Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ ಎಸ್ ಎಂ ವಿಶ್ವನಾಥ (67) ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿಶ್ವನಾಥರ ಪತ್ನಿ ಲೀಲಾವತಿಯವರು ಕಳೆದ ಆರು ತಿಂಗಳ ಹಿಂದೆ ಅಕಾಲ ಮರಣ ಹೊಂದಿದ್ದು ಪತ್ನಿಯ ಮರಣ ನಂತರ ವಿಶ್ವನಾಥ್ ರವರು ಪತ್ನಿಯ ಕೊರಗಿನಲ್ಲಿ ದಿನ ದೂಡುತ್ತಿದ್ದರೆಂದು ತಿಳಿದುಬಂದಿದೆ. ವಿಶ್ವನಾಥ್ ರವರ ಪುತ್ರ ಬಸ್ ಏಜೆಂಟ್ ರಾಘವೇಂದ್ರ ಸಂಜೆ ತನ್ನ…

Read More

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News ತುಂಬಾ ಪ್ರೀತಿಯಿಂದ ಸಾಕು ಸಲುಹಿದ ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ತಂದೆ ಆಕ್ರೊಶ ವ್ಯಕ್ತಪಡಿಸಿದ ರೀತಿ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಮಗಳು ಬದುಕಿರುವಾಗಲೇ ಆಕೆಯ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಕುಟುಂಬವೇ ಕಣ್ಣೀರಿಟ್ಟಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಈ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಇಷ್ಟವಿಲ್ಲದಿದ್ದರೂ ಮಗಳು ಚಿಲುವೆರಿ…

Read More

₹1.50 ಕೋಟಿ ಮೌಲ್ಯದ ಅಡಿಕೆಯೊಂದಿಗೆ ಲಾರಿ ಸಮೇತ ಚಾಲಕ ನಾಪತ್ತೆ

₹1.50 ಕೋಟಿ ಮೌಲ್ಯದ ಅಡಿಕೆಯೊಂದಿಗೆ ಲಾರಿ ಸಮೇತ ಚಾಲಕ ನಾಪತ್ತೆ A lorry carrying arecanut worth ₹1.5 crore from Shivamogga to Bengaluru goes missing as driver and accomplice allegedly abscond with the load; police investigation underway. ಶಿವಮೊಗ್ಗ: ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು ₹1.50 ಕೋಟಿ ಮೌಲ್ಯದ ಅಡಿಕೆಯನ್ನು ಚಾಲಕ ಹಾಗೂ ಆತನ ಸಹಚರರು ಲಪಟಾಯಿಸಿ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಮ್ಯಾಮ್‌ಕೋಸ್‌ನಿಂದ ಬೆಂಗಳೂರಿನ ಯಶವಂತಪುರಕ್ಕೆ…

Read More

Thirthahalli | ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ

ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ ತೀರ್ಥಹಳ್ಳಿಯಲ್ಲಿರುವ ರಾಷ್ಟ್ರ ಕವಿ ಕುವೆಂಪು(kuvempu) ಅವರು ಓದಿದ ಶಾಲೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದರು. ತೀರ್ಥಹಳ್ಳಿ(Thirthahalli) ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೂ ಮುನ್ನ ಶಾಲೆಗೆ ಭೇಟಿ ನೀಡಿದರು. ಶಾಲೆಗೆ ಭೇಟಿ ನೀಡುತ್ತಿದ್ದಂತೆ ಶಾಲಾ ಮಕ್ಕಳು ಸಚಿವ ಮಧುಬಂಗಾರಪ್ಪರನ್ನು ಗುಲಾಬಿ ಹೂವು ನೀಡುವುದರ ಮೂಲಕ…

Read More

SSLC ಪಲಿತಾಂಶ : ರಿಪ್ಪನ್‌ಪೇಟೆಗೆ ಕೀರ್ತಿ ತಂದ ಪ್ರತಿಭಾನ್ವಿತರು

ರಿಪ್ಪನ್‍ಪೇಟೆ: ಎಸ್ ಎಸ್ ಎಲ್ ಸಿ ಪಲಿತಾಂಶದಲ್ಲಿ ರಿಪ್ಪನ್‌ಪೇಟೆಯ 55 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮೇರಿಮಾತ  ಮತ್ತು ರಾಮಕೃಷ್ಣ ಪ್ರೌಢಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ಸರ್ಕಾರಿ ಪ್ರೌಢಶಾಲೆ ರಿಪ್ಪನ್‌ಪೇಟೆ: ಶೇ. 64.42 ಫಲಿತಾಂಶ ಬಂದಿದ್ದು, ಉನ್ನತ ಶ್ರೇಣಿ 22, ಪ್ರಥಮ 56, ದ್ವಿತೀಯ 21,  ಉತ್ತೀರ್ಣ 6 ವಿದ್ಯಾರ್ಥಿಗಳು,   ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ:  ಶೇ 88…

Read More

Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್

Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ಬೂರಿನ ಸಮೀಪದ ಅರಹತೊಳಲು ಕಲ್ಲಿಹಾಳಿನ ನಡುವೆ ಖಾಸಗೀ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಯಲ್ಲಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಬಸ್‌ನಲ್ಲಿ ಆರು ಜನ ಪ್ರಯಾಣಿಕರು ಇದ್ದು ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮಾರಶೆಟ್ಟಿಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಸ್ ಚಾಲಕ ಪೋನ್‌ನಲ್ಲಿ ಮಾತನಾಡಿಕೊಂಡು ಬಸ್ ಚಲಾಯಿಸುತ್ತಿದ್ದ, ಚಾಲಕನ ಅಜಾಗರೂಕತೆಯಿಂದ ಬಸ್…

Read More

mETA

ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ ರಿಪ್ಪನ್‌ಪೇಟೆ – ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಗ್ರಾಮಸ್ಥರ ಸಹಕಾರದೊಂದಿಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದೆ. ಪೊಲೀಸರು ಬಂಧಿಸಿದವರನ್ನು ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ಹಾಗೂ ತಾಲ್ಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ…

Read More

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | school holiday updates

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.27 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು…

Read More

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ

Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ ಹೊಸನಗರ(Hosanagara) : ಅಕ್ರಮವಾಗಿ ಮರಳು(sand) ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸಿಪಿಐ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ತ್ರಿಣಿವೆ(trinive) ಗ್ರಾಮದ ಬಳಿ ಅಕ್ರಮವಾಗಿ ಮರಳು ತುಂಬಿದ ಲಾರಿ ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತ್ರಿಣಿವೆ ಗ್ರಾಮದ ಬಳಿ ಅಕ್ರಮವಾಗಿ(illegal) ಮರಳು ಸಂಗ್ರಹಣೆ ಕಾರ್ಯ ನಡೆಸುವುದರ ಜೊತೆಗೆ ರಾತ್ರಿ ವೇಳೆಯಲ್ಲಿ ಅಕ್ರಮ ಮರಳು ಸಾಗಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದ್ದು ಪೊಲೀಸ್‌…

Read More

Ripponpete | ಭಾರಿ ಗಾಳಿ ಮಳೆಗೆ ಕೊಟ್ಟಿಗೆ ಕುಸಿದು ಎಮ್ಮೆ ಸಾವು

Ripponpete | ಭಾರಿ ಗಾಳಿ ಮಳೆಗೆ ಕೊಟ್ಟಿಗೆ ಕುಸಿದು ಎಮ್ಮೆ ಸಾವು  ಭಾರಿ ಮಳೆ ಮತ್ತು ಗಾಳಿಗೆ ಜಾನುವಾರು ಕೊಟ್ಟಿಗೆ ಕುಸಿದು ಬಿದ್ದು ಒಂದು ಎಮ್ಮೆ ಸಾವನ್ನಪ್ಪಿ ಇನ್ನೆರಡು ಎಮ್ಮೆಗಳಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಕೆರೆಹಳ್ಳಿಯಲ್ಲಿ ನಡೆದಿದೆ.  ಕೆರೆಹಳ್ಳಿ ಗ್ರಾಮದ ಶಿವಾಜಿರಾವ್ ಎಂಬುವವರ ಮನೆಯ ಹಿಂಭಾಗದ ಕೊಟ್ಟಿಗೆ ಭಾರಿ ಮಳೆ ಗಾಳಿಗೆ ಕುಸಿದು ಬಿದ್ದು ಎಮ್ಮೆಯೊಂದು ಸಾವನ್ನಪೊಇರುವ ಘಟನೆ ನಡೆದಿದೆ.  ಶನಿವಾರ ಬೆಳಗಿನಜಾವ ನಾಲ್ಕು ಗಂಟೆಗೆ ಈ ಘಟನೆ ಸಂಭವಿಸಿದ್ದು…

Read More