Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಆಟೋ ಚಾಲಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮಾಸ್ತಿಕಲ್ಲು ಬಳಿ ನಡೆದಿದೆ. 38 ವರ್ಷದ ಆಟೋ ಚಾಲಕ ಶಶಿಕುಮಾರ್ ಮೃತ ದುರ್ದೈವಿ. ಶಶಿಕುಮಾರ್ ಪ್ಯಾಸೆಂಜರ್ ಆಟೋ ಚಾಲಕನಾಗಿದ್ದ, ಮೂಲತಃ ಮಲ್ಲಂದೂರು ನಿವಾಸಿಯಾಗಿರುವ ಶಶಿ, ಖಾಸಗಿ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದ.ಸಾಲದ ಬಡ್ಡಿ ಹೆಚ್ಚಾದ ಹಿನ್ನೆಲೆ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ….

Read More

ಗರ್ತಿಕೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೆಎಪ್ ಡಿ (ಮಂಗನ ಖಾಯಿಲೆ) ಪತ್ತೆ ಶಂಕೆ!!|KFD

ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲೂಕಿನ ಗರ್ತಿಕೆರೆಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 45 ವರ್ಷ ಎಂದು ಹೇಳಲಾಗಿದೆ. ಜ.26 ರಂದು ವಿಪರೀತ ಜ್ವರದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರ ಕಡಿಮೆ ಆಗಿರಲಿಲ್ಲ. ನಿನ್ನೆ ಆರ್ ಟಿ ಪಿ ಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರ್ ಟಿ ಪಿ ಸಿಆರ್ ಪರೀಕ್ಷೆಯಲ್ಲಿ ಕೆಎಫ್ ಡಿ ನೆಗೆಟಿವ್ ಬಂದಿದೆ. ಆರ್ ಟಿ…

Read More

ಸೊನಲೆಯಲ್ಲಿ ಕಾರ್ಮಿಕನ ಹತ್ಯೆ ಪ್ರಕರಣ : ಇಬ್ಬರ ಬಂಧ‌ನ , ಘಟನೆ ಬಗ್ಗೆ ಎಸ್ ಪಿ ನಿಖಿಲ್ ಹೇಳಿದ್ದೇನು.!?

ಸೊನಲೆಯಲ್ಲಿ ಕಾರ್ಮಿಕನ ಹತ್ಯೆ ಪ್ರಕರಣ : ಇಬ್ಬರ ಬಂಧ‌ನ , ಘಟನೆ ಬಗ್ಗೆ ಎಸ್ ಪಿ ನಿಖಿಲ್ ಹೇಳಿದ್ದೇನು!? Two accused have been arrested in connection with the murder of a labourer in Sonale, Shivamogga district. SP Nikhil briefed the media on the investigation, motive, and the arrests made by the police. ​ಶಿವಮೊಗ್ಗ: ಹೆಂಡತಿಯೊಂದಿಗೆ ಸೇರಿ ಬಾಳುವಂತೆ ಬುದ್ಧಿವಾದ ಹೇಳಿದ ಸಹೋದ್ಯೋಗಿಯನ್ನೇ ಚಾಕುವಿನಿಂದ…

Read More

ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹೆಡ್ ಕಾನ್ ಸ್ಟೇಬಲ್ ಬಂಧನ :

…………………………ಪೋಸ್ಟ್ ಮ್ಯಾನ್ ನ್ಯೂಸ್ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದಲ್ಲಿ ಹೆಡ್‌ ಕಾನ್‌ಸ್ಟೇಬಲ್‌ (head constable) ವಿರುದ್ಧ ಮಹಿಳೆಯೊಬ್ಬರು ಭದ್ರಾವತಿಯ ಟೌನ್‌ ಸರ್ಕಲ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಡ್‌ ಕಾನ್‌ಸ್ಟೇಬಲ್‌ ರಾಘವೇಂದ್ರ ವಿರುದ್ಧ ಕೆ.ರೇಖಾ ಎಂಬುವವರು ಆರೋಪ ಮಾಡಿದ್ದಾರೆ. ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದ ಕೆ.ರೇಖಾ 2019ರ ಫೆಬ್ರವರಿಯಲ್ಲಿ ತನ್ನ ಪತಿ ಆಂಜನೇಯ ಮತ್ತು ಅವರ ತಮ್ಮ ರಮೇಶನ ನಡುವೆ ಆಸ್ತಿಯ ವಿಚಾರವಾಗಿ (matter of…

Read More

ರಿಪ್ಪನ್‌ಪೇಟೆಯ ಗಾನ ಕೋಗಿಲೆ ಪ್ರಣತಿಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಅತ್ಯುನ್ನತ ಶ್ರೇಣಿ|pranati

ರಿಪ್ಪನ್‌ಪೇಟೆಯ ಗಾನ ಕೋಗಿಲೆ ಪ್ರಣತಿಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಅತ್ಯುನ್ನತ ಶ್ರೇಣಿ ರಿಪ್ಪನ್‌ಪೇಟೆ : ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಹಿಂದೂಸ್ತಾನಿ ಸಂಗೀತ ಜೂನಿಯರ್‌ ವಿಭಾಗದ ಪರೀಕ್ಷೆಯಲ್ಲಿ ಪಟ್ಟಣದ ಗಾನ ಕೋಗಿಲೆ ಎಂದೆ ಖ್ಯಾತಿಯಾಗಿರುವ ಯುವ ಪ್ರತಿಭೆ ಪ್ರಣತಿ ಅಣ್ಣಪ್ಪ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ತಾಲೂಕ್ ,ಜಿಲ್ಲಾ ,ರಾಜ್ಯ ಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿರುವ ಪ್ರಣತಿ ಅಣ್ಣಪ್ಪ…

Read More

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ SHIVAMOGGA |  ಸಂಬಧಿಕರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದು ಒರ್ವನಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಗೌರವ್‌ ಹೋಟೆಲ್‌ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಶ್ರೀರಂಗ ಎಂಬಾತನಿಗೆ ಅವರ ಚಿಕ್ಕಪ್ಪ ಚಾಕು ಇರಿದಿದ್ದಾರೆ.ಈ ಹಿಂದೆಯೂ ಸಹ ಇವರಿಬ್ಬರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. ಕಳೆದ ಭಾನುವಾರ ಮತ್ತೆ ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಶ್ರೀರಂಗನಿಗೆ ಚಿಕ್ಕಪ್ಪ ಚಾಕುವಿನಿಂದ ಇರಿದಿದ್ದಾರೆ. ಈ ಸಂಬಂಧ ದೊಡ್ಡಪೇಟೆ…

Read More

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More

Nagara | ಬಿದನೂರು ಸುತ್ತಮುತ್ತ ಅಕ್ರಮ ನಿಧಿಶೋಧದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡ – ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆರೋಪ

ಬಿದನೂರು ಸುತ್ತಮುತ್ತ ನಿಧಿ ಕಳ್ಳತನದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡ – ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆರೋಪ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರು ನಗರದ ಹಲವು ಪ್ರದೇಶದಲ್ಲಿ ಅಕ್ರಮವಾಗಿ ನಿಧಿಶೋಧ ಪ್ರಕರಣದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡವಿದ್ದು ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆಗ್ರಹಿಸಿದ್ದಾರೆ. ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ತಾಲೂಕ್ ಬಿಜೆಪಿ ಯುವ ಮೊರ್ಚ ಅಧ್ಯಕ್ಷ ನಿತಿನ್ ನಡೆಸುತ್ತಿರುವ ಗುಂಡಾಗಿರಿ ದೌರ್ಜನ್ಯವನ್ನು ಬಿಜೆಪಿ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರು ಫಿಕ್ಸ್ – ಯಡಿಯೂರಪ್ಪ ಘೋಷಣೆ|airport

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ಧಾರೆ. ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್​ವೈ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ..ಈ ಸಂಬಂಧ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲು ತೀರ್ಮಾನಿಸಿದ್ದೇವೆ.  ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ವಾನುಮತದ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗುವುದು. ನರೇಂದ್ರ ಮೋದಿಯವರೇ ಈ ಹೆಸರನ್ನು ಘೋಷಿಸಲಿದ್ಧಾರೆ…

Read More

ಅಪಾಯದಂಚಿನಲ್ಲಿ ಕಾರಗೋಡು ಸರ್ಕಾರಿ ಶಾಲೆ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆಯ ಹಿಂಭಾಗವಿರುವ ಅಕೇಶಿಯ ಮರ ಬೀಳುವ ಆತಂಕದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ದಿನದೂಡುತಿದ್ದಾರೆ. ಇಲ್ಲಿನ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆ ಹಿಂಭಾಗದಲ್ಲಿ ಬೆಳೆದುನಿಂತ ಅಕೇಶಿಯ ನೆಡುತೋಪು ಇದ್ದು ಈ ಮರಗಳ ರೆಂಬೆಕೊಂಬೆಗಳು ಶಾಲೆಯ ಮೇಲ್ಛಾವಣಿಗೆ ಬಾಗಿ ನಿಂತಿವೆ. ಮಲೆನಾಡಿನ ಈ ಭಾಗದಲ್ಲಿ ಸುರಿಯುತ್ತಿರುವ  ಭಾರಿ ಮಳೆ ಗಾಳಿಯಿಂದ ಜನ ತತ್ತರಗೊಂಡಿದ್ದು ಇದೀಗ ಯಾವ  ಗಳಿಗೆಯಲ್ಲಾದರೂ ಶಾಲೆಯ ಮೇಲೆ ಮರ ಬೀಳಬಹುದೆಂಬ ಆತಂಕ ಪೋಷಕರನ್ನು ಕಾಡುತ್ತಿದೆ.ಇದರಿಂದ…

Read More