ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಒತ್ತಾಯಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ|Hosanagara
ಹೊಸನಗರ ತಾಲೂಕು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಗುಂಡಿ ಬಿದ್ದಿರುವುದನ್ನು ವಿರೋಧಿಸಿ ತಾಲ್ಲೂಕು ಆಮ್ ಆದ್ಮಿ ಪಕ್ಷದ ವತಿಯಿಂದ ವಿಭಿನ್ನ ರೀತಿಯ ಪ್ರತಿಭಟನೆ ಮಾಡಲಾಯಿತು. ರಸ್ತೆಯಲ್ಲಿ ಬಿದ್ದಿರುವ ಗುಂಡಿಗೆ ಹಾರ ಹಾಕಿ ಊದುಬತ್ತಿ ಹಚ್ಚಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ತಾಲೂಕ್ ಆಮ್ ಆದ್ಮಿಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಇದರ ಬಗ್ಗೆ ಯಾವುದೇ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ತಲೆಕೆಡಿಸಿಕೊಂಡಿಲ್ಲ,ತುಂಬು ಗರ್ಭಿಣಿಯರನ್ನು ವಾಹನಗಳಲ್ಲಿ…