Headlines

ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ :

ರಿಪ್ಪನ್ ಪೇಟೆ : ತಾಯಿ ತನ್ನ ಮಗುವಿನ ಜತೆ ಬಿದರಹಳ್ಳಿಯ ತನ್ನ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಬಿದರಹಳ್ಳಿಯ ನಿವಾಸಿ ವಿದ್ಯಾ(32) ಮಗಳು ತನ್ವಿ(4) ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗುರುವಾರ ಬೆಳಗಿನ ಜಾವ ವಿದ್ಯಾ ಮಗುವಿನೊಂದಿಗೆ ಬಾವಿಗೆ ಹಾರಿದ್ದಾರೆ.ಇಂದು ಬೆಳಿಗ್ಗೆ ಮೃತ ದೇಹ ಪತ್ತೆಯಾಗಿದೆ. ಹೊಸನಗರದ ಅಗ್ನಿಶಾಮಕ ಸಿಬ್ಬಂದಿ ಭೀಷ್ಮಚಾರಿ 50 ಅಡಿ ಆಳದ ಬಾವಿಗೆ ಇಳಿದು ಎರಡು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ರಿಪ್ಪನ್…

Read More

ಮಾರ್ಚ್ 1 ರಿಂದ ಸರ್ಕಾರಿ ನೌಕರರು ಕೆಲಸಕ್ಕೆ ಬರಲ್ಲ – ಯಾವ ಸರ್ಕಾರಿ ಕೆಲಸವು ನಡೆಯುವುದಿಲ್ಲ : ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ ಷಡಾಕ್ಷರಿ

ಮಾರ್ಚ್ 1 ರಿಂದ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ‌ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.  ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗ ಜಾರಿ ಹಾಗೂ ಎನ್​ಪಿಎಸ್​ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿ ಮಾಡಬೇಕೆಂಬ ಬೇಡಿಕೆಯನ್ನಿಟ್ಟುಕೊಂಡ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿರುವುದಾಗಿ…

Read More

ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವರದಿಯ ಫಲಶ್ರುತಿ : ರಾಷ್ಟ್ರೀಯ ಹಾಕಿ ಕ್ರೀಡಾಪಟು ಪೂಜಿತ ಗೌಡಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಸನ್ಮಾನ

ಮಲೆನಾಡಿನ ಹೆಮ್ಮೆಯ ಪುತ್ರಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ  ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು  ಪೂಜಿತ ಗೌಡಳಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಕೂಟದಲ್ಲಿ 19 ಬಾರಿ ಭಾಗವಹಿಸಿದ ಪೂಜಿತ ಗೌಡ ಇದೇ ತಿಂಗಳು ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಖೇಲ್ ಇಂಡಿಯಾ ಹಾಕಿ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಹಾಕಿ ತಂಡದಿಂದ ಭಾಗವಹಿಸಿ  ಅದ್ವಿತೀಯ…

Read More

ನ್ಯಾಯಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ : ಮಹಾಲಕ್ಷ್ಮಿ ಅಣ್ಣಪ್ಪ

ರಿಪ್ಪನ್‌ಪೇಟೆ: ಕಳೆದ ವರ್ಷ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ಸಂದರ್ಭದಲ್ಲಿ ಬರುವೆ 1ನೇ ವಾರ್ಡ್ ನಲ್ಲಿ ನಡೆದ ಮತದಾನದಲ್ಲಿ ಅಕ್ರಮವಾಗಿದೆ ಎಂದು ದಾಖಲಾಗಿದ್ದ ಮೊಕದ್ದಮೆಯನ್ನು ಹೊಸನಗರ ಜೆ ಎಂಎಫ್ ಸಿ ನ್ಯಾಯಾಲಯ ವಜಾ ಮಾಡಿದೆ. ಘಟನೆಯ ಹಿನ್ನಲೆ:  ಒಬ್ಬನೇ ವ್ಯಕ್ತಿ ಎರಡು-ಮೂರು ವಾರ್ಡ್‌ಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಮತದಾನದ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನಕ್ಕೆ ಬರುವೆ 1ನೇ ವಾರ್ಡ್ ನಲ್ಲಿ ಸ್ಪರ್ಧಿಸಿದ್ದ ಪರಾಜಿತ ಅಭ್ಯರ್ಥಿ ಮೆಣಸೆ ಆನಂದ್ ರವರು ತಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿ…

Read More

Shivamogga |ಕಾಲೇಜು ವಿದ್ಯಾರ್ಥಿ ಮೇಲೆ ಬಿಸಿ ಎಣ್ಣೆ ಎರಚಿ ಕುಡುಕನ ರಾದ್ದಾಂತ

Shivamogga |ಕಾಲೇಜು ವಿದ್ಯಾರ್ಥಿ ಮೇಲೆ ಬಿಸಿ ಎಣ್ಣೆ ಎರಚಿ ಕುಡುಕನ ರಾದ್ದಾಂತ ಕಬಾಬ್ ಅಂಗಡಿ ಮಾಲೀಕನ ಜೊತೆ ಜಗಳವಾಡುತ್ತಿದ್ದ ವೇಳೆ ಪಾನಮತ್ತ ಗ್ರಾಹಕನೊಬ್ಬ ಕಾಲೇಜು ವಿದ್ಯಾರ್ಥಿ ಮೇಲೆ ಎಣ್ಣೆ ಸುರಿದಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಬಾಬ್ ಮಾಲೀಕನ ಜೊತೆಗೆ ಪಾನಮತ್ತನಾಗಿದ್ದ ಗ್ರಾಹಕನೊಬ್ಬ ಜಗಳವಾಡುತಿದ್ದು ಅದು ವಿಕೋಪಕ್ಕೆ ತಿರುಗಿದಾಗ ಸಿಟ್ಟಿಗೆದ್ದು ವಿದ್ಯಾರ್ಥಿ ಒಬ್ಬನ ಮೇಲೆ ಪಾನಮತ್ತ ಗ್ರಾಹಕ ಬಿಸಿ ಎಣ್ಣೆ ಎರಚಿದ್ದಾನೆ. ಮಾಲೀಕನ ಮೇಲೆ ಪಾನಮತ್ತ ಗ್ರಾಹಕ ಎಣ್ಣೆ ಎರಚಲು ಯತ್ನಿಸಿದ್ದಾನೆ. ಆದರೆ ಜರಡಿಯಿಂದ ವಿದ್ಯಾರ್ಥಿ ಮೇಲೆ…

Read More

ರಿಪ್ಪನ್ ಪೇಟೆ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗೆ ಕರೊನಾ ಪಾಸಿಟಿವ್ : ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಲ್ಲಿ ಆತಂಕ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿರುವ ಯುವಕನೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಡಿ.1 ರಂದು ವಿದ್ಯಾರ್ಥಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ನಿನ್ನೆ ಪಾಸಿಟಿವ್ ಎಂದು ಬಂದಿದೆ. ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಇಂದು ವಿದ್ಯಾರ್ಥಿಯ ಮನೆಗೆ ಬಂದಿದ್ದಾರೆ.ಆದರೆ ಆತ ಮನೆಯಲ್ಲಿ ಇರದೇ ರಿಪ್ಪನ್…

Read More

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!!

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!! ಶಿವಮೊಗ್ಗ : ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ ನಿನ್ನೆ ಸಂಜೆ ವಿನೋದ್(21) ಎಂಬ ಯುವಕ ಆಡುಗೋಡಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಪದವಿ ಪಾಸಾಗಿದ್ದ ವಿನೋದ್ ನಿನ್ನೆ ಜಮೀನಿಗೆ ಹೋಗಿ ಬಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ,ಪ್ರೇಮ ವೈಫಲ್ಯದಿಂದ ಬೇಸತ್ತು ಈ ಘತನೆ ನಡೆದಿರಬಹುದು ಎನ್ನಲಾಗುತಿದ್ದು…

Read More

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ಪೂರ್ವ(6 ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.1.00 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ…

Read More

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ ಶಿವಮೊಗ್ಗ, ಜೂ.೧೩ : ಜರ್ಮನಿಯ ಯುವ ವಿಜ್ಞಾನಿ ಸ್ಪರ್ಧೆಯ ಜೀವಶಾಸ್ತ್ರ ವಿಭಾಗದಲ್ಲಿ ಹೆಬ್ರಿ ಬಳಿಯ ಮುದ್ರಾಡಿ ಮಂಜುನಾಥ್ ಪ್ರಸಾದ್ ಹೆಗ್ಡೆ ಮತ್ತು ಮೀಲೀ ದಂಪತಿಯ ಪುತ್ರಿ ಮಿಶಾ ಹೆಗ್ಡೆ ಕಂದಾವರ ಪ್ರಥಮ ಸ್ಥಾನ ಪಡೆದಿದ್ದಾರೆ. ಮಿಶಾ ಹೆಗ್ಡೆ ಕಂದಾವರ ಸಂಶೋಧನೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಹಲವು ಪ್ರಸಿದ್ಧ ಸಂಶೋಧನಾ ಸಂಸ್ಥೆಗಳ ಬೆಂಬಲದಿಂದ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಾಧ್ಯಕ್ಷರಿಂದ ಪ್ರಶಸ್ತಿ ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ಹತ್ತು ಸಾವಿರಕ್ಕೂ…

Read More

ಬಂಗಾರಪ್ಪನವರಿಗೆ ‘ಸೋಲಿಲ್ಲದ ಸರದಾರ’ನ ಪಟ್ಟ ಕೊಟ್ಟಿದ್ದ ಕಾರಿನ ನಂಬರ್‌ ಪಡೆದ ಗೀತಾ ಶಿವರಾಜ್‌ಕುಮಾರ್‌..!! |Parliament Election

ಬಂಗಾರಪ್ಪನವರಿಗೆ ‘ಸೋಲಿಲ್ಲದ ಸರದಾರ’ನ ಪಟ್ಟ ಕೊಟ್ಟಿದ್ದ ಕಾರಿನ ನಂಬರ್‌ ಪಡೆದ ಗೀತಾ ಶಿವರಾಜ್‌ಕುಮಾರ್‌..!! ಶಿವಮೊಗ್ಗ – ತಂದೆಯ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಕಾಯುತ್ತಿರುವ ಮಾಜಿ ಮುಖ್ಯಮಂತ್ರಿ ದಿ. ಸಾರೇಕೊಪ್ಪ ಬಂಗಾರಪ್ಪ ಅವರ ಪುತ್ರಿ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್‌ಕುಮಾರ್‌ ಈಗ ಶಿವಮೊಗ್ಗದಲ್ಲಿ ಬಾಡಿಗೆ ಮನೆ ಮಾಡಿ, ಪ್ರಚಾರಕ್ಕೆ ಹೊಸ ಕಾರನ್ನೂ ಖರೀದಿ ಮಾಡಿದ್ದಾರೆ. ಈ ಕಾರಿನ ನಂಬರ್‌ ಈಗ ಆಕರ್ಷಣೆಗೆ ಕಾರಣವಾಗಿದೆ. ತಮ್ಮ ತಂದೆಯ ಲಕ್ಕಿ ಕಾರಿನ ನಂಬರ್‌ ಅನ್ನೇ ಹೊಸ ಕಾರಿಗೂ ಪಡೆದಿದ್ದು ಅದರಲ್ಲೇ…

Read More