ಬಿಸ್ಕೆಟ್ ಪ್ಯಾಕ್ ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ

ಬಿಸ್ಕೆಟ್ ಪ್ಯಾಕ್ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಗಾಂಜಾ ಮತ್ತು ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ. ಭದ್ರಾವತಿ ನಗರದ ನಿವಾಸಿಗಳಾದ ರಾಹಿಲ್ (19) ಹಾಗೂ ತಸೀರುಲ್ಲಾ (19) ಬಂಧಿತ ಆರೋಪಿಗಳಾಗಿದ್ದಾರೆ. ಸಂಜೆ 4.30ರ ಸುಮಾರಿಗೆ ಕೈದಿ ಮೊಹಮ್ಮದ್ ಗೌಸ್ ಅಲಿಯಾಸ್ ಜಂಗ್ಲಿ ಎಂಬಾತನ ಸಂದರ್ಶನಕ್ಕೆಂದು ಆಗಮಿಸಿದ್ದ ಈ ಇಬ್ಬರು ಯುವಕರು ಮೂರು ವೀಟಾ ಮಾರಿ ಗೋಲ್ಡ್ ಬಿಸ್ಕೆಟ್ ಪ್ಯಾಕೆಟ್‌ಗಳನ್ನು…

Read More

ದಿ|| ಕೂರಂಬಳ್ಳಿ ಯಲ್ಲನಾಯ್ಕ ರವರ ಧರ್ಮಪತ್ನಿ ಕಗಚಿ ಸಿದ್ದಮ್ಮ ನಿಧನ

ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ದಿವಂಗತ ಕೂರಂಬಳ್ಳಿ ಯಲ್ಲನಾಯ್ಕ ರವರ ಧರ್ಮಪತ್ನಿ ಕಗಚಿ ಸಿದ್ದಮ(95) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಬುಧವಾರ ಸಂಜೆ ಕಗಚಿ ಗ್ರಾಮದ ತಮ್ಮ ಸ್ವಗೃಹದಲ್ಲೇ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರಾದ ಬೋರಪ್ಪನಾಯ್ಕ ಮತ್ತು ಯೋಗೇಂದ್ರ ಕೆ ವೈ ಹಾಗೂ ಮೂವರು ಪುತ್ರಿಯರು ಮತ್ತು ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು(ಗುರುವಾರ) ಕಗಚಿ ಗ್ರಾಮದಲ್ಲಿ ಈಡಿಗ ಸಂಪ್ರದಾಯದಂತೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

Read More

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಕಮ್ಮಚ್ಚಿ ಗ್ರಾಮದಲ್ಲಿ ಅಡಿಕೆ ಮರಕ್ಕೆ ಔಷದಿ ಸಿಂಪಡಿಸುವಾಗ ಮರದಿಂದ ಕೆಳಗೆ ಬಿದ್ದು ರೈತನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಮ್ಮಚ್ಚಿ ಗ್ರಾಮದ ಪ್ರದೀಪ್ ಟಿ ಕೆ (42) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಮ್ಮಚ್ಚಿ ಗ್ರಾಮದಲ್ಲಿ ಇಂದು ಸಂಜೆ 4 ಗಂಟೆ ಸಮಯದಲ್ಲಿ ಅಡಿಕೆ ತೋಟಕ್ಕೆ ಔಷಧಿ ಸಿಂಪಡಿಸುತಿದ್ದ ರೈತ ಪ್ರದೀಪ್ ಆಯ ತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು…

Read More

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು,ಓರ್ವ ಗಂಬೀರ|Accident

ಲಾರಿ ಮತ್ತು ಬೊಲೇನೋ ಕಾರಿನ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಬೊಲೆನೋ ವಾಹನದಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಮೂವರು ದಾವಣಗೆರೆಯ ಬಿಐಟಿ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.   ಶಿವಮೊಗ್ಗದ ಸವಳಂಗ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಸಾವು ಕಂಡವರನ್ನ ಕಾರ್ತಿಕ್, ಮೋಹನ್ ಮತ್ತು ವಿವೇಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೊಲೆನೋ ವಾಹನವನ್ನು ಚಲಾಯಿಸುತ್ತಿದ್ದನು ಎಂದು…

Read More

ಮೆಸ್ಕಾಂ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 183 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗೆ ಮುಂದಾಗಲಾಗಿದೆ. ಆನ್‌ಲೈನ್ ಮೂಲಕ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 15 ಆಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ. ಸಂಸ್ಥೆಯ ಹೆಸರು: ಮಂಗಳೂರು ವಿದ್ಯುತ್…

Read More

KTM ಬೈಕ್ ಅಪಘಾತ – ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ಕಾನೇಹಳ್ಳ ಕ್ರಾಸ್ ಬಳಿ ನಡೆದಿದ್ದು ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಾಜನೂರಿನ ಐಟಿಐ ಕಾಲೇಜಿನ ವಿದ್ಯಾರ್ಥಿಗಳಾದ ನಿಸಾರ್ ಆರ್ ಎಂ (20 ವರ್ಷ) ಮತ್ತು ಯಶವಂತ (20 ವರ್ಷ) ಕಾಲೇಜಿಗೆ ತೆರಳುವಾಗ ಅಪಘಾತ ಸಂಭವಿಸಿ ಇಬ್ಬರು ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.‌ ಕೆಟಿಎಂ ಬೈಕ್ ನಲ್ಲಿ ಇಬ್ಬರು ಕಾಲೇಜಿಗೆ ಹೋಗುವಾಗ ಕಾನೇಹಳ್ಳದ…

Read More

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್ ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒಂದು ತಿಂಗಳಿಗೆ ಸಾಕಾಗುವಷ್ಟು ಪರೀಕ್ಷಾ ಕಿಟ್‌ಗಳನ್ನು ಸಂಗ್ರಹಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್​ ಗುಂಡೂರಾವ್​, ಒಂದು…

Read More

Accident | ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು !

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು ! ಹೊಸನಗರ(Hosanagara) : ಕಳೆದ ಒಂದೂವರೆ ತಿಂಗಳ ಹಿಂದೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಬುಧವಾರ ಮಂಗಳೂರಿನ(Manglore) ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಅರಸಾಳು(arasalu) ಗ್ರಾಪಂ ವ್ಯಾಪ್ತಿಯ ಬಸವಾಪುರ(basavapura) ಗ್ರಾಮದ ಶ್ರೀನಾಥ್ (33) ಮೃತ ವ್ಯಕ್ತಿ. ಕಳೆದ ಡಿಸೆಂಬರ್ 2 ಕೊಳವಂಕ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಶ್ರೀನಾಥ್ ರವರ ತಲೆ ಮತ್ತು ಕಣ್ಣಿನ ಭಾಗಕ್ಕೆ…

Read More

ಐತಿಹಾಸಿಕ ಕಲ್ಯಾಣೇಶ್ವರ ದೇವಾಲಯದ ನೂತನ ಶಿಲಾಮಯ ಹಾಗೂ ಪುನರ್ ಪ್ರತಿಷ್ಠಾಪನೆಗೆ ಕ್ಷಣಗಣನೆ! ಭಕ್ತರ ಮದುವೆಯ ಶುಭ ಕಾರ್ಯದ ಬೇಡಿಕೆಯು ಬಹುಬೇಗನೆ ಪೂರೈಸುವ ಶ್ರೀ ಕಲ್ಯಾಣೇಶ್ವರ

ಹೊಸನಗರ :ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಸಮೀಪ ವಾರಂಬಳ್ಳಿ ಯ ಸರಿಸುಮಾರು ಎಂಟು, ಮತ್ತು ಹತ್ತನೇ ಶತಮಾನದ  ಐತಿಹಾಸಿಕ ಸುಪ್ರಸಿದ್ಧ  ಶಿವನ ಆಲಯ ಕಲ್ಯಾಣಿ ಶ್ವರ ದೇವಸ್ಥಾನದ ಸಪರಿವಾರ ಕಲ್ಯಾಣಿಶ್ವರನ ಶಿಲಾಮಯ ಹಾಗೂ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು. ಫೆಬ್ರವರಿ 2ರಂದು ಪುನರ್ ಪ್ರತಿಷ್ಠಾಪನೆ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು  ಮರುದಿನ ಬ್ರಹ್ಮಕಲಶೋತ್ಸವ ಹಾಗೂ ಪೂರ್ಣಾಹುತಿಯನ್ನು ಶ್ರೀ ಸದಾನಂದ ಶಿವಯೋಗ ಆಶ್ರಮದ ಶ್ರೀ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳಿಂದ ನೆರವೇರಲಿದೆ. ದೇವಾಲಯದ ಐತಿಹಾಸಿಕ ಹಿನ್ನೆಲೆ : ದೇವಸ್ಥಾನದ ಐತಿಹಾಸಿಕ…

Read More

ಶರಾವತಿ ಹಿನ್ನಿರಿನಲ್ಲಿ ಸರಾಗವಾಗಿ ಈಜುತ್ತಿದ್ದ ಯುವಕ ಸ್ವಿಮ್ಮಿಂಗ್ ಫೂಲ್ ನಲ್ಲಿ ಮುಳುಗಿ ಸಾವು :

ಶಿವಮೊಗ್ಗದ ಸಿಂಹಧಾಮದ ಬಳಿ ಇರುವ ಖಾಸಗಿ  ಈಜುಕೊಳದಲ್ಲಿ ಈಜಲು ಹೋದ ಯುವಕನೊಬ್ಬ ಶವವಾಗಿ ಪತ್ತೆಯಾಗಿದ್ದಾನೆ.  ಸ್ನೇಹಿತರೊಂದಿದೆ ಈಜಲು ಹೋಗಿದ್ದ ಅನಿಲ್ ಕುಮಾರ್ ಎಂಬ ಯುವಕ ಶವವಾಗಿ ಪತ್ತೆಯಾಗಿದ್ದಾನೆ.  ಈತನ ಸಾವಿನ ಬಗ್ಗೆ ಆತನ ಕುಟುಂಬ ವರ್ಗದಿಂದ ಅನುಮಾನ ವ್ಯಕ್ತವಾಗಿದೆ. ಹೊಸನಗರದ ಶರಾವತಿ ಹಿನ್ನೀರಿನಲ್ಲಿ ಸರಾಗವಾಗಿ ಈಜುಹೊಡೆಯುವ ಅನಿಲ್ ಕುಮಾರ್ ಈಜುಕೊಳದಲ್ಲಿ ಶವವಾಗಿ ಪತ್ತೆಯಾಗಿರುವುದಕ್ಕೆ ಕುಟುಂಬ ಅನುಮಾನ ವ್ಯಕ್ತಪಡಿಸಿದೆ. ಶಿವಮೊಗ್ಗದ ಸಿಂಹಧಾಮದ ಹಿಂಭಾಗದಲ್ಲಿ ಬರುವ ಕರಣ್ ಸ್ವಿಮ್ಮಿಂಗ್ ಫೂಲ್ ನಲ್ಲಿ ಅನಿಲ್ ಕುಮಾರ್ ನಿನ್ನೆ ಸ್ವಿಮ್ಮಿಂಗ್ ಫೂಲ್ ನಲ್ಲಿ…

Read More
Exit mobile version