Headlines

ನಾಪತ್ತೆಯಾಗಿದ್ದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ 5ms ಕಾಡಿನಲ್ಲಿ ಪತ್ತೆ

The body of a 25-year-old missing youth from Marnamibailu near Huncha was found in a decomposed and hanging condition near the 5MS area. Police have shifted the body to Meggan Hospital in Shivamogga for postmortem and registered a case for further investigation. ರಿಪ್ಪನ್‌ಪೇಟೆ : ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವಕನೊಬ್ಬನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ….

Read More

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!!

Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!! ಹೊಸನಗರ ತಾಲ್ಲೂಕಿನ ಅಲಗೇರಿಮಂಡ್ರಿ ವ್ಯಾಪ್ತಿಯ ಮುಡುಬಾ ಗ್ರಾಮದಲ್ಲಿ ಅಂದರ್ ಬಾಹರ್ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ ನಗದು ಸಮೇತ ಎಂಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುಡುಬಾ ಗ್ರಾಮದಲ್ಲಿ 10 ಜನರು ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿಯವರ ನೇತೃತ್ವದಲ್ಲಿ ದಾಳಿ ನಡೆಸಿ…

Read More

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ ಮಾಡುವ ಮೂಲಕ ಭಾವುಕ ಕಾರ್ಯಕ್ರಮಕ್ಕೆ ಗ್ರಾಮಾಂತರ ಪೊಲೀಸ್ ಸ್ಟೇಷನ್ ಸಾಕ್ಷಿಯಾಯಿತು. ಮಹಿಳಾ ಪೊಲೀಸ್ ಸಿಬ್ಬಂದಿ ರೇಖಾ ರವರಿಗೆ ಠಾಣೆಯ ಸಹ ಸಿಬ್ಬಂದಿಗಳು ಹಾಗೂ ಹಿರಿಯ ಅಧಿಕಾರಿಗಳು ಸೀಮಂತ ಕಾರ್ಯ ಮಾಡುವ ಮೂಲಕ…

Read More

ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ದ ತೀವ್ರ ಪ್ರತಿಭಟನೆ:ಹೆಚ್ ಎಸ್ ಸುಂದರೇಶ್

ಶಿವಮೊಗ್ಗ: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಇದಕ್ಕೆ ಲಗಾಮ ಹಾಕುವವರೇ ಇಲ್ಲವಾಗಿದೆ. ಇದರ ವಿರುದ್ಧ ಕಾಂಗ್ರೆಸ್ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಿಂದ ಹಿಡಿದು ಪಕ್ಷದ ಸಾಮಾನ್ಯ ಕಾರ್ಯಕರ್ತನವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಯಾವುದೇ ಹೊಸ ಯೋಜನೆಗಳು ಬಂದರೂ ಕೂಡಾ ಕಿಕ್‍ಬ್ಯಾಕ್ ಸಿದ್ಧವಾಗಿಯೇ ಇರುತ್ತದೆ. ಶೇ.20ರಷ್ಟು ಗುಣಮಟ್ಟದ ಕೆಲಸವನ್ನು ಮಾಡುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಬೇಕಾಬಿಟ್ಟಿ ಕೆಲಸಗಳು ನಡೆಯುತ್ತಿದೆ. ಕಳಪೆ ರಸ್ತೆಯಿಂದ ಹಿಡಿದು…

Read More

ರಸ್ತೆಗೆ ವಾಲಿದ ವಿದ್ಯುತ್ ಕಂಬ : ಆತಂಕದಲ್ಲಿ ಸಾರ್ವಜನಿಕರು|mescom

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ತಳಲೆ ಗ್ರಾಮದ ಬಾಳೆಕೊಡ್ಲು ಬಳಿ ಮುಖ್ಯ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಬಾಗಿದ್ದು, ರಸ್ತೆಯಲ್ಲಿ ಓಡಾಡಲು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಬಳಿಯ ಬೆಳ್ಳೂರು ಸಂಪರ್ಕ ರಸ್ತೆಯಲ್ಲಿ 11 ಕೆ ವಿ ವಿದ್ಯುತ್ ಕಂಬ ಅಪಾಯದ ಸ್ಥಿತಿಯಲ್ಲಿ ಇದ್ದರು ಸಹ ಮೆಸ್ಕಾಂ  ಇಲಾಖೆ ಜಾಣ ಕುರುಡು ನೀತಿ ಅನುಸರಿಸುತ್ತಿದೆ. ಈ 11 ಕೆ ವಿ ವಿದ್ಯುತ್ ಕಂಬವು ಶಿಥಿಲಗೊಂಡು ರಸ್ತೆಗೆ ಬಾಗಿದ್ದು, ಜೋರಾಗಿ ಗಾಳಿ ಬೀಸಿದಲ್ಲಿ ಮುರಿದು ಬೀಳಲಿದೆ….

Read More

ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು

ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು ಶಿವಮೊಗ್ಗ:  ಸುಮಾರು ೨೦ಕ್ಕ್ಕೂ ಹೆಚ್ಚು ಪ್ರಕರಣಗಳ ಆರೋಪಿಯಾಗಿರುವ, ಕೊಲೆ ಯತ್ನದ ಪ್ರಕರಣಕ್ಕೆ  ಸಂಬಂಧಿಸಿ ಭದ್ರಾವತಿ ಪೇಪರ್ ಟೌನ್ ಪೊಲೀಸರಿಗೆ ಬೇಕಾಗಿದ್ದ ಕಡೆಕಲ್ ಅಬಿದ್ ಎನ್ನುವವನ್ನು ಮಂಗಳವಾರ ಸಂಜೆಯ  ವೇಳೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸಂಭವಿಸಿದೆ. ಪೇಪರ್ ಟೌನ್ ಇನ್ಸ್‌ಪೆಕ್ಟರ್ ನಾಗಮ್ಮ ಮತ್ತು ತಂಡದವರು ಖಚಿತ ಮಾಹಿತಿ ಮೇರೆಗೆ ಅಬಿದ್‌ನನ್ನು ಬಂಧಿಸಲು ತೆರಳಿದ್ದರು. ಸುಮಾರು ಒಂದು ತಿಂಗಳಿನಿಂದುಈತ ತಲೆಮರೆಸಿಕೊಂಡಿದ್ದನು. ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲೆತ್ನಿಸಿದನಲ್ಲದೆ ಮರು ದಾಳಿ ನಡೆಸಿದನು….

Read More

Hosanagara | ಭಾರಿ ಮಳೆಗೆ ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..!

Hosanagara | ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..! ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಪಟ್ಟಣ ಹೊರವಲಯದ ಕಲ್ಲುಹಳ್ಳ ಸೇತುವೆಯ ಪಿಚ್ಚಿಂಗ್ ಕುಸಿತವಾಗಿದೆ‌. ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ (766c)ಯ ಕಲ್ಲುಹಳ್ಳಕ್ಕೆ ಇತ್ತೀಚೆಗೆ ಹೊಸ ಸೇತುವೆ ನಿರ್ಮಿಸಲಾಗಿದೆ. ಸೇತುವೆಯ ಎರಡು ಬದಿ ಮಣ್ಣು ತುಂಬಿ ಪಿಚ್ಚಿಂಗ್ ಕಾಮಗಾರಿ ನಡೆಸಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುರಿದ ಮಳೆಗೆ ಮಣ್ಣು ಕುಸಿದಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ‌‌‌. ಸೇತುವೆ ಬದಿಯ…

Read More

ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ | Crime News

ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ  ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನೀರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು ಗುರುತಿಸಲಾಗಿದೆ. ಬುಧವಾರ ಶಿವಮೊಗ್ಗದ ವಿದ್ಯಾನಗರದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು ಜಿಲ್ಲೆಯ ಬೈರಾಪುರದಲ್ಲಿರುವ ಭದ್ರಾ ಹಿನ್ನೀರಿನ ಬಳಿ ಬಂದಿದ್ದಾರೆ, ಈ ವೇಳೆ ನಾಲ್ವರಲ್ಲಿ ಮೂವರು ತೆಪ್ಪದಲ್ಲಿ ತೆರಳಿದ್ದಾರೆ ಓರ್ವ ಮಾತ್ರ ದಡದಲ್ಲಿ ನಿಂತಿದ್ದ ಎನ್ನಲಾಗಿದೆ…

Read More

ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಹಾಕಲು ಮುಂದಾದ ರಿಪ್ಪನ್‌ಪೇಟೆ ಪೊಲೀಸರು

ಬಿಡಾಡಿ ಜಾನುವಾರುಗಳಿಗೆ ರೇಡಿಯಂ ಬೆಲ್ಟ್ ಅಳವಡಿಸಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ರಾತ್ರಿ ವೇಳೆ ಅಪಘಾತದಲ್ಲಿ ಮೂಕ ಜಾನುವಾರುಗಳು ಗಾಯಗೊಳ್ಳುವುದು, ಕೆಲವೊಮ್ಮೆ ಸಾಯುವುದು, ವಾಹನ ಸವಾರರು ಸಹ ತೊಂದರೆಗೀಡಾಗುವುದು, ವಾಹನ ಜಖಂಗೊಳ್ಳುವುದನ್ನು ತಪ್ಪಿಸುವ ಉದ್ದೇಶದಿಂದ ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಕಟ್ಟುವ ಕೆಲಸವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪ್ರಾರಂಭಿಸಲಾಗಿದೆ. ಈ ಮೂಲಕ ರಾತ್ರಿ ವೇಳೆ ವಾಹನ ಸವಾರರಿಗೆ ಕತ್ತಲೆಯಲ್ಲಿದ್ದರು ಜಾನುವಾರುಗಳು ಕಾಣುವಂತೆ ಮಾಡಲಾಗುತ್ತಿದ್ದು,ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಬಿಡಾಡಿ ದನಗಳು…

Read More

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ:

     ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಗಾಜಿನಗೋಡು ಗ್ರಾಮದ ನಿವಾಸಿ, ಹೊಸನಗರ ತಾಲೂಕು ಗಂಗಾಮತಸ್ಥ ಸಂಘದ ಮಾಜಿ ನಿರ್ದೇಶಕ ಕೊಲ್ಲಪ್ಪ ಇವರು ಕೂಲಿ ಕೆಲಸಕ್ಕೆಂದು ಮೂರು ದಿನಗಳ ಹಿಂದೆ ಹೋದವರು ಇಂದು ಗಾಜಿನಗೋಡು ಸಮೀಪ ಕುಮದ್ವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.  ಕಳೆದ ಮೂರು ನಾಲ್ಕು ದಿನದಿಂದ ಬರುತ್ತಿರುವ ಅತಿಯಾದ ಮಳೆಗೆ ಕುಮದ್ವತಿ ನದಿ ಹರಿಯುತ್ತಿದ್ದು ಕಾಲುಜಾರಿ ಬಿದ್ದಿರಬಹುದೆಂದು ಊಹಿಸಲಾಗಿದೆ. ಗಾಜಿನ ಗೋಡು ಮತ್ತು  ಹಾರಂಬಳ್ಳಿ ಮಧ್ಯೆ ಹರಿಯುತ್ತಿರುವ ನದಿ ಇದಾಗಿದ್ದು ಕೂಲಿಯೂ ಸೇರಿದಂತೆ ಬೇರೆ…

Read More