ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ವಸತಿಗೃಹಕ್ಕೆ ಟಾರ್ಪಲ್ ರಕ್ಷಣೆ|Police quarters

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ಟಾರ್ಪಲ್ ಗೆ ಮೊರೆ ಹೋದ ಪೊಲೀಸರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ ಕೋಟ್ಯಾಂತರ ರೂ ವೆಚ್ಚ ಮಾಡಿ ಸರ್ಕಾರ ಪೊಲೀಸ್ ವಸತಿಗೃಹಗಳನ್ನು ನಿರ್ಮಿಸಿದೆ. ಆದರೆ ಸಂಬಂಧಪಟ್ಟವರ ನಿರ್ಲಕ್ಷ್ಯದಿಂದ ಕೋಟ್ಯಂತರ ರೂ ಬೆಲೆಬಾಳುವ ಪೊಲೀಸ್ ವಸತಿ ಗೃಹಗಳು ಮಳೆಯ ನೀರಿನಿಂದ ಸೋರುತ್ತಿದೆ. ಸೋರುತ್ತಿರುವ ವಸತಿ ಗೃಹ ಗಳ  ಮೇಲೆ ಪ್ಲಾಸ್ಟಿಕ್ ಟಾರ್ಪಲ್ ಹಾಕಿಕೊಂಡು ಮಳೆಯ ನೀರಿನಿಂದ ರಕ್ಷಣೆ   ಪಡೆಯುತ್ತಿದ್ದಾರೆ. ನಾಡಿನಲ್ಲಿ…

Read More

ಕಿಮ್ಮನೆ ರತ್ನಾಕರ್ ಗೆ ಕಾಂಗ್ರೆಸ್ ಸಮಾವೇಶದಲ್ಲಿ ಅವಮಾನ…?!!!!! ಜಿಲ್ಲಾ ಕಾಂಗ್ರೆಸ್ ನ ಗುಂಪುಗಾರಿಕೆಗೆ ಕಿಮ್ಮನೆ ಬೆಂಬಲಿಗರ ಆಕ್ರೋಶ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ ಇದೀಗ ರಾಜ್ಯ ನಾಯಕರ ಅಂಗಳಕ್ಕೆ ತಲುಪಿದೆ.ತೀರ್ಥಹಳ್ಳಿ ಕ್ಷೇತ್ರದಲ್ಲಿದ್ದ ಅಸಮಾಧಾನ, ಭಿನ್ನಮತ ಇದೀಗ ಜಿಲ್ಲಾ ನಾಯಕತ್ವದಲ್ಲೂ ಹೊರ ಬಿದ್ದಿದೆ.  ನಡೆದಿದ್ದೇನು?? ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೀರ್ಥಹಳ್ಳಿಯ ಗುಡ್ಡೆಕೊಪ್ಪದಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ನಡೆಸಿ ಸಾವಿರಾರು ಕಾರ್ಯಕರ್ತರೊಂದಿಗೆ  ಶಿವಮೊಗ್ಗದ ಸಮಾವೇಶಕ್ಕೆ ಹಾಜರಾಗಿದ್ದರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸಾವಿರಾರು ಮಂದಿ ಕಾರ್ಯಕರ್ತರು ಬಂದಿದ್ದರು. ಸಭಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, ನಾಯಕರಾದ ಹರಿಪ್ರಸಾದ್, ಕಾಗೋಡು ತಿಮ್ಮಪ್ಪ, ಕಿಮ್ಮನೆ, ಮಂಜುನಾಥ ಗೌಡ, ಸುಂದರೇಶ್ ಇತರರು…

Read More

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ ಸಾಗರ ಕ್ಷೇತ್ರದ ಜನಪ್ರಿಯ ಹಿರಿಯ ನಾಯಕರು, ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರು ಹಾಗೂ ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ಡಾ. ಕಾಗೋಡು ತಿಮ್ಮಪ್ಪ ರವರು ತಮ್ಮ 94ನೇ ಜನ್ಮದಿನವನ್ನು ಇಂದು ಆಚರಿಸಿಕೊಂಡಿದ್ದಾರೆ. ಸರಳತೆ, ನಿಷ್ಠೆ, ಪ್ರಾಮಾಣಿಕತೆ ಮತ್ತು ಜನಪರ ಹೋರಾಟಗಳಿಂದ ರಾಜ್ಯ ರಾಜಕೀಯಕ್ಕೆ ಮೌಲ್ಯಗಳನ್ನು ತುಂಬಿದ ಕಾಗೋಡು ತಿಮ್ಮಪ್ಪ ಅವರ ಜೀವನಗಾಥೆ, ಇಂದಿಗೂ ಅನೇಕ ರಾಜಕಾರಣಿಗಳಿಗೆ ಪಾಠವಾಗಿಯೇ ಉಳಿದಿದೆ….

Read More

RIPPONPETE | ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು

RIPPONPETE |  ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು ಸದ್ದು ಮಾಡುತ್ತಿರುವ ಅಕ್ರಮ ನಾಡ ಬಂದೂಕುಗಳು – ಕಾನೂನಿಗೆ ಬಿಗಿ ಕಡಿವಾಣ ಅಗತ್ಯ – ಅನಧಿಕೃತ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ವ್ಯಕ್ತಿಯೊಬ್ಬರನ್ನು ಬಲಿ ಪಡೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದಲ್ಲಿ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಕೋಡೂರು ಸಮೀಪದ ಹಿರಿಯೋಗಿ ಗ್ರಾಮದ ದೇವರಾಜ…

Read More

ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ

ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ ಶಿವಮೊಗ್ಗ ನಗರ ಆಯನೂರು ಗೇಟ್ ಬಳಿ ಭಾನುವಾರ ಮಧ್ಯಾಹ್ನ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಾಯಗೊಂಡ ಮೂವರಲ್ಲಿ ಒಬ್ಬರಿಗೆ ತೀವ್ರ ರೀತಿಯಲ್ಲಿ ತಲೆಗೆ ಪೆಟ್ಟಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಫುಡ್‌ ಡೆಲಿವರಿ ಬಾಯ್‌ ಸಿಗ್ನಲ್‌ ಬ್ರೇಕ್‌ ಮಾಡಿ ಅಜಾಗರೂಕವಾಗಿ ಬೈಕ್‌ ಚಲಾಯಿಸಿದ್ದು, ಇದನ್ನು ತಪ್ಪಿಸಲು ಶರಾವತಿ ನಗರದ ಕಡೆಯಿಂದ ಬರುತ್ತಿದ್ದ ಎರಿಟಿಗಾ ಕಾರು…

Read More

ಈ ಬಾರಿಯ ಗಣರಾಜ್ಯೋತ್ಸವ 77ನೇ ಅಥವಾ 78ನೇ ಆಚರಣೆ! ಗೊಂದಲ ಬೇಡ – ಸಂಪೂರ್ಣ ವಿವರ ಇಲ್ಲಿದೆ

2026ರ ಗಣರಾಜ್ಯೋತ್ಸವ 77ನೇಯಾ ಅಥವಾ 78ನೇಯಾ ಎಂಬ ಗೊಂದಲವಿದೆಯಾ? ಭಾರತ 1950ರಿಂದ ಗಣರಾಜ್ಯೋತ್ಸವವನ್ನು ಹೇಗೆ ಎಣಿಸುತ್ತದೆ ಎಂಬ ಸಂಪೂರ್ಣ ವಿವರಗಳನ್ನು ಇಲ್ಲಿ ಓದಿ. ನವದೆಹಲಿ: ಪ್ರತಿ ವರ್ಷ ಜನವರಿ 26ರಂದು ಭಾರತದಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಆದರೆ ಈ ಬಾರಿ 77ನೇಯಾ? 78ನೇಯಾ? ಎಂಬ ಗೊಂದಲ ಹಲವರಲ್ಲಿ ಕಂಡುಬಂದಿದೆ. ಇದರ ಸ್ಪಷ್ಟ ಉತ್ತರವೇನೆಂದರೆ – ಈ ಬಾರಿ ಭಾರತ 77ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26ರಂದು ಸಂವಿಧಾನ…

Read More

ಇಂದು ರಾತ್ರಿ 9.15 ಕ್ಕೆ ಕೆಂಪುಕೋಟೆಯ ಮೇಲೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ :

ಪ್ರಧಾನಿ ಮೋದಿ ಅವರು ಗುರುವಾರ ರಾತ್ರಿ 9:15 ಕ್ಕೆ ಕೆಂಪು ಕೋಟೆಯ ಮೇಲೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಸ್ವಾತಂತ್ರ್ಯ ದಿನಾಚರಣೆ ಹೊರತುಪಡಿಸಿ, ಸ್ಮಾರಕದ ಮೇಲೆ ಮೋದಿ ಭಾಷಣ ಮಾಡುತ್ತಿರುವುದು ಇದು ಎರಡನೇ ಬಾರಿಯಾಗಿದೆ.  ಗುರು ತೇಜ್ ಬಹದ್ದೂರ್ ಅವರ 400 ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾತ್ರಿ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗುರು ತೇಜ್ ಬಹದ್ದೂರ್ ಜಿ ಅವರ ಜೀವನವನ್ನು ಬಿಂಬಿಸುವ ಭವ್ಯವಾದ ಬೆಳಕು ಮತ್ತು ಧ್ವನಿ ಪ್ರದರ್ಶನವೂ…

Read More

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಣ್ಣಾಮಲೈ ನೇಮಕ::

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ತಮಿಳುನಾಡು ಬಿಜೆಪಿ ಅಧ್ಯಕ್ಷನಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಗುರುವಾರ ನೇಮಿಸಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇಮಕಾತಿ ಪತ್ರವನ್ನು ತಮಿಳುನಾಡು ಬಿಜೆಪಿಗೆ ರವಾನಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಗೆ ಮುನ್ನ ತಮಿಳುನಾಡಿನಲ್ಲಿ ಪಕ್ಷವನ್ನು ಬಲಪಡಿಸಲು ಬಿಜೆಪಿ ಬುಧವಾರ ಪಕ್ಷದ ರಾಜ್ಯ ಅಧ್ಯಕ್ಷರಾಗಿದ್ದ ಎಲ್. ಮುರುಗನ್ ಅವರನ್ನು ಕೇಂದ್ರ ಸಚಿವಾಲಯದ ರಾಜ್ಯ ಸಚಿವರನ್ನಾಗಿ ನೇಮಿಸಿತ್ತು. ಅವರಿಗೆ ಮಾಹಿತಿ ಮತ್ತು…

Read More

ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್

ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಮೊಹಮದ್ ಝಕ್ರಿಯ ಅವರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಶಿವಮೊಗ್ಗ | ಜನವರಿ 8..  ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ…

Read More

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ | Thirthahalli

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ! ತೀರ್ಥಹಳ್ಳಿ : ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್. ಪಿ ಇಂದು ಸಂಜೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.  ಆರೋಗ್ಯ ಗಂಭೀರವಾಗಿ ಹದಗೆಟ್ಟಿದ್ದ ಕಾರಣ ಇಂದು ಬೆಳಿಗ್ಗೆಯಿಂದ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ .ಸಂಜೆ ಸಮಯಕ್ಕೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಜುನಾಥ್ ರವರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More