ತೀರ್ಥಹಳ್ಳಿ ಪಟ್ಟಣದ ತುಡ್ಕಿಯಲ್ಲಿ ಕಾಣಿಸಿಕೊಂಡ ಚಿರತೆ – ಮೊರಾರ್ಜಿ ವಸತಿ ಶಾಲೆ ಮಕ್ಕಳಿಗೆ ಆಟದ ಮೈದಾನಕ್ಕೆ ತೆರಳದಂತೆ ಕಟ್ಟಪ್ಪಣೆ|leopard

ವನ್ಯಜೀವಿಗಳ ಕಾಟ ಬರೀ ಗ್ರಾಮಾಂತರ ಪ್ರದೇಶಕ್ಕೆ ಸೀಮಿತವಾಗಿಲ್ಲ, ಪಟ್ಟಣ, ನಗರ ಪ್ರದೇಶಕ್ಕೂ ವನ್ಯಜೀವಿಗಳು ದಾಂಗುಡಿ ಇಡುತ್ತಿದ್ದು ಭಯ ಮೂಡಿಸುತ್ತಿವೆ. ಕೆಲದಿನದಿಂದ ಪಟ್ಟಣ ಸಮೀಪದ ತುಡ್ಕಿಯ ಆನಂದಗಿರಿ ಗುಡ್ಡದ ಸುತ್ತಲಿನ ಪ್ರದೇಶದಲ್ಲಿ ಚಿರತೆ ಕಂಡು ಬಂದಿದ್ದು ಜನರು ಗಾಬರಿಗೊಂಡಿದ್ದಾರೆ. ಆನಂದಗಿರಿ ಗುಡ್ಡದಲ್ಲಿರುವ ಮೊರಾರ್ಜಿ ವಸತಿ ಶಾಲೆ ಮಕ್ಕಳಿಗೆ ಆಟದ ಮೈದಾನಕ್ಕೆ ತೆರಳದಂತೆ ಕಟ್ಟಪ್ಪಣೆ ಹೊರಡಿಸಲಾಗಿದೆ. ಮಕ್ಕಳ ಪ್ರಾರ್ಥನಾ ಕಾರ್ಯಕ್ರಮದ ಅವಧಿಯನ್ನು ಕೆಲ ದಿನದ ಮಟ್ಟಿಗೆ ಬದಲಾಯಿಸಲಾಗಿದೆ. ಕಟ್ಟಡ ಒಳಾಂಗಣ, ಕೊಠಡಿಯಲ್ಲಿ ಇರುವಂತೆ ಮಕ್ಕಳಿಗೆ ಸೂಚಿಸಲಾಗಿದೆ. ಚಿರತೆ ಓಡಾಟವನ್ನು ಸಾರ್ವಜನಿಕರು…

Read More

ತೀರ್ಥಹಳ್ಳಿ:ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೈಲ ಬೆಲೆಯೇರಿಕೆ ವಿರೋಧಿಸಿ ಸೈಕಲ್ ಜಾಥಾ

ತೀರ್ಥಹಳ್ಳಿ :ಕೇಂದ್ರ ಸರ್ಕಾರದ ಬೆಲೆ ಏರಿಕೆ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ಕಾಂಗ್ರೆಸ್ ವತಿಯಿಂದ  ನಡೆಯುತ್ತಿದ್ದು , ಪೆಟ್ರೋಲ್ ಡೀಸೆಲ್, ಗ್ಯಾಸ್ ಮತ್ತು ಶ್ರೀ  ಸಾಮಾನ್ಯ ಜನರ ಬಳಕೆಯ ವಸ್ತುಗಳಬೆಲೆಯನ್ನು ಯನ್ನು ನಿರಂತರವಾಗಿ  ಕೇಂದ್ರ ಸರಕಾರವು ಬೆಲೆ ಏರಿಕೆ ಇಂದು ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೈಕಲ್ ಜಾಥಾ ದಲ್ಲಿ ಪ್ರತಿಭಟನೆ ನಡೆಸಲಾಯಿತು.  ಶಿವ ರಾಜಪುರದ ಗಣಪತಿ ದೇವಸ್ಥಾನದ ಮುಂಭಾಗದಿಂದ ಸ್ವತಃ ಕಿಮ್ಮನೆ ರತ್ನಾಕರ್ ಅವರು ಸೈಕಲ್ ಏರಿ ಪಟ್ಟಣದ ತಾಲ್ಲೂಕು ಕಚೇರಿಯ ವರೆಗೆ…

Read More

ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ : ಕೊಲೆ ಎಂಬ ಶಂಕೆ ವ್ಯಕ್ತಪಡಿಸುತ್ತಿರುವ ಕುಟುಂಬಸ್ಥರು | MISSING

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.  ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಅನ್ವರ್ ಕಾಲೋನಿ‌ ನಿವಾಸಿ ಜಮೀರ್(19) ಎರಡು ದಿನಗಳ ಹಿಂದ ಎಲೆಕ್ಟ್ರಿಕಲ್ ಕೆಲಸಕ್ಕೆ ತೆರಳಿದ್ದ ಆದರೆ ಇಂದು ಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.  ಅನ್ವರ್ ಕಾಲೋನಿಯ ಜಮೀರ್ ಮೊನ್ನೆ ಟಿವಿ ರಿಪೇರಿಗಾಗಿ ದೇವನರಸೀಪುರ ಗ್ರಾಮಕ್ಕೆ ಹೋಗಿದ್ದ ನಂತರ ಆತನ ಮೊಬೈಲ್ ಸ್ವಿಚ್ ಆಫ಼್ ಆಗಿತ್ತು. ಆತನ ಮೊಬೈಲ್ ಸ್ವಿಚ್ ಆಫ್ ಆದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಗಾಬರಿಗೊಂಡು ಹೊಸಮನೆ ಪೊಲೀಸ್ ಠಾಣೆಯಲ್ಲಿ…

Read More

ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ

ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಹೊಸನಗರ: ಡ್ರೋಣ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ ಕುರಿತು ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತಾಲೂಕಿನ ಕೆರೆಹಳ್ಳಿ ಹೋಬಳಿ ಬಾಳೂರು ಗ್ರಾಮದ ರೈತ ಧನಂಜಯ ಮತ್ತು ಮಂಜಪ್ಪ ಅವರ ಭತ್ತದ ಕೃಷಿ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃಷಿ ಇಲಾಖೆ ಆಯೋಜಿಸಿದ್ದ ಈ ಪ್ರಾತ್ಯಕ್ಷಿಕೆಯಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ರೈತರಿಗೆ ಡ್ರೋಣ್ ಬಳಸಿ ಔಷಧಿ ಸಿಂಪಡಣೆ, ಸದುಪಯೋಗ ಹಾಗೂ ಆಗುವ ಅನುಕೂಲ ಕುರಿತು…

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ|ಯಾವೆಲ್ಲಾ ಮಾರ್ಗ???ಎಷ್ಟಿದೆ ಟಿಕೆಟ್ ರೇಟ್..??? ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಈ ಸುದ್ದಿ ನೋಡಿ|airport

ಈ ತಿಂಗಳ ಅಂತ್ಯದಲ್ಲಿ ವಿಮಾನಯಾನ ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಮೊದಲಿಗೆ ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ವಿಮಾನ ಹಾರಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಆರು ಕೋಟಿ ರೂ. ವೆಚ್ಚದ ಮೂರು ಅಗ್ನಿಶಾಮಕ ವಾಹನಗಳು ಬರುವವರೆಗೆ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ವಿಮಾನಯಾನ ಸಚಿವಾಲಯ ಸೂಚನೆ ನೀಡಿತ್ತು. ಈಗ ಅದು ಕೂಡ ವಾರದೊಳಗೆ ಬರುತ್ತಿದ್ದು, ಈ ತಿಂಗಳ ಕೊನೆಯೊಳಗೆ ಅಧಿಕೃತವಾಗಿ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದರು. ಇಂಡಿಗೋ ವಿಮಾನಯಾನ ಕಂಪನಿಯೊಂದಿಗೆ…

Read More

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರು ಗ್ರಾಮಸ್ಥರ ವಿರುದ್ದ ಪ್ರಕರಣ ದಾಖಲಾದ ಘಟನೆ ನಡೆದಿದೆ. ತನ್ವೀರ್ ಹೊರಕೆರೆ (38) ಹಲ್ಲೆಗೊಳಗಾದ ಬಸ್ ಕಂಡಕ್ಟರ್ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಶಿಕಾರಿಪುರ – ಮುಡುಬಾಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವ ಬಸ್ ನಲ್ಲಿ ಕಂಡಕ್ಟರ್ ಆಗಿದ್ದಾರೆ. ಇಬ್ಬರು…

Read More

Sigandoor | ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ : ಕೆಳಗೆ ಬಿದ್ದು ಕಾರ್ಮಿಕ ಸಾವು

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ದಿಲೀಪ್ ಬಿಲ್ಡ್ ಕಂಪನಿಯ ಕಾರ್ಮಿಕ ಪಶ್ಚಿಮ ಬಂಗಾಳದ ರಬಿ ಉಲ್ ಇಸ್ಮಾಯಿಲ್(42) ಮೃತಪಟ್ಟ ವ್ಯಕ್ತಿ. ಸೇತುವೆ ಕಾಮಗಾರಿ ಕೆಲಸ ನಿರ್ವಹಿಸುವ ವೇಳೆ ಮೂರ್ಛೆ ಬಂದು ಕೆಳಗೆ ಬಿದ್ದಿದ್ದ ಅವರನ್ನು ತುರ್ತು ಚಿಕಿತ್ಸೆಗಾಗಿ ಸಾಗರದ ಖಾಸಗಿ ಆಸ್ಪತ್ರೆಗೆ…

Read More

Ripponpete |ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ – ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ

Ripponpete | ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ…

Read More

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು ರಿಪ್ಪನ್‌ಪೇಟೆ : ತಳಲೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ತಳಲೆ ಹೆಚ್.ಎಸ್.ದಿನೇಶ ತಂಡ ಭರ್ಜರಿ ಗೆಲುವಿನೊಂದಿಗೆ ಅಡಳಿತದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಳಲೆ ಗ್ರಾಮದಲ್ಲಿ ಭಾನುವಾರದಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಸಾಮಾನ್ಯ ಸಾಲಗಾರ ಕ್ಷೇತ್ರದಿಂದ ಹೆಚ್ ಎಸ್ ದಿನೇಶ್ ಗೌಡ್ರು ತಳಲೆ,ಹೆಚ್ ಎಸ್ ಗಂಗಾಧರ್ , ಹಾರಂಬಳ್ಳಿ ,ಬಸಪ್ಪ ಕೆ…

Read More

ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ನಾಪತ್ತೆ | Missing

ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ನಾಪತ್ತೆ ತೀರ್ಥಹಳ್ಳಿ : ಜೂನ್ 30ರಂದು ಮನೆಯಿಂದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಕೆಲಸಕ್ಕೆಂದು ಹೊರಗೆ ಹೋದ 24 ವರ್ಷದ ಪೂಜಾ ಎ.ಕೆ ಈವರೆಗೂ ವಾಪಾಸ್ಸಾಗಿರುವುದಿಲ್ಲ.  ಪೂಜಾ ಎ ಕೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಶಾಲ್ ಎಂಬುವವರ ಮಗಳಾಗಿದ್ದಾಳೆ. ಈಕೆಯ ಚಹರೆ 4.06 ಅಡಿ ಎತ್ತರ, ತೆಳುವಾದ ಮೈಕಟ್ಟು, ಕೋಲು ಮುಖ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೊರಗೆ ಹೋಗುವಾಗ ನೀಲಿ ಬಣ್ಣದ ಚೂಡಿ ಟಾಪ್…

Read More