ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆ ರವರ ಮನೆಗೆ ದಿಡೀರ್ ಭೇಟಿ ನೀಡಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್

ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ರವರು ಇಂದು ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾದ ಆದರ್ಶ ಹುಂಚದಕಟ್ಟೆಯವರ ಮನೆಗೆ ಭೇಟಿ ನೀಡಿದ್ದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಯಲ್ಲಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆರವರ ಮನೆಗೆ ದಿಡೀರ್ ಭೇಟಿ ನೀಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿದ್ದ ರಾಹುಲ್ ಗಾಂಧಿಯವರ ಮೇಲಿನ ಈಡಿ ವಿಚಾರಣೆ  ಅಗ್ನಿಪಥ್ ಯೋಜನೆಗಳನ್ನು ವಿರೋಧಿಸಿ ಪ್ರತಿಭಟನೆಗಳಲ್ಲಿ ತೊಡಗಿಸಿಕೊಂಡಿದ್ದ ಬಿ ವಿ ಶ್ರೀನಿವಾಸ್ ರವರ ದಿಡೀರ್ ಭೇಟಿ ಕುತೂಹಲ ಕೆರಳಿಸಿದೆ….

Read More

ಕಾರ್ಮಿಕ ಸಾವನ್ನಪ್ಪಿದ ಸುದ್ದಿ ಮನೆಯವರಿಗೆ ತಿಳಿಸಲು ಹೋದ ಮಾಲೀಕನೂ ಹೃದಯಾಘಾತದಿಂದ ಸಾವು :

ತೀರ್ಥಹಳ್ಳಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಇದ್ದಕ್ಕಿದ್ದ ಹಾಗೆ ಹೃದಯಾಘಾತದಿಂದ ಸಾವನ್ನಪ್ಪಿದ. ಕಾರ್ಮಿಕ ಸಾವನ್ನಪ್ಪಿದ್ದ ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ ತೋಟದ ಮಾಲೀಕ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ ಮನಕಲುಕುವ ಘಟನೆ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಆರಗ ಗೇಟ್ ಸಮೀಪ ನಡೆದಿದೆ. ಕೂಲಿ ಕಾರ್ಮಿಕ ಬರ್ಮಪ್ಪ (55) ಎಂಬಾತ ಎಂದಿನಂತೆ ನಿವೃತ್ತ ಶಿಕ್ಷಕ ದುಗ್ಗಪ್ಪಗೌಡ(75) ಎಂಬುವರ ತೋಟದಲ್ಲಿ ಕೆಲಸ ಮಾಡಲು ಬಂದಿದ್ದ.ಅನೇಕ ವರ್ಷಗಳಿಂದ ಇವರ ಮನೆಯಲ್ಲಿ ಕೆಲಸ ಕೂಡ ಮಾಡುತ್ತ ಇದ್ದ ಮದ್ಯಾಹ್ನದವರೆಗೆ ಲವಲವಿಕೆಯಿಂದ…

Read More

ರಿಪ್ಪನ್‌ಪೇಟೆ – ಕ್ಯಾಂಟರ್ ಲಾರಿ ಮತ್ತು ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|accident

ಕ್ಯಾಂಟರ್ ಲಾರಿ ಹಾಗೂ ಟೊಯೋಟಾ ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಸೂಡೂರು ಗೇಟ್ ಸಮೀಪದಲ್ಲಿ ನಡೆದಿದೆ. ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಟೊಯೋಟಾ ಇನ್ನೋವಾ ಕಾರು ಹಾಗೂ ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ ಕ್ಯಾಂಟರ್ ಲಾರಿ ನಡುವೆ ಸೂಡೂರು ಗೇಟ್ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಘಟನೆಯಲ್ಲಿ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಭೀಕರ ಲಾರಿ ಅಪಘಾತ – ಮೂವರು ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ|Accident

ಕಾಲೇಜಿಗೆ ನಡೆದುಕೊಂಡು ಹೋಗುತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಸಾಗರ ಟೌನ್ ನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಮೀಪದ ಸಣ್ಣಮನೆ ಸೇತುವೆ ಬಳಿಯಲ್ಲಿ ಭೀಕರ ಆಪಘಾತವೊಂದು ಸಂಭವಿಸಿದೆ. ಜಲ್ಲಿ ತುಂಬಿದ್ದ ಲಾರಿಯೊಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.   ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ ಎನ್ನಲಾಗುತ್ತಿಗೆ, ಹಿಂದಿನಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದ್ದಾನೆ. ಆಗಷ್ಟೆ ಕಾಲೇಜಿಗೆ ಹೊರಟಿದ್ದ ಹಾಸ್ಟೆಲ್​ವೊಂದರ ವಿದ್ಯಾರ್ಥಿನಿಯರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ಧಾರೆ.  ಮೂವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ,…

Read More

ಅಮೃತ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ರಾಜು ರಾಜೀನಾಮೆ….. ವಿನೋದ ಯೋಗೆಂದ್ರಪ್ಪನವರಿಗೆ ಒಲಿಯಲಿದೆಯ ಅದೃಷ್ಟ…???.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಅಮೃತ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ರಾಜು ರವರು ಇಂದು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ. ಇಂದು ಸಾಗರ ಉಪವಿಭಾಗಧಿಕಾರಿಗಳ ಕಚೇರಿ ಯಲ್ಲಿ ಉಪವಿಭಾಗಾಧಿಕಾರಿ ನಾಗರಾಜ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ . ಮಂಜುಳಾ ರಾಜುರವರು ಹದಿನೇಳು ತಿಂಗಳ ಕಾರ್ಯಭಾರದ ನಂತರ ಇಂದು ರಾಜಿನಾಮೆ ನೀಡಿದ್ದಾರೆ. ಹದಿನೈದು ತಿಂಗಳ ಅವಧಿಗೆ ಮಾತಾಗಿತ್ತು ಎಂದು ಒಂದು ಬಣ, ಇಲ್ಲಾ ಇಲ್ಲಾ ಪೂರ್ತಿ ಮೂವತ್ತು ತಿಂಗಳಿಗೂ ಇವರೇ ಅಧ್ಯಕ್ಷರು ಎಂದು ಇನ್ನೊಂದು ಬಣದ…

Read More

ಬಿದರಹಳ್ಳಿಯಲ್ಲಿ 824 ವರ್ಷ ಹಳೆಯ ಅಪ್ರಕಟಿತ ವೀರಗಲ್ಲು ಪತ್ತೆ

ಬಿದರಹಳ್ಳಿಯಲ್ಲಿ 824 ವರ್ಷ ಹಳೆಯ ಅಪ್ರಕಟಿತ ವೀರಗಲ್ಲು ಪತ್ತೆ ಗೂಳಿ-ಹಸುವಿನ ಮದುವೆ ಸಂಪ್ರದಾಯದ ಅಪರೂಪದ ಉಲ್ಲೇಖ; ಇತಿಹಾಸಾಸಕ್ತರ ಗಮನ ಸೆಳೆದ ಶಾಸನ An 824-year-old unrecorded hero stone discovered at Bidarahalli near Ripponpet reveals rare inscriptions about medieval warfare, donations, and the unique bull-cow marriage ritual practiced for unmarried warriors ರಿಪ್ಪನ್‌ಪೇಟೆ: ಸಮೀಪದ ಬಿದರಹಳ್ಳಿಯಲ್ಲಿ ಪತ್ತೆಯಾದ ಅಪ್ರಕಟಿತ ವೀರಗಲ್ಲು ಇದೀಗ ಇತಿಹಾಸಾಸಕ್ತರು ಹಾಗೂ ಶಾಸನ ಸಂಶೋಧಕರ ಗಮನ…

Read More

ಬಾಗಿಲು ಮುರಿದು ಮನೆಗೆ ನುಗ್ಗಿದ ವಾಮಾಚಾರಿಗಳು – ಅಡಿಕೆ ಎಲೆ ಮತ್ತು 11 ರೂಪಾಯಿ ಇಟ್ಟು ಮಾಡಿದ್ದೇನು..!??

ಬಾಗಿಲು ಮುರಿದು ಮನೆಗೆ ನುಗ್ಗಿದ ವಾಮಾಚಾರಿಗಳು – ಅಡಿಕೆ ಎಲೆ ಮತ್ತು 11 ರೂಪಾಯಿ ಇಟ್ಟು ಮಾಡಿದ್ದೇನು..!?? ಶಿವಮೊಗ್ಗ: ನಗರದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಚ್ಚರಿ ಹುಟ್ಟಿಸುವ ಘಟನೆ ನಡೆದಿದ್ದು, ಮನೆಯ ಬಾಗಿಲು ಮುರಿದು ಅತಿಕ್ರಮ ಪ್ರವೇಶ ಮಾಡಿ ವಾಮಾಚಾರದ ಕೃತ್ಯ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆ ಅಕ್ಟೋಬರ್ 31, 2025 ರಂದು ಮಧ್ಯಾಹ್ನ 1ರಿಂದ 2ರ ನಡುವಿನ ಸಮಯದಲ್ಲಿ ನಡೆದಿದೆ. ದೂರುದಾರ ಮಹಿಳೆಯು ಮನೆಯಲ್ಲಿ ಇರದ ಸಮಯದಲ್ಲಿ, ಕೆಲವರು ಬಾಗಿಲು ಮುರಿದು…

Read More

ಹಾಸ್ಟೆಲ್ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರಿಂದ ದಿಡೀರ್ ಪ್ರತಿಭಟನೆ :

ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಯಲದಲ್ಲಿ ಮೂಲಭೂತ ಸೌಕರ್ಯದ ಕೊರತೆಯನ್ನ ವಿರೋಧಿಸಿ ಹಾಗೂ ಮೊನ್ನೆ ವಿದ್ಯಾರ್ಥಿನಿಯರಿಗೆ ಫುಡ್ ಪಾಯಸನ್ ಆಗಿರುವುದಕ್ಕೆ ಇಲ್ಲಿನ ಅವ್ಯವಸ್ಥೆಯೇ ಕಾರಣವೆಂದು ಆಗ್ರಹಿಸಿ ನೂರಾರು ವಿದ್ಯಾರ್ಥಿನಿಯರು ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಪ್ರತಿಭಟಜನೆ ನಡೆಸಿದರು. ಶೌಚಾಲಯ ಸ್ವಚ್ಚವಿಲ್ಲದೇ ಇರುವುದು, ಒಂದು ಕೊಠಡಿಯಲ್ಲಿ 11 ಜನ ವಿದ್ಯಾರ್ಥಿನಿಯರಿಗೆ ಉಳಿದುಕೊಳ್ಳಲು ಅವಕಾಶ ನೀಡಿರುವುದು. ಅಡುಗೆ ಮನೆಯಲ್ಲಿ ಸ್ವಚ್ಛತೆ ಇಲ್ಲದಿರುವುದು ಈ ದಿಡೀರ್‌ಪ್ರತಿಭಟನೆಗೆ ಕಾರಣವೆಂದು ಹೇಳಲಾಗುತ್ತಿದೆ. ಪ್ರತಿಭಟನೆಯಲ್ಲಿ ಸಹ್ಯಾದ್ರಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿ ಅವ್ಯವಸ್ಥೆಯನ್ನ…

Read More

ಆನಂದಪುರದಲ್ಲಿ ರಾಯಲ್ ಕ್ಲಬ್ ನಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಅದ್ದೂರಿ ಸನ್ಮಾನ :

ಆನಂದಪುರ : ಅತ್ಯುನ್ನತ ಸಾಧನೆ ಗೈದು ಜನ ಸಾಮಾನ್ಯರಲ್ಲಿ ನೆನಪುಳಿಯುವಂತೆ  ಸಾಧನೆಗೈದ ಸನ್ಮಾನಿತರಿಗೆ ಗೌರವಿಸಲಾಯಿತು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ರಾಯಲ್ ಕ್ಲಬ್ ವತಿಯಿಂದ ನಾಡಿನಾದ್ಯಂತ ಹೆಸರನ್ನು ಗಳಿಸಿ ನಾಡಿಗೆ ಕೀರ್ತಿ ತಂದ ಹಲವು ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ರಾಯಲ್ ಕ್ಲಬ್ ಕಳೆದ 2ವರ್ಷಗಳಿಂದ ಆನಂದಪುರದಲ್ಲಿ ಹಲವು ರೀತಿಯ ಸಾಮಾಜಿಕ ಚಟುವಟಿಕೆಗಳಲ್ಲಿ ಹಾಗೂ ನೊಂದವರಿಗೆ ನೆರವು ನೀಡುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತಿದ್ದು ಸಮಾಜಮುಖಿ ಕೆಲಸ ನಿರ್ವಹಿಸುವತ್ತ ಗಮನ ಹರಿಸಿದೆ.  ರಾಯಲ್ ಎನ್ನುವ ಶಬ್ದದಲ್ಲೇ ಸರ್ವ ಧರ್ಮವನ್ನು…

Read More

mETA

ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ ರಿಪ್ಪನ್‌ಪೇಟೆ – ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಗ್ರಾಮಸ್ಥರ ಸಹಕಾರದೊಂದಿಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದೆ. ಪೊಲೀಸರು ಬಂಧಿಸಿದವರನ್ನು ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ಹಾಗೂ ತಾಲ್ಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ…

Read More