ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ ಶಂಕೆ – ಆತಂಕದಲ್ಲಿ ಗ್ರಾಮಸ್ಥರು|leopard attack
ಶಿವಮೊಗ್ಗ(Shivamogga): ತಾಲ್ಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ರೈತ ಮಹಿಳೆ ಮೇಲೆ ಚಿರತೆ(leopard) ದಾಳಿ ನಡೆಸಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಬಿಕ್ಕೋನಹಳ್ಳಿ ಗ್ರಾಮದ ಯಶೋದಮ್ಮ (45) ಮೃತ ಮಹಿಳೆ. ಬೆಳಗ್ಗೆ ಹೊಲಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಾಸ್ ಬಂದಿರಲಿಲ್ಲ. ಫೋನ್ ಮಾಡಿದಾಗಲೂ ಸಿಗದ ಕಾರಣ ಸಂಜೆ ಹುಡುಕಿಕೊಂಡು ಬಂದಾಗ ವನ್ಯಪ್ರಾಣಿ ದಾಳಿಗೆ ಒಳಗಾಗಿರುವುದು ತಿಳಿದುಬಂದಿದೆ. ಮಹಿಳೆಯ ಕುತ್ತಿಗೆ, ದೇಹದ ಹಿಂಭಾಗವನ್ನು ತಿಂದಿರುವುದು ನೋಡಿ ರೈತರು ಭಯಗೊಂಡಿದ್ದಾರೆ.ಯಶೋದಮ್ಮ ಅವರ ಮೇಲೆ ಚಿರತೆ ದಾಳಿ (Attack) ನಡೆಸಿರುವ…