ಬಡ ಕುಟುಂಬದ ಮಹಿಳೆಯರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ|
ಹೆಣ್ಣುಮಕ್ಕಳ ಮೇಲೆ ದರ್ಪ ತೋರಿದ ಅರಣ್ಯಇಲಾಖೆ ಅಧಿಕಾರಿಗಳು ತೀರ್ಥಹಳ್ಳಿ : ತಾಲೂಕಿನ ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೈಮರ ಸಮೀಪದ ಸುಣ್ಣದಮನೆ ಎಂಬಲ್ಲಿ ಹೆಣ್ಣುಮಕ್ಕಳ ಮೇಲೆ ಅರಣ್ಯಇಲಾಖೆ ಅಧಿಕಾರಿಗಳು ಹಲ್ಲೆ ನೆಡೆಸಿದ್ದಲ್ಲದೆ ತೀರ ಅಮಾನವೀಯವಾಗಿ ನೆಡೆದುಕೊಂಡಿದ್ದಾರೆ. ರವಿ ನಾಯಕ್ ಎಂಬುವರು ಅಲ್ಲಿ ಡಿಮ್ಯಾಂಡ್ ದಾಖಲೆಯ ಆಧಾರದಲ್ಲಿ ಮನೆಯನ್ನು ಕಟ್ಟಿಕೊಂಡಿದ್ದು ಗ್ರಾಮಪಂಚಾಯಿತಿಯಿಂದ ಡಿಮ್ಯಾಂಡ್ ಕೂಡ ಕೊಟ್ಟಿದ್ದಾರೆ. ಆದರೂ ಇಂದು ಏಕಾಏಕಿ ಮನೆಗೆ ನುಗ್ಗಿದ ಅರಣ್ಯ ಅಧಿಕಾರಿಗಳು ಮನೆಯಲ್ಲಿ ಇದ್ದವರ ಮೇಲೆ ಹಲ್ಲೆ ನೆಡೆಸಿದ್ದಾರೆ. ಸುಮಾರು 8 ಜನ ಅರಣ್ಯ ಅಧಿಕಾರಿಗಳು…