Headlines

ಅಂಗನವಾಡಿ ಸಹಾಯಕಿಯ ಭೀಕರ ಕೊಲೆ | ರಾತ್ರಿ ನಡೆದ ಬರ್ಬರ ಕೃತ್ಯ, ದುಷ್ಕರ್ಮಿಗಳು ಪರಾರಿ

ಅಂಗನವಾಡಿ ಸಹಾಯಕಿಯ ಭೀಕರ ಕೊಲೆ | ರಾತ್ರಿ ನಡೆದ ಬರ್ಬರ ಕೃತ್ಯ, ದುಷ್ಕರ್ಮಿಗಳು ಪರಾರಿ A 52-year-old Anganwadi assistant was brutally murdered near Belagihalli in Shiralkoppa of Shikaripura taluk, Shivamogga district. Police have registered a case and launched an investigation to trace the accused. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಬೆಳಗಿಯಲ್ಲಿ ಅಂಗನವಾಡಿ ಸಹಾಯಕಿಯಾಗಿದ್ದ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ತಡರಾತ್ರಿ…

Read More

ನಾಳೆ (03-03-2023) ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಛತ್ರಪತಿ ಶಿವಾಜಿ ಜಯಂತ್ಯೋತ್ಸವ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಮರಾಠಾ ಸಮಾಜದ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಮರಾಠ ಸಂಘ ಹಾಗೂ ಕ್ಷತ್ರಿಯ ಮರಾಠ ಯುವ ವೇದಿಕೆ ವತಿಯಿಂದ ನಾಳೆ 03/03/2023 ರಂದು ಸಂಜೆ 4.30 ಗಂಟೆಗೆ ಅದ್ದೂರಿಯಾಗಿ ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ , ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ,ಮಾಜಿ…

Read More

ಚಲಿಸುತಿದ್ದ ಕ್ಯಾಂಟರ್‌ಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವು

ಚಲಿಸುತಿದ್ದ ಕ್ಯಾಂಟರ್‌ಗೆ ವಿದ್ಯುತ್ ತಂತಿ ತಗುಲಿ ಚಾಲಕ ಸಾವು ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಕ್ಯಾಂಟರ್​​ ಚಾಲಕ ಮೃತಪಟ್ಟ ಘಟನೆ ಸೊರಬ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮೊಹಮ್ಮದ್​ ಈಶಾಮ್​ (32) ಮೃತ ದುರ್ಧೈವಿಯಾಗಿದ್ದಾರೆ. ಡಿ.5ರಂದು ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯಿಂದ ಸೊರಬ ತಾಲೂಕಿನ ಸುತ್ತಕೋಟೆಗೆ ತೆರಳುವ ರಸ್ತೆಮಾರ್ಗದಲ್ಲಿ ಸಾಸರಹಳ್ಳಿ ಸಮೀಪ ಜೋತು ಬಿದ್ದ ವಿದ್ಯುತ್ ತಂತಿ ಕ್ಯಾಂಟರ್​ಗೆ ತಗುಲಿದೆ. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದೆ ಎಂದು ಮೃತನ ತಂದೆ ರಿಯಾಜ್ ಅಹ್ಮದ್​…

Read More

ತೀರ್ಥಹಳ್ಳಿಯಲ್ಲಿ ಗೋರಕ್ಷಕರ ಮೇಲೆ ವಾಹನಹತ್ತಿಸಿ ಹತ್ಯೆಗೆ ಯತ್ನಿಸಿದ್ದ ಆರೋಪಿಗಳಾದ ಅಪ್ರೋಜ್ ಮತ್ತು ಇರ್ಫಾನ್ ಬಂಧನ

ತೀರ್ಥಹಳ್ಳಿ : ಗೋರಕ್ಷಣೆ ಮಾಡಲು ತೆರಳಿದ್ದ ಇಬ್ಬರು ಯುವಕರ ಮೇಲೆ ವಾಹನ ಹತ್ತಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಐದು ದಿನಗಳ ಹಿಂದೆ  ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಸಮೀಪ ವಾಹನವೊಂದರಲ್ಲಿ ಅಕ್ರಮವಾಗಿ  ಸಾಗಾಟ ನಡೆಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಲು ಇಬ್ಬರು ಯುವಕರು ಬೈಕಿನಲ್ಲಿ ತೆರಳಿದ್ದರು. ಈ ಸಂದರ್ಭದಲ್ಲಿ ಅಕ್ರಮ ಗೋಸಾಗಾಟಗಾರರು ಯುವಕರ ಮೇಲೆ ವಾಹನ ಹತ್ತಿಸಿ ಅವರನ್ನು ಗಂಭೀರವಾಗಿ ಗಾಯಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದರು. ಘಟನೆಯ ಕುರಿತಾಗಿ ಜಿಲ್ಲೆಯಾದ್ಯಂತ ಹಿಂದೂ ಪರ ಸಂಘಟನೆಗಳು ತೀವ್ರ…

Read More

ಹೊಸನಗರದ ಕೊಡಚಾದ್ರಿ ಕಾಲೇಜಿನಲ್ಲಿ ಬೀಗ ಮುರಿದು ಕಳ್ಳತನ : ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿ |ಕ್ಯಾಡ್ ಫೌಂಡೇಶನ್ ವತಿಯಿಂದ ಕೋಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಉಚಿತ ವಿತರಣೆ|hosangar

ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ರೂಂಗಳ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಸುಮಾರು 15ಕ್ಕೂ ಹೆಚ್ಚು ಕಾಲೇಜಿನ ಕಡತಗಳು, ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಮೊದಲಾದ ದಾಖಲೆಗಳಿರುವ 09 ಗಾಡ್ರೇಜ್ ಬೀರುಗಳನ್ನು ಮುರಿದು ಬೀರುವಿನಲ್ಲಿದ್ದ ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ರೂ. ಗಳಷ್ಟು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ 2:45 ರ ಸುಮಾರಿಗೆ ನಡೆದಿದೆ. ನಿನ್ನೆ ಸಂಜೆಯಿಂದ ಪಟ್ಟಣ ಹಾಗೂ ಸುತ್ತಮುತ್ತ…

Read More

ಕರೋನಾ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆ ಸಾರ್ವಜನಿಕರ ಸಹಕಾರ ಅಗತ್ಯ: ಡಾ ರಾಘವೇಂದ್ರ

ಚಂದ್ರಗುತ್ತಿ :: ಇಲ್ಲಿ ಪ್ರಾಥಮಿಕ ಅರೋಗ್ಯ  ಕೇಂದ್ರದಲ್ಲಿ ವೈದ್ಯರ ದಿನಾಚರಣೆಯನ್ನು  ಕೇಕ್ ಕತ್ತರಿಸುವ ಮೂಲಕ  ಆಚರಿಸಲಾಯಿತು,ಈ ಸಮಯದಲ್ಲಿ ಡಾ ರಾಘವೇಂದ್ರರವರು ಮಾತನಾಡಿ ಕರೋನಾ ನಿಯಂತ್ರಣದಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಮತ್ತು ಆಶಾಕಾರ್ಯಕರ್ತೆಯರು  ಅಂಗನವಾಡಿ ಕಾರ್ಯಕರ್ತೆಯರ  ಪಾತ್ರ ಮಹತ್ತರವಾದದ್ದದ್ದು ,ಕರೋನ  ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಎಲ್ಲರೂ ತಪ್ಪದೇ ಕರೋನಾ ಲಸಿಕೆ ಹಾಕಿಸಿಕೊಳ್ಳಿ ಎಂದು ವಿನಂತಿಸಿದರು. ಸೊರಬ ತಾಲೂಕಿನಲ್ಲಿ ಕರೋನ ತಡೆಗಟ್ಟುವಿಕೆಯಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪನವರು ಮತ್ತು ತಾಲೂಕ್ ವೈದ್ಯಾಧಿಕಾರಿ ಅಕ್ಷತಾ…

Read More

ಶರಾವತಿ ಸಮಸ್ಯೆ ಬಗೆಹರಿಸಲು ಶ್ರಮಿಸದೆ ಪಾದಯಾತ್ರೆ ಹೊರಟಿರುವುದು ಬೇಸರದ ಸಂಗತಿ – ಬಸವರಾಜ್ ಬೊಮ್ಮಾಯಿ|CM

60 ವರ್ಷದ ಶರಾವತಿ ಮುಳುಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ನಾನು ಸಿದ್ದನಿದ್ದೇನೆ. ಆದರೆ ನನಗೆ ಬೇಸರವಾಗುತ್ತಿರುವುದೇನು ಎಂದರೆ ಒಂದೇ ವಿಷಯವನ್ನು ಎಷ್ಟು ವರ್ಷದವರೆಗೆ ಲಾಭ ಪಡೆಯುತ್ತೀರಿ ಎಂದು ಕಾಂಗ್ರೆಸ್ ಪಕ್ಷದ ಹೆಸರು ಉಲ್ಲೇಖಿಸದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪರೋಕ್ಷ ಟಾಂಗ್ ನೀಡಿದರು. ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನೆ ಮಾಡಿ ಕಚೇರಿಯ ಪಕ್ಕದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಮನವಿ ಸ್ವೀಕರಿಸಿ ಮಾತನಾಡಿ ನನಗೆ ತಿಳಿದಂತೆ 24 ಸಾವಿರ ಎಕರೆ ಭೂಮಿಯಲ್ಲಿ ಈ…

Read More

ಕೆಂಚನಾಲ ಗ್ರಾಪಂ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ

ಕೆಂಚನಾಲ ಗ್ರಾಪಂ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತ್ ನ ಕೆಂಚನಾಲ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಉಷಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಂಚನಾಲ ಕ್ಷೇತ್ರದ ಸದಸ್ಯರಾಗಿದ್ದ ಲಕ್ಷ್ಮಮ್ಮ ನಿಧನರಾದ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಉಷಾ ಮಂಜುನಾಥ್ ಒಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಾಯಕ ಕೃಷಿ ನಿರ್ದೇಶಕರಾದ ಸಚಿನ್…

Read More

THIRTHAHALLI| ರಾಮಕೊಂಡಕ್ಕೆ ಭೇಟಿ ನೀಡಿದ ಆರ್ಟ್ ಆಫ಼್ ಲಿವಿಂಗ್ ನ ರವಿಶಂಕರ್ ಗುರೂಜಿ

ರಾಮಕೊಂಡಕ್ಕೆ ಭೇಟಿ ನೀಡಿದ ರವಿಶಂಕರ್ ಗುರೂಜಿ  ತೀರ್ಥಹಳ್ಳಿ ತಾಲೂಕಿನ ಪುರಾಣ ಪ್ರಸಿದ್ಧ ಶ್ರೀ ರಾಮ ಕೊಂಡಕ್ಕೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾದ ರವಿಶಂಕರ್ ಗುರೂಜಿ ಭೇಟಿ ನೀಡಿದರು.  ಕೊಲ್ಲೂರು ಮುಕಾಂಬಿಕೆ ದರ್ಶನ ಮಾಡಿ ವಾಪಾಸ್ ಆಗುವ ವೇಳೆ ತೀರ್ಥಹಳ್ಳಿಗೆ ಭೇಟಿ ನೀಡಿದ ಅವರು ಪಾಪ ಪರಿಹಾರದ ಸಂಕೇತವಾದ ಪ್ರಸಿದ್ಧ ರಾಮ ಕೊಂಡದ ನೀರನ್ನು ಪ್ರೊಕ್ಷಣೆ ಮಾಡಿಕೊಂಡು ಪುನೀತರಾದರು.

Read More

ಕರ್ನಾಟಕ ದಲ್ಲಿ SSLC ಪರೀಕ್ಷೆ :ಸಾಗರದ ವಿದ್ಯಾರ್ಥಿಗಳಿಗೆ ಶಾಸಕ ಹರತಾಳು ಹಾಲಪ್ಪ ರವರಿಂದ ಮಾಸ್ಕ್ ಕೊಟ್ಟು ‌ಶುಭ ಹಾರೈಕೆ

ಸಾಗರ : ಎಸ್ಎಸ್ಎಲ್ಸಿ‌ ಪರೀಕ್ಷೆ ಆರಂಭಗೊಂಡಿದ್ದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ  ಶುಭ ಹಾರೈಸಿದ ಶಾಸಕರಾದ ಹರತಾಳು ಹಾಲಪ್ಪ ರವರು ಸಾಗರದ ಸರ್ಕಾರಿ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಿಗೆ ಮಾಸ್ಕ್ ನೀಡಿ ಸ್ವಾಗತಿಸಿ ಗಮನ ಸೆಳೆದಿದ್ದಾರೆ. ಕೋವಿಡ್ ಬಗ್ಗೆ ಪರೀಕ್ಷಾರ್ಥಿಗಳು‌ ಅಂಜಿಕೊಳ್ಳುವ ಅಗತ್ಯವಿಲ್ಲ. ವಿದ್ಯಾರ್ಥಿಗಳು ತಮ್ಮ ಆರೋಗ್ಯ ದಲ್ಲಿ ಏರುಪೇರು ಇದ್ದರೆ ಕೂಡಲೆ ಶಾಲೆ ಮುಖ್ಯಸ್ಥರ ಗಮನಕ್ಕೆ ತನ್ನಿ ನಾವು ಸೂಕ್ತ ರೀತಿಯಲ್ಲಿ ವ್ಯವಸ್ಥೆ ಮಾಡುತ್ತೇವೆ ಸಾಗರ ಶಾಸಕ ಹರತಾಳು ಹಾಲಪ್ಪ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ. ವಿದ್ಯಾರ್ಥಿಗಳಿಗೆ ಸ್ಯಾನಿಟೈಜರ್ ನೀಡಿ,…

Read More