Headlines

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವು|accident

ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ನದೀಮ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಏಪ್ರಿಲ್ 2 ರಂದು ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು.ಮೆಗ್ಗಾನ್ ನಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ…

Read More

ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ಮೂವರ ಬಂಧನ : 25 ಲಕ್ಷ ರೂ ಸೀಜ್

ಚುನಾವಣೆಯ ಚಟುವಟಿಕೆಗಳ ನಡುವೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್​ ಕೂಡ ಜೋರಾಗಿದೆ. ಈ ಸಂಬಂಧ ಶಿವಮೊಗ್ಗ ಪೊಲೀಸ್ ಆನ್‌ ಲೈನ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ದಂಧೆಗೆ ಕಡಿವಾಣ ಹಾಕಿದ್ದಾರೆ.  ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್​(ipl betting) ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಇಎನ್​ ಪೊಲೀಸ್​ ಸ್ಟೇಷನ್​ ಪಿಐ ಸಂತೋಷ್ ಪಾಟೀಲ್ ನೇತೃತ್ವದಲ್ಲಿ ಟೀಂವೊಂದನ್ನ ರಚಿಸಲಾಗಿತ್ತು. ಸದ್ಯ ಈ ಟೀಂ ಕಳೆದ  15-04-2023 ರಂದು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡುತಿದ್ದವರ ಮೇಲೆ ದಾಳಿ ನಡೆಸಿದೆ. ಇನ್ನೂ ಈ…

Read More

ರಿಪ್ಪನ್‌ಪೇಟೆ : ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್

ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾಗದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್ ರಿಪ್ಪನ್‌ಪೇಟೆ;- ಐದು ವರ್ಷಕ್ಕೊಮ್ಮೆ ನಡೆಯುವ ವಿಧಾನಸಭಾ ಚುನಾವಣೆ ಕಳೆದು ಪುನ: ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇಲ್ಲಿನ ನಾಡಕಛೇರಿ ಮತ್ತು ಗ್ರಾಮ ಪಂಚಾಯ್ತಿ ಕಛೇರಿ ಮುಂಭಾಗ ಇನ್ನೂ ಚುನಾವಣಾ ಅಯೋಗದವರು 2018 ರ ವಿಧಾನಸಭಾ ಚುನಾವಣೆ ಬ್ಯಾನರ್ ತಗೆಯದೇ ನಿರ್ಲಕ್ಷö್ಯ ವಹಿಸಿದ್ದಾರೆಂಬುದಕ್ಕೆ ಇಲ್ಲಿ ರಾರಾಜಿಸುತ್ತಿರುವ ಹಳೆಯ ಬ್ಯಾನರ್‌ಗಳೇ ಸಾಕ್ಷಿಕರಿಸುತ್ತಿವೆ. ಈಗಾಗಲೇ 2023 ರ ವಿಧಾನಸಭಾ ಚುನಾವಣೆ ಪ್ರಕಟಗೊಂಡು ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ…

Read More

ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿರುವ ಬಿ ವೈ ವಿಜಯೇಂದ್ರ ರ ಒಟ್ಟು ಆಸ್ತಿ ಎಷ್ಟು ಗೊತ್ತಾ???? ಪತ್ನಿಗೆ ಸಾಲ ಕೊಟ್ಟಿರುವ BYV ಗೆ ಸ್ವಂತ ಕಾರು ಇಲ್ಲ!!! ಈ ಸುದ್ದಿ ನೋಡಿ

ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉತ್ತರಾಧಿಕಾರಿಯಾಗಿ ಶಿಕಾರಿಪುರದಲ್ಲಿ ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪ ಅವರು ಚುನಾವಣೆ ರಾಜಕೀಯದಿಂದ ಹಿಂದೆ ಸರಿದು ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಟ್ಟಿದ್ದಾರೆ. ಅದರಂತೆ ವಿಜಯೇಂದ್ರ ಅವರು ಶಿಕಾರಿಪುರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ತಮ್ಮ ಕುಟುಂಬದ ಆಸ್ತಿ ಎಷ್ಟು? ಅವರ ಬಳಿ ಏನೆಲ್ಲಾ ಇದೆ ಎನ್ನುವುದನ್ನು ವಿಜಯೇಂದ್ರ ಅವರು ನಾಮಿನೇಷನ್​ನಲ್ಲಿ ಮಾಹಿತಿ ನೀಡಿದ್ದಾರೆ.  ಬಿವೈ ವಿಜಯೇಂದ್ರ ಮತ್ತು ಅವರ ಪತ್ನಿ ಪ್ರೇಮಾ ವಿಜಯೇಂದ್ರ ಒಟ್ಟು…

Read More

ಇದು ನನ್ನ ಕೊನೆಯ ಚುನಾವಣೆ – ಆರಗ ಜ್ಞಾನೇಂದ್ರ |ಸಾವಿರಾರು ಅಭಿಮಾನಿಗಳೊಂದಿಗೆ ಮೆರವಣಿಗೆ ತೆರಳಿ ನಾಮಪತ್ರ ಸಲ್ಲಿಸಿದ ಆರಗ

ತೀರ್ಥಹಳ್ಳಿ : ಈ ಬಾರಿಯ ಚುನಾವಣೆ ನನ್ನ ಕೊನೆ ಚುನಾವಣೆಯಾಗಿದ್ದು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಹತ್ತನೇ ಬಾರಿಗೆ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ನಾಮಪತ್ರ ಸಲ್ಲಿಸಿದ್ದೇನೆ. ಕಳೆದ 9 ಚುನಾವಣೆಯಲ್ಲಿ 4 ಬಾರಿ ತೀರ್ಥಹಳ್ಳಿ ಜನ ನನ್ನನ್ನು ಗೆಲ್ಲಿಸಿದ್ದಾರೆ. 15 ಸಾವಿರಕ್ಕೂ ಹೆಚ್ಚು ಜನ ಇವತ್ತು ಬಂದು ನನಗೆ ಆಶೀರ್ವದಿಸಿದ್ದಾರೆ ಇದೇ ನನ್ನ ಕೊನೆಯ ಚುನಾವಣೆಯಾಗಿದ್ದು…

Read More

ಹಾಲಪ್ಪ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್: ಬೇಳೂರು ಗೋಪಾಲಕೃಷ್ಣ ಆರೋಪ|political news

ಹಾಲಪ್ಪ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್, : ಬೇಳೂರು ಗೋಪಾಲ ಕೃಷ್ಣ ಆರೋಪ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರಿಂದ ಭರ್ಜರಿ ಚುನಾವಣಾ ಪ್ರಚಾರ. ರಿಪ್ಪನ್ ಪೇಟೆ :ಹಿಂದೆ ಸೊರಬದಲ್ಲಿ ಬಂಗಾರಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡಿದ್ರು.ಈಗ ಸಾಗರದಲ್ಲಿ ಕಾಗೋಡು ತಿಮ್ಮಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡೋಕೆ ರೆಡಿ ಆಗಿದ್ದಾರೆ. ಎಂದು ಮಾಜಿ ಶಾಸಕ ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದಲ್ಲಿ  ಚುನಾವಣಾ ಪ್ರಚಾರ  ಭಾಷಣ …

Read More

ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ಪೂರ್ಣ – ವಾಹನ ಸಂಚಾರ ಪುನರಾರಂಭ|hulikal ghat

ಕರಾವಳಿ ಹಾಗೂ ಮಲೆನಾಡಿಗೆ ಸಂಪರ್ಕ ಕಲ್ಪಿಸುವ ಬಾಳೆಬರೆ (ಹುಲಿಕಲ್‌) ಘಾಟ್‌ನ ‌ಕಾಂಕ್ರಿಟೀಕರಣ ಕಾಮಗಾರಿಯು ಪೂರ್ಣಗೊಂಡಿದ್ದು, ಶನಿವಾರ (ಏ.15) ರಾತ್ರಿಯಿಂದ ವಾಹನ ಸಂಚಾರ ಪುನಃ ಆರಂಭಗೊಂಡಿದೆ. ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ನಿರ್ಮಾಣ ಕಾಮಗಾರಿಗಳಿಗಾಗಿ ಫೆ. 5 ರಿಂದ ಏ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಏ. 5ರಂದು ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ 10 ದಿನಗಳ ವರೆಗೆ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ….

Read More

ಐಶರಾಮಿ ಜೀವನ ನಡೆಸುವ ಬೇಳೂರು ದೇಣಿಗೆಯ ನಾಟಕವಾಡುತಿದ್ದಾರೆ – ಹರತಾಳು ಹಾಲಪ್ಪ ವಾಗ್ದಾಳಿ|election

ರಿಪ್ಪನ್‌ಪೇಟೆ : ಯಡಿಯೂರಪ್ಪನವರ ರಾಜ್ಯದ ಮುಖ್ಯಮಮತ್ರಿಗಳಾಗಿದ್ದ ಆವಧಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರೆಸಾರ್ಟ್ ರಾಜಕೀಯ ಮಾಡುವ ಮೂಲಕ ಕಣ್ಣಿರು ಹಾಕಿಸಿದರ ಪರಿಣಾಮ ಈಗ ಮತದಾರರ ಮುಂದೆ ಕಣ್ಣಿರು ಹಾಕಿ ಅನುಕಂಪ ಗಿಟ್ಟಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ, ಈಗ ಹೋದಲ್ಲಿ ಬಂದಲ್ಲಿ ಕಣ್ಣೀರು ಹಾಕುತ್ತಿರುವುದು ಯಡಿಯೂರಪ್ಪ ನವರಿಗೆ ಕಣ್ಣೀರು ಹಾಕಿಸಿದ ಪಾಪ,ಯಡಿಯೂರಪ್ಪ ನವರಿಗೆ ಕಣ್ಣಿರು ಹಾಕಿಸಿದ ಮೊದಲ ವ್ಯಕ್ತಿ ಈ ಬೇಳೂರು ಗೋಪಾಲಕೃಷ್ಣ ಎಂದು ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ರಿಪ್ಪನ್‌ಪೇಟೆಯಲ್ಲಿ ಕಾರ್ಯಕರ್ತರ…

Read More

ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ – ಸಾಗರದಲ್ಲಿ ಪ್ರೀತಿಯಿಂದ ಹರಿದು ಬಂದ ಅಭಿಮಾನಿಗಳ ಜನಸಾಗರ|nomination

ಸಾಗರ : ವಿಧಾನಸಭಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಮೊದಲು ಸಾಗರದ ಗಣಪತಿ ದೇವಸ್ಥಾನದಲ್ಲಿ ದಂಪತಿ ಸಮೇತ ಪೂಜೆ ಸಲ್ಲಿಸಿ ಕಾಂಗ್ರೆಸ್ ಕಚೇರಿ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಂತರ ಮಾಧ್ಯಮಗಳಿಗೆ ಮಾತನಾಡಿದ, ಗೋಪಾಲಕೃಷ್ಣ ಬೇಳೂರು, ಇವತ್ತು ಒಳ್ಳೆಯ ದಿನ ಎಂದು ನಾಮಪತ್ರ ಸಲ್ಲಿಸಿದ್ದೆನೆ. ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಕಾಂಗ್ರೆಸ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದೇನೆ. ಸರಳವಾಗಿ ನಾಮಪತ್ರ ಸಲ್ಲಿಸುವ ಉದ್ದೇಶದಿಂದ ಯಾವ ಕಾರ್ಯಕರ್ತರಿಗೂ ಕರೆ ಕೊಟ್ಟಿಲ್ಲ. ಅದರೂ,…

Read More

ಕಾಂಗ್ರೆಸ್ 140ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದೆ – ಮಧು ಬಂಗಾರಪ್ಪ

ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ‌ ಕಾಂಗ್ರೆಸ್ ಪಕ್ಷ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರು ಹಾಗೂ ಸೊರಬ ವಿಧಾನಸಭಾ ಅಭ್ಯರ್ಥಿಯಾದ ಮಧುಬಂಗಾರಪ್ಪ ಹೇಳಿದರು. ಅವರು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆದ್ದಾರಿಪುರ ಸಮೀಪದ ಕಗ್ಗಲಿಜಡ್ಡು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ರಾಜ್ಯಕ್ಕೆ ಬೆಳಕು ನೀಡುವ ಉದ್ದೇಶದಿಂದ ಶರಾವತಿ ಮುಳುಗಡೆಯಾಗಿ ಅಲ್ಲಿನ ರೈತರು ಮನೆಮಠವನ್ನು ಕಳೆದು ಕೊಂಡ ಸಂತ್ರಸ್ಥರು ಹೆಚ್ಚು ಹೊಸನಗರ…

Read More