Headlines

ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು

ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ. ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು(ten month baby) ಚಿಕಿತ್ಸೆ…

Read More

ವಿದ್ಯುತ್ ಸ್ಪರ್ಶದಿಂದ ಯುವಕ ಸಾವು|electric shock

ಮನೆಯಲ್ಲಿ ಹೋಲ್ಡರ್‌ಗೆ ಬಲ್ಪ್ ಹಾಕಲು ಹೋಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ನಗರದ ಶಾಂತಿನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಾಂತಿನಗರದ ನಿವಾಸಿ ರೂಪ್ ಸಿಂಗ್ (33) ಮೃತ ದುರ್ದೈವಿ. ಮನೆಯಲ್ಲಿ ಬಲ್ಬ್‌ ಬದಲಾವಣೆ ಮಾಡುವ ಸಂದರ್ಭದಲ್ಲಿ ಇವರಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದರೂ, ಅದಾಗಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಸಾಗರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ…

Read More

ತೀರ್ಥಹಳ್ಳಿಯಲ್ಲಿ ರೋಹಿತ್ ಚಕ್ರತೀರ್ಥ ವಿರುದ್ದ ಗೋಬ್ಯಾಕ್ ಪ್ರತಿಭಟನೆ – ಪ್ರತಿಭಟನಾಕಾರರ ಪೊಲೀಸ್ ವಶಕ್ಕೆ|thirthahalli

ರೋಹಿತ್ ಚಕ್ರತೀರ್ಥ ವಿರುದ್ದ ಭಾರಿ ಪ್ರತಿಭಟನೆ  ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಕಡೆಗೋಲು ವಿಚಾರ ಮಂಥನ ವೇದಿಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ ಅವರು ಕುವೆಂಪು ಸಾಹಿತ್ಯ ಮತ್ತು ರಾಷ್ಟ್ರೀಯತೆ ವಿಷಯ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ.ಇದು ಕುವೆಂಪು ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿದೆ. ಕುವೆಂಪು ಅವರನ್ನು ಅವಮಾನಿಸುವ ಮೂಲಕ ರೋಹಿತ್ ಚಕ್ರತೀರ್ಥ ವಿಕೃತಿ ಮೆರೆದಿದ್ದಾರೆ. ಇವರಿಗೆ ಕುವೆಂಪು ಅವರ ಬಗ್ಗೆ ಮಾತನಾಡಲು ಅವಕಾಶ ನೀಡಬಾರದು ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂದಿನಿಂದಲೇ ಪ್ರತಿಭಟನೆ ವ್ಯಕ್ತವಾಗಿತ್ತು. ಗೋ ಬ್ಯಾಕ್ ಪ್ರತಿಭಟನೆಯೂ…

Read More

ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೋಳಿ ವರ್ಗಾವಣೆ – ನೂತನ ಪಿಎಸ್ ಐ ಯಾರು ಗೊತ್ತಾ..??? ಈ ಸುದ್ದಿ ನೋಡಿ

ರಿಪ್ಪನಪೇಟೆ : ರಾಜ್ಯ ಸರ್ಕಾರದ ಸಾಮಾನ್ಯ ವರ್ಗಾವಣೆ ಅನ್ವಯ ರಾಜ್ಯಾದ್ಯಂತ 50 ಪಿಎಸ್ಐ ಗಳನ್ನು ವರ್ಗಾವಣೆ ಗೊಳಿಸಿ ಆದೇಶ ಮಾಡಿದೆ. ರಿಪ್ಪನ್‌ಪೇಟೆ ಪಿಎಸ್ಐ ಶಿವಾನಂದ ಕೋಳಿ ರವರನ್ನು ಹೊಸನಗರ ಪೊಲೀಸ್ ಠಾಣೆಗೆ ಪಿಎಸ್ ಐ ಆಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಪ್ರಸ್ತುತ ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಎಸ್ ಪಿ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸನಗರದಲ್ಲಿ ಕಾರ್ಯನಿರ್ವಹಿಸುತಿದ್ದ ನೀಲಪ್ಪ ನರಲಾರ ರವರನ್ನು ಹಿರೇಕೆರೂರು ಪೊಲೀಸ್…

Read More

ರಸ್ತೆ ಅಪಘಾತ – ಶಾಲಾ ಶಿಕ್ಷಕಿ ಸಾವು

ರಸ್ತೆ ಅಪಘಾತ – ಶಾಲಾ ಶಿಕ್ಷಕಿ ಸಾವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರವಂತೆಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಕುಂತಲಾ (29),ಚನ್ನಗಿರಿ ತಾಲ್ಲೂಕಿನ ಮಾವಿನಕಟ್ಟೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಶುಕ್ರವಾರ (ಅ.25) ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗದಲ್ಲಿ ನಡೆಯುತ್ತಿದ್ದ ತರಬೇತಿಗೆ ಹೊರಟಿದ್ದ ಅವರು, ಚನ್ನಗಿರಿಯ ಮಾವಿನಕಟ್ಟೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರು.ಈ ವೇಳೆ ಲಾರಿಯೊಂದು ಶಕುಂತಲಾ ಅವರಿಗೆ ಡಿಕ್ಕಿ ಹೊಡೆದಿದೆ. ತಕ್ಷಣ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಶಿಕ್ಷಕಿ ಸಾವನ್ನಪ್ಪಿದ್ದಾರೆ ಎಂದು…

Read More

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಮನೆ ಹಾನಿಯಾಗಿರುವ ಘಟನೆ ನಡೆದಿದೆ. ವಿಷಯ ತಿಳಿಯುತಿದ್ದಂತೆ ಶಾಸಕರ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ತೆರಳಿ ಸಂತ್ರಸ್ಥರಿಗೆ ಧೈರ್ಯ ತುಂಬಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡುತಿದ್ದಾರೆ.  ಘಟನೆ…

Read More

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು..

ANANDAPURA | ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ : ಕೋಳಿಗಾಗಿ ಮುಗಿಬಿದ್ದ  ಚಿಕನ್ ಪ್ರಿಯರು.. ಶಿವಮೊಗ್ಗ – ಕಡೂರಿನಿಂದ ಸಾಗರಕ್ಕೆ ಹೊರಟಿದ್ದ ಕೋಳಿ ತುಂಬಿದ್ದ ಕ್ಯಾಂಟರ್ ಲಾರಿ‌ ಪಲ್ಟಿಯಾಗಿ ನೂರಾರು ಕೋಳಿಗಳು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕು ಆನಂದಪುರಂ ಬಳಿಯ ಮುಂಬಾಳು ಕೆರೆ ಏರಿ ಮೇಲೆ‌ ಇಂದು ಬೆಳಗ್ಗೆ ನಡೆದಿದೆ. ಸಾಗರ ತಾಜ್ ಟ್ರೇಡರ್ಸ್​ಗೆ ಕಡೂರಿನಿಂದ ಸುಮಾರು ನಾಲ್ಕೂವರೆ ಟನ್​ನಷ್ಟು ಕೋಳಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಕಾರು ಅಡ್ಡ ಬಂದ ಕಾರಣ ಕ್ಯಾಂಟರ್ ಲಾರಿ…

Read More

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ : ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ ಉರೂಸ್ ಸಮಾರಂಭ ಮೇ 16ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಅಧ್ಯಕ್ಷರಾದ ಜಿ ಮಹಮ್ಮದ್ ಸಾಬ್ ಹಾಗೂ ಉಪಾಧ್ಯಕ್ಷ ಅರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಮೇ 16 ,…

Read More

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ಮಚ್ಚೆ, ದರ್ಶನ್, ಕೇಶವ, ನಾಗರಾಜರನ್ನ ಬಂಧಿಸಲಾಗಿದೆ. ಬಂಧಿತರಿಂದ 1 ಕೆಜಿ 225 ಗ್ರಾಂ ಒಣ ಗಾಂಜಾವನ್ನ ಶಿವಮೊಗ್ಗದ ಸಿಇಎನ್ ಪೊಲಿಸರು ವಶಕ್ಕೆ ಪಡೆಯಲಾಗಿದೆ ಶಿವಮೊಗ್ಗ ತಾಲ್ಲೂಕು ಬೊಮ್ಮನಕಟ್ಟೆ ಯಿಂದ ಬಸವಗಂಗೂರು ಕಡೆ ಹೋಗುವ ರಸ್ತೆಯ ಮಧ್ಯದಲ್ಲಿ  ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ  ಮಾಹಿತಿಯ ಮೇರೆಗೆ ಸಿಇಎನ್ ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ದಾಳಿ ನಡೆದಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿರಾದ  1.ಆಕಾಶ ಸಿ @…

Read More

ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ

ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ ಆಂಬುಲೆನ್ಸ್ ಡಿಕ್ಕಿಯಾಗಿ ಹೊಸನಗರ ಮೂಲದ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿಲುವಾಗಿಲು ಬಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೊನಲೆ ಗ್ರಾಮದ ಪ್ರವೀಣ್ (30) ಎಂದು ಗುರುತಿಸಲಾಗಿದೆ. ನಿಲುವಾಗಿಲು ಬಳಿಯಲ್ಲಿ ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಕೊಪ್ಪ…

Read More
Exit mobile version