ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು

ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು ಚಲಿಸುತಿದ್ದ ಬಸ್ ನಿಂದ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದ ಎದುರಿನ ರಸ್ತೆಯಲ್ಲಿ ನಡೆದಿದೆ. ಯಶವಂತ್ (16) ಮೃತ ದುರ್ಧೈವಿಯಾಗಿದ್ದಾರೆ. ಮೈಲಾರೇಶ್ವರ ದೇವಸ್ಥಾನ ಎದುರಿಗೆ ಬರುತ್ತಿದ್ದ ಖಾಸಗಿ ನಗರ ಸಾರಿಗೆ ಬಸ್ ನಿಂದ ಬಿದ್ದು ಕಾಲೇಜಿನ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುರುಪುರದಿಂದ ಎಟಿಎನ್ ಸಿಸಿ ಕಾಲೇಜಿಗೆ ನಗರದ ಖಾಸಗಿ ಬಸ್ ನಲ್ಲಿ ಹೊರಟಿದ್ದ ವಿದ್ಯಾರ್ಥಿ ಯಶವಂತ್ ಶಿವಮೊಗ್ಗದ ಮೇಲಾರೇಶ್ವರ ದೇವಸ್ಥಾನದ…

Read More

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲಾ ರೇಡಿಯಲ್ ಗೇಟ್‌ಗಳನ್ನು ಗುರುವಾರ ಮತ್ತೆ ತೆರೆಯಲಾಗಿದೆ. ಇದರ ಪರಿಣಾಮವಾಗಿ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ಜೋಗ ಜಲಪಾತವು ಭಾರೀ ರಭಸದಿಂದ ಹರಿಯುತ್ತಿದೆ. ಕಳೆದ ಎರಡು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಒಳಹರಿವು ಹೆಚ್ಚಳವಾಗಿದೆ. ಜಲಾಶಯಕ್ಕೆ ಇಂದು ೪೭,೨೩೨ ಕ್ಯೂಸೆಕ್ ನೀರು ಸೇರುತ್ತಿದ್ದು, ಈಗಾಗಲೇ ಭರ್ತಿಯಾಗಿರುವ ಕಾರಣ ಎಲ್ಲಾ ಗೇಟ್‌ಗಳನ್ನು ತೆರೆಯಲಾಗಿದ್ದು, ೩೨,೧೩೮ ಕ್ಯೂಸೆಕ್ ನೀರು…

Read More

Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ

Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಗ್ರಾಮ್ ಒನ್ ಕೇಂದ್ರದಲ್ಲಿ ರೈತರು ತಮ್ಮ ಅಗತ್ಯ ದಾಖಲೆಗಾಗಿ ಅರ್ಜಿ ಸಲ್ಲಿಸಲು ಹೋದರೆ ಹೆಚ್ಚುವರಿ ಹಣವನ್ನು ಸುಲಿಗೆ ಮಾಡುತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತಿದ್ದಾರೆ. ಸಾಗರ ರಸ್ತೆಯಲ್ಲಿರುವ ಯಲ್ಲಪ್ಪ ಎಂಬುವವರ ಗ್ರಾಮ ಒನ್ ಕೇಂದ್ರದಲ್ಲಿ ತಮ್ಮ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಲು ಹೋಗುವ ಗ್ರಾಹಕರುಗಳ ಬಳಿಯಲ್ಲಿ ಬೇಕಾಬಿಟ್ಟಿ ಶುಲ್ಕವನ್ನು ವಸೂಲಿ ಮಾಡುತಿದ್ದು, ಸರ್ಕಾರದ ನಿಯಮದಂತೆ…

Read More

ಭತ್ತದ ಗದ್ದೆಯಲ್ಲಿ ಕಂದುಜಿಗಿ ಹುಳು ಬಾಧೆಗೆ ನೂರಾರು ಎಕರೆ ಬೆಳೆ ನಾಶ – ಈ ಹುಳುವಿನ ಹತೋಟಿ ಕ್ರಮ ಏನೇನು.!? ಇಲ್ಲಿದೆ ಸಂಪೂರ್ಣ ಮಾಹಿತಿ..!

ಕಳೆದ ಬೇಸಿಗೆಯಲ್ಲಿ ಸೈನಿಕ ಹುಳುಬಾಧೆ, ಮಳೆಗಾಲದಲ್ಲಿ ಅತಿವೃಷ್ಟಿಯಿಂದ ಜೋಳ ಬೆಳೆ ಕಳೆದುಕೊಂಡ ರೈತರೀಗ ಕಂದುಜಿಗಿ ಹುಳು ಬಾಧೆಯಿಂದ ಭತ್ತದ ಬೆಳೆಯನ್ನೂ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕುವ ಆತಂಕದಲ್ಲಿದ್ದಾರೆ. ಭತ್ತದ ಬೆಳೆಯಿಂದ ಲಾಭ ಕಡಿಮೆ. ಹೀಗಾಗಿ ಹೆಚ್ಚು ಬೆಲೆಯ ಕೀಟನಾಶಕ ಸಿಂಪಡಿಸುವುದು ಕಷ್ಟಸಾಧ್ಯ. ಸಾಮಾನ್ಯ ಕೀಟನಾಶಕಗಳನ್ನು ಸಿಂಪಡಿಸುವುರಿಂದ ಹತೋಟಿ ಸಾಧ್ಯವಿಲ್ಲ. ಹೀಗಾಗಿ ಕೃಷಿ ಇಲಾಖೆ ರಿಯಾಯಿತಿ ದರದಲ್ಲಿ ಪರಿಣಾಮಕಾರಿ ಗುಣಮಟ್ಟದ ಕೀಟನಾಶಕವನ್ನು ಒದಗಿಸಿ ರೈತರ ಹಿತ ಕಾಯಬೇಕಿದೆ. ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭತ್ತದ ಬೆಳೆಗೆ ಕಂದುಜಿಗಿ ಹುಳು ಬಾಧೆ…

Read More

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ A young man from Indiranagar, Tirthahalli, died after being electrocuted while climbing a tree to pluck leaves for patrode near Lakkunda. Agumbe Police have registered a case. ತೀರ್ಥಹಳ್ಳಿ, ಜೂನ್ 26: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ…

Read More

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿಯೊದು ಹೊಳೆಗೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹುಲಿಕಲ್ ಗ್ರಾಮದ ಹೊಳೆಗೆ ಉರುಳಿಬಿದ್ದಿದ್ದು ಅದೃಷ್ಟವಶಾತ್ ಚಾಲಕ ಪಾರಾಗಿದ್ದಾನೆ. ಹುಲಿಕಲ್ ಗ್ರಾಮದಲ್ಲಿ ಚಕ್ರಾ ಸಾವೇಹಕ್ಲು ಡ್ಯಾಂ ನ ಹಿನ್ನಿರು ನಿಲ್ಲುತ್ತದೆ ಇಂದು ಬೆಳಿಗ್ಗೆ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದ…

Read More

ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ|Kenchanala

ವಿಜೃಂಭಣೆಯಿಂದ ಜರುಗಿದ  ಕೆಂಚನಾಲ ಮಾರಿ ಜಾತ್ರೆ  ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ  ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ  ಎರಡು…

Read More

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!!

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಅಕ್ರಮವಾಗಿ ಹಣ ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಒಂಬತ್ತು ಮಂದಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಹೊರವಲಯದಲ್ಲಿ ಅಕ್ರಮವಾಗಿ ಹಣವನ್ನು ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆ ಮೇಲೆ ದಿಡೀರ್ ದಾಳಿ ನಡೆಸಿ ರಿಪ್ಪನ್‌ಪೇಟೆ ಪೊಲೀಸರು ಜೂಜುಕೋರರ ಹೆಡೆಮುರಿ ಕಟ್ಟಿದ್ದಾರೆ. ಪಟ್ಟಣದ ಸಮೀಪದ ಹೆಗ್ಗೆರೆ…

Read More

ರಿಪ್ಪನ್ ಪೇಟೆ ಪಂಚಾಯತ್ ದಿವಸ್ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ : ಗೊಂದಲಗಳ ನಡುವೆ ನಡೆದ ಕಾರ್ಯಕ್ರಮ

ರಿಪ್ಪನ್‌ಪೇಟೆ: ಜನರು ತಮ್ಮ ಕೆಲಸಕಾರ್ಯಗಳಿಗಾಗಿ ಕಛೇರಿಗಳಿಗೆ ಬರುವ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು ಅಸಡ್ಡೆ ತೋರಬಾರದು. ಜನರೇ ಇಲ್ಲದಿದ್ದರೆ ಜನಪ್ರತಿನಿಧಿಗಳ ಅಸ್ಥಿತ್ವವೇ ಇರುತ್ತಿರಲಿಲ್ಲವೆಂಬ ಸತ್ಯ ಮನದಲ್ಲಿಟ್ಟುಕೊಳ್ಳಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಗ್ರಾ.ಪಂ. ಸಭಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಪಂಚಾಯತ್ ರಾಜ್ ದಿವಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಗ್ರಾಮ ಪಂಚಾಯತಿಗಳು ಸ್ಥಳೀಯ ಸರಕಾರವಾಗಿದೆ. ಜನರು ಕೆಲಸವಿಲ್ಲದೆ ಕಛೇರಿಗೆ ಬರುವುದಿಲ್ಲ. ಸುಮ್ಮನೆ ಬರಲು ಸರ್ಕಾರಿ ಕಛೇರಿಗಳು ಅವರ ಮಾವನ ಮನೆಯೂ ಅಲ್ಲ, ಅತ್ತೆ ಮನೆಯೂ ಅಲ್ಲ ಕೆಲಸವಿದ್ದಾಗ ಮಾತ್ರ…

Read More

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ , ಪರಿಶೀಲನೆ

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಹರತಾಳು ಹಾಲಪ್ಪ ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪುರಪ್ಪೆಮನೆ ಮಾರ್ಗವಾಗಿ ಸಾಗರ ತಾಲ್ಲೂಕಿನ ಬಿಲಗೋಡಿ, ತಾರನಬೈಲು ಸಂಪರ್ಕಿಸುವ ಪ್ರಮುಖ ರಸ್ತೆ ಮಳೆನೀರು ಹಾಗೂ ಮಣ್ಣುಸ್ರಾವದಿಂದಾಗಿ ಕುಸಿದು ಬಿದ್ದಿದೆ. ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಜನರು ಪರ್ಯಾಯ ದಾರಿಗಳನ್ನು ಬಳಸುವಂತಾಗಿದೆ. ಈ ಸಂದರ್ಭ ಮಾಜಿ ಸಚಿವರು ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಿಂದಲೇ ಪೋನ್ ಮೂಲಕ ಅಧಿಕಾರಿಗಳೊಂದಿಗೆ ಮಾತುಕತೆ…

Read More