ಕಜೇನಿ ಪ್ರೌಢ ಶಾಲಾ ಶಿಕ್ಷಕ ಎನ್.ಡಿ.ಹೆಗಡೆಗೆ ಅಕ್ಷರ ದೀಪ ಪೌಂಡೇಶನ್ (ರಿ) ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದೆ. ಸೆ‌.29 ರ ಭಾನುವಾರ ಬೆಳಿಗ್ಗೆ ಶಿರಸಿಯಲ್ಲಿ ನಡೆಯುವ ಮಲೆನಾಡ ಅಕ್ಷರೋತ್ಸವ -2024 ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ಉತ್ತರ ಕನ್ನಡ ಇದರ ಕಚೇರಿ ಪ್ರಕಟಣೆಯಲ್ಲಿ…

Read More

ರಿಪ್ಪನ್‌ಪೇಟೆ : ದನದ ಕೊಟ್ಟಿಗೆಯ ಹಂಚನ್ನು ಕಿತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಡಬ್ಬಲ್ ಮರ್ಡರ್​ ಬೆದರಿಕೆ !!! ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ದನದ ಕೊಟ್ಟಿಗೆಯ ಹಂಚು ಕಿತ್ತುಹಾಕಿದ್ದನ್ನ ಪ್ರಶ್ನಿಸಿದ್ದಕ್ಕೆ ಈ ಮನೆಯಲ್ಲಿ ಎರಡು ಕೊಲೆಯಾಗುತ್ತದೆ ಎಂದು ಜೀವ ಬೆದರಿಕೆ ಹಾಕಿದ ಘಟನೆ ಇಲ್ಲಿನ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು? ಬೆನವಳ್ಳಿ ಗ್ರಾಮದ ನಿವಾಸಿ ನಾಗರಾಜ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಯ ಹಂಚನ್ನು ಚಂದ್ರಪ್ರಸಾದ್ ಎಂಬವರು ಏಕಾಏಕಿ  ಕಿತ್ತುಹಾಕಿದ್ದರು. ಈ ಹಿನ್ನೆಲೆಯಲ್ಲಿ ಅದನ್ನು ಸಂತ್ರಸ್ತರು ಪ್ರಶ್ನಿಸಿದ್ದಾರೆ. ಈ ವೇಳೇ ಅವರನ್ನು ನಿಂದಿಸಿದ್ದಷ್ಟೆ ಅಲ್ಲದೆ, ಈ ಮನೆಯಲ್ಲಿ ಎರಡು ಕೊಲೆಯಾಗಲಿದೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತರು…

Read More

ಸೊರಬ ಪುರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಜ್ಜು:

ಸೊರಬ: ಅಚ್ಚರಿಯ ಬೆಳವಣಿಗೆಯಲ್ಲಿ ಜಿಲ್ಲೆಯ ಸೊರಬ ಪುರಸಭೆ ಸದಸ್ಯರು ಪುರಸಭೆಯ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಅವಕಾಶ ನೀಡುವಂತೆ ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮೆಟ್ಟಿಲೇರಿದ್ದಾರೆ. ಸೊರಬ ಪುರಸಭ ಅಧ್ಯಕ್ಷ ಎಂ.ಡಿ.ಉಮೇಶ್ ಅವರ ನಡುವಳಿಕೆಯಿಂದ ಬೇಸತ್ತು ಇಂದು ಪುರಸಭೆಯ 11 ಜನ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿಯ ಬಾಗಿಲು ತಟ್ಟಿದ್ದಾರೆ. 12 ಜನ ಸದಸ್ಯರಿರುವ ಸೊರಬ ಪುರಸಭೆಯಲ್ಲಿ 6 ಜನ ಸದಸ್ಯರು ಬಿಜೆಪಿ ಪಕ್ಷದ ಸದಸ್ಯರಿದ್ದು 4 ಜನ ಕಾಂಗ್ರೆಸ್, ಒಬ್ಬರು ಜೆಡಿಎಸ್ ಒಬ್ಬರು ಪಕ್ಷೇತರರಿದ್ದಾರೆ. ವಿಪಕ್ಷ ನಾಯಕ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಬಗ್ಗೆ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಬಗ್ಗೆ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸಾರ್ವಜನಿಕರಿಗೆ ಸಮರ್ಪಕವಾಗಿ ಸ್ಪಂದಿಸುತಿದ್ದು ಯಾವುದೇ ರೀತಿಯಲ್ಲಿಯೂ ತೊಂದರೆಯಾಗುತ್ತಿಲ್ಲ ಬಿಜೆಪಿ ಪಕ್ಷದ ಮುಖಂಡರು ಶಾಸಕ ಬೇಳೂರು ಗೋಪಾಲಕೃಷ್ಣ ರವರ ಕಾರ್ಯ ವೈಖರಿಯನ್ನು ಸಹಿಸದೇ ಆಸ್ಪತ್ರೆಯ ಬಗ್ಗೆ ನಿರಾಧಾರ ಆರೋಪ ಮಾಡುತಿದ್ದಾರೆ ಎಂದು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಹೇಳಿದರು. ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ…

Read More