ಹೊಸನಗರ ತಾಲೂಕಿನ ಪಶು ಆಸ್ಪತ್ರೆಗಳು ವೈದ್ಯರು, ಸಿಬ್ಬಂದಿಗಳಿಲ್ಲದೇ ಭಣಗುಟ್ಟುತ್ತಿವೆ – 22 ಆಸ್ಪತ್ರೆಗೆ ಇಬ್ಬರೇ ವೈದ್ಯರು
ರಿಪ್ಪನ್ಪೇಟೆ : ಮಲೆನಾಡಿನ ಹೆಬ್ಬಾಗಿಲು ಎಂದೇ ಖ್ಯಾತಿಗಳಿಸಿರುವ ಶಿವಮೊಗ್ಗ ಜಿಲ್ಲೆಯ ಮಧ್ಯ ಮಲೆನಾಡಿನ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ 22 ಪಶು ಅಸ್ಪತ್ರೆಗೆ 2 ಜನ ವೈದ್ಯಾಧಿಕಾರಿಗಳು ಬಿಟ್ಟರೆ ಇನ್ನೂ ಯಾರು ಇರುವುದಿಲ್ಲ ರಾಜಕಾರಣಿಗಳ ಇಚ್ಚಾ ಶಕ್ತಿಯ ಕೊರತೆಯಿಂದಾಗಿ ತಾಲೂಕಿನಾದ್ಯಂತ ಭಣಗುಟ್ಟುತ್ತಿವೆ ಪಶ ಆಸ್ಪತ್ರೆಗಳು. ರಾಜ್ಯ ಬಿಜೆಪಿ ಸರ್ಕಾರ ಹೈನುಗಾರಿಕೆಗೆ ಹೆಚ್ಚಿನ ಅಧ್ಯತೆ ನೀಡಲಾಗಿದೆ ಎಂದು ಹೇಳಿಕೊಳ್ಳುತ್ತಿದ್ದು ಹೊಸನಗರ ತಾಲ್ಲೂಕ್ ಮಾತ್ರ ಹೈನು ಉದ್ಯಮ ಸೇರಿದಂತೆ ಗೋವುಗಳ ಲಾಲನೆ ಪಾಲನೆ ರಾಜಕೀಯ ಮುಖಂಡರ ಇಚ್ಚಾಶಕ್ತಿಯ ಕೊರತೆಯಿಂದಾಗಿ ಹಿಂದುಳಿಯುವಂತಾಗಿದೆ. ರಿಪ್ಪನ್ಪೇಟೆಯ…