Headlines

ಬಸ್ಸು ಮತ್ತು ಕಾರಿನ ನಡೆವೆ ಭೀಕರ ಅಪಘಾತ – ಓರ್ವ ಗಂಭೀರ|accident

ಬಸ್ಸಿಗೆ ಡಿಕ್ಕಿ ಹೊಡೆದ ಕಾರು – ಒಬ್ಬರಿಗೆ ಗಂಭೀರ ಗಾಯ   ಶಿವಮೊಗ್ಗ : ಗಾಜನೂರು ಸಮೀಪ ಕಾರು ಮತ್ತು ಬಸ್‌ ಮುಖಾಮುಖಿ ಡಿಕ್ಕಿಯಾಗಿವೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಮಧ್ಯೆ ಅಪಘಾತವಾಗಿದೆ. ಗಾಜನೂರಿನ ಮೊರಾರ್ಜಿ ಶಾಲೆ ಬಳಿ ಓವರ್‌ ಟೇಕ್‌ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬರಿಗೆ ಗಂಭೀರ…

Read More

ಮಾನಸಿಕ ಖಿನ್ನತೆಗೊಳಗಾಗಿದ್ದ ಹೊಸನಗರ ತಾಲೂಕಿನ ಯುವಕನನ್ನು ಭೇಟಿಯಾದ ಚಿತ್ರನಟ ದರ್ಶನ್ – ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ|DBOSS

ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾಗಿದ್ದ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕನನ್ನು ದರ್ಶನ್ ಇಂದು ಭೇಟಿಯಾಗಿದ್ದಾರೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ ಅಭಿಮಾನವನ್ನಿಟ್ಟು ಕೊಂಡಿರುವ ಸುದೀಪ ದರ್ಶನ್ ರವರನ್ನು ಹಲವು ಬಾರಿ ಭೇಟಿ ಮಾಡಲು ಪ್ರಯತ್ನಿಸಿ ವಿಫಲನಾಗಿ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಯುವಕನ ಬಗ್ಗೆ ಇತ್ತೀಚಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಗಮನಕ್ಕೆ ಬಂದಿತ್ತು. ಈ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆ ಕಳೆದ ವಾರ ಯುವಕನನ್ನು ಆತನ ಮನೆಯಲ್ಲಿ ಭೇಟಿ ಮಾಡಿ ಸಂದರ್ಶಿಸಿ ಈ…

Read More

ರಿಪ್ಪನ್‌ಪೇಟೆ : ಅಕ್ರಮ ಗಣಿಗಾರಿಕೆ ಮೇಲೆ ದಾಳಿ – ಎರಡು ಲಾರಿ,ಟ್ರಾಕ್ಟರ್ ಮತ್ತು ಜಂಬಿಟ್ಟಿಗೆ ಕೊಯ್ಯುವ ಯಂತ್ರ ವಶಕ್ಕೆ|illegal mining

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಯಂತ್ರ ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಮದೂರು ಮತ್ತು ಹೊನಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಜಂಬಿಟ್ಟಿಗ್ಗೆ ಗಣಿಗಾರಿಕೆ ನಡೆಸುತಿದ್ದ ಪ್ರದೇಶಕ್ಕೆ ದಾಳಿ ನಡೆಸಿ ಎರಡು ಲಾರಿ ,ಒಂದು ಟ್ರಾಕ್ಟರ್ ಮತ್ತು ಜಂಬಿಟ್ಟಿಗ್ಗೆ ಕೊಯ್ಯುವ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ. ಭೂ ಮತ್ತು ಗಣಿ…

Read More

ರಿಪ್ಪನ್‌ಪೇಟೆ : ನಾಯಿ ದಾಳಿ – 25 ಕುರಿಗಳ ಬಲಿ

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ,ಅರಸಾಳು ವ್ಯಾಪ್ತಿಯಲ್ಲಿ ಇತ್ತೀಚಿಗೆ ಚಿರತೆಯಿಂದ ಆತಂಕಕ್ಕೊಳಗಾಗಿರುವ ರೈತರಿಗೆ ಈಗ ನಾಯಿಗಳ ಕಾಟದಿಂದಾಗಿ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ. ಅರಸಾಳು ಸಮೀಪ ಮಾಣಿಕೆರೆ ಗ್ರಾಮದಲ್ಲಿ ಬುಧವಾರ ನಾಯಿಗಳ ದಾಳಿಗೆ ವೇಲಾಯದನ್ ಅವರಿಗೆ ಸೇರಿದ ಸುಮಾರು 25 ಕುರಿಗಳು ಬಲಿಯಾಗಿವೆ. ಎಂದಿನಂತೆ ವೇಲಾಯದನ್ ಮಾಣಿಕೆರೆ ಗ್ರಾಮದಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದಾರೆ. ಆಗ ಮನೆಯ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಗಳ ಹಿಂಡು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಲು ಆರಂಭಿಸಿವೆ. ವಿಷಯ ತಿಳಿದು ಸ್ಥಳಕ್ಕೆ ಹೋಗುವ…

Read More

ತೀರ್ಥಹಳ್ಳಿ ಪಟ್ಟಣದ ಮಧ್ಯ ಭಾಗದಲ್ಲೇ ವೇಶ್ಯಾವಾಟಿಕೆ : ತಡರಾತ್ರಿ ದಾಳಿ,ಮೂವರು ಮಹಿಳೆಯರ ರಕ್ಷಣೆ – ಹಲವರ ಬಂಧನ..??|TTH

ತೀರ್ಥಹಳ್ಳಿ: ರಾಜ್ಯಾದ್ಯಂತ ಸುದ್ದಿಯಾಗಿದ್ದ ಎಬಿವಿಪಿ ಅಧ್ಯಕ್ಷನ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಪ್ರತೀಕ್ ಗೌಡನ ಮೇಲೆ ತೀರ್ಥಹಳ್ಳಿ ಪೊಲೀಸರು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ ಜೈಲಿಗೆ ಕಳುಹಿಸಿದ್ದಾರೆ. ಇದರ ನಡುವೆ ತೀರ್ಥಹಳ್ಳಿ ಪಟ್ಟಣದಲ್ಲಿ ಮತ್ತೊಂದು ವೇಶ್ಯಾವಾಟಿಕೆ ದಂಧೆ ಬುಧವಾರ ರಾತ್ರಿ ಬಯಲಾದ ಬಗ್ಗೆ ಮೂಲಗಳು ತಿಳಿಸಿವೆ. ಸಿಟಿ ಮದ್ಯದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಿದ ಪ್ರಕರಣದಲ್ಲಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರಿಂದ ಮಾಹಿತಿ ಇನ್ನಷ್ಟೇ ತಿಳಿದು…

Read More

ಆಸ್ಪತ್ರೆಯ ನಿರ್ಲಕ್ಷವೋ.. ಬಡ ಕುಟುಂಬದ ದುರಂತವೋ..?ಇಂಜೆಕ್ಷನ್ ನೋವಿನಿಂದ ಕಾಲು ಕಳೆದುಕೊಳ್ಳುವ ಭೀತಿಯಲ್ಲಿ ಬಾಲಕಿ.!!!!|Nagara

ಆಸ್ಪತ್ರೆಯ ನಿರ್ಲಕ್ಷವೋ.. ಬಡ ಕುಟುಂಬದ ದುರಂತವೋ..? ಕಾಲು ಕಳೆದುಕೊಳ್ಳುವ ಭೀತಿಯಲ್ಲಿ ಬಾಲೆ.!!!! ವರದಿ : ರವಿ ಬಿದನೂರು ಹೊಸನಗರ: ಆಕೆಗಿನ್ನು 7 ವರ್ಷ. ಮನೆಯಂಗಳದಲ್ಲಿ ಆಟ ಆಡಿಕೊಂಡಿದ್ದ ಬಾಲಕಿ ಇದೀಗ ಕಾಲನ್ನೇ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾಳೆ. ಇದು ಹೆತ್ತಕರುಳಿಗೆ ಬೆಂಕಿ ಇಟ್ಟಂತಾಗಿದೆ. ಹೌದು ಇದು ಮೂಡುಗೊಪ್ಪ ಗ್ರಾಪಂ, ಬೈಸೆ ಗ್ರಾಮದ ಸುಳುಗೋಡಿನ ಬಡ ಕುಟುಂಬದ ರೋಧನ ಇದು. ಅಂಬಿಕಾ ಮತ್ತು ಸುಂದರ ದಂಪತಿಗಳ ಮಗಳು ಶ್ರವಂತಿಯ ಇಂದಿನ ಧಾರುಣ ಸ್ಥಿತಿ ಮುಂದೇನು ಅನ್ನುವ ಪ್ರಶ್ನೆ ಹುಟ್ಟುಹಾಕಿದೆ. ಏನಿದು…

Read More

ಅನಾಥ ಮಹಿಳೆಗೆ ಬಾಳು ಕೊಟ್ಟ ಯುವಕನಿಗೆ ಬರೋಬ್ಬರಿ ಏಳು ವರ್ಷಗಳ ನಂತರ ಬಿಗ್ ಶಾಕ್|cheating

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬಳ ಟ್ರ್ಯಾಪ್​ನಲ್ಲಿ ಸಿಲುಕಿದ ಯುವಕನೊಬ್ಬ ಇದೀಗ ತನಗಾದ ಮೋಸದ ಬಗ್ಗೆ ಕೋರ್ಟ್​ ಮೆಟ್ಟಿಲೇರಿದ್ದಷ್ಟೆ ಅಲ್ಲದೆ ಈ ಸಂಬಂಧ ಪೇಪರ್​ ಟೌನ್​ ಪೊಲೀಸ್ ಸ್ಠೇಷನ್​ನಲ್ಲಿ ದೂರು ನೀಡಿದ್ಧಾರೆ. ಆತ ದಾಖಲಿಸಿದ ದೂರು ದಾಖಲಾದ ಎಫ್​ಐಆರ್​ ಪ್ರಕಾರ, ನಡೆದಿದ್ದಿಷ್ಟು! 2015 ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ ಕಾಳಿಂಗೇಶ್ವರ ದೇವಾಲಯದಲ್ಲಿ ಯುವಕನೊಬ್ಬ ಮದುವೆಯಾಗಿದ್ದರು. ಅನಾಥ ಹುಡುಗಿಯನ್ನು ಯಾವುದೇ ಡಿಮ್ಯಾಂಡ್ ಇಲ್ಲದೇ ಮದುವೆಯಾದ ಯುವಕ, ಮದುವೆ ಖರ್ಚನ್ನ ಕೂಡ ಖುದ್ಧಾಗಿ ವ್ಯಯಿಸಿದ್ರು. ಆದರೆ ಅನಾಥಳು ಎಂದು ಹೇಳಿ…

Read More

ಸಿಇಟಿ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ರಿಪ್ಪನ್‌ಪೇಟೆಯ ಶಂಕರ್ ಪಟೇಲ್|CET

ರಿಪ್ಪನ್‌ಪೇಟೆ : ಸಿಇಟಿ ಪರೀಕ್ಷೆಯಲ್ಲಿ ಪಟ್ಟಣದ ಸಾಗರ ರಸ್ತೆಯ ಯುವಕ ಶಂಕರ್ ಪಟೇಲ್ 976 ನೇ ರ‍್ಯಾಂಕ್‌ ಉತ್ತಮ ಸಾಧನೆಗೈದಿದ್ದಾನೆ. ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರ (ಕೆಇಎ) ನಡೆಸಿದ ʻಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆʼಯ (KCET 2023) ಫಲಿತಾಂಶ (KCET 2023 Result) ಪ್ರಕಟವಾಗಿದ್ದು ಕಾರ್ಕಳದ ಜ್ಞಾನ ಸುಧಾ ಕಾಲೇಜಿನ ಶಂಕರ್ ಪಟೇಲ್ 976ನೇ ರ‍್ಯಾಂಕ್‌ ಪಡೆದು ಉತ್ತಮ ಸಾಧನೆಗೈದಿದ್ದಾರೆ. ಪಟ್ಟಣದ ಉದ್ಯಮಿ ಕೆ ಎಂ ಉಮೇಶ್ ಮತ್ತು ರಾಜೇಶ್ವರಿ ದಂಪತಿಗಳ ಪುತ್ರ ಶಂಕರ್…

Read More

ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ – ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ|NES

ಎನ್.ಇ.ಎಸ್ ಹಬ್ಬದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಮತ ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ ಶಿವಮೊಗ್ಗ : ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಪ್ರಾಯಪಟ್ಟರು. ಬುಧವಾರ ನಗರದ ಎನ್ಇಎಸ್ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಸಮಾರೋಪ ಸಮಾರಂಭದ ‘ಎನ್.ಇ.ಎಸ್ ಹಬ್ಬ’ ಸಮಾರೋಪ ಮಾತುಗಳನ್ನಾಡಿದರು. ವಿದ್ಯಾಸಂಸ್ಥೆಗಳಲ್ಲಿ ನೈತಿಕ ಶಿಕ್ಷಣ ನೀಡುವ ಕುರಿತು ಸರ್ಕಾರ ಹೆಚ್ಚು ಚಿಂತನೆ‌ ನಡೆಸಬೇಕಿದೆ. ನೈತಿಕ…

Read More

ಸಾಗರದಲ್ಲಿನ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ|Application

ಸಾಗರ : 2023-24 ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನಿಸಿದೆ. ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳು ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಹಾಗೂ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶ http://shp.karnataka.gov.in ರಲ್ಲಿ ಜು.16 ರೊಳಗಾಗಿ ಅರ್ಜಿಯನ್ನು ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ…

Read More