ತಂದೆಯ ಸಣ್ಣ ನಿರ್ಲಕ್ಷ್ಯಕ್ಕೆ ಬಲಿಯಾದ ಒಂದೂವರೆ ವರ್ಷದ ಮಗು – ಮಲೆನಾಡಿನಲ್ಲೊಂದು ಹೃದಯವಿದ್ರಾವಕ ಘಟನೆ|accident
ಅಪ್ಪನನ್ನು ಹಿಂಬಾಲಿಸಲು ಹೋಗಿ ಮಗುವೊಂದು ಟ್ರ್ಯಾಕ್ಟರ್ಗೆ ಸಿಲುಕಿ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಹೆದ್ದೂರಿನಲ್ಲಿ ಬುಧವಾರ ನಡೆದಿದೆ. ಹೆದ್ದೂರು ಗ್ರಾಮದ ಆದರ್ಶ್ ಎಂಬುವವರ ಒಂದೂವರೆ ವರ್ಷದ ಮಗು ದುರ್ಮರಣ ಹೊಂದಿದೆ. ಆದರ್ಶ್ ಅವರು ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಆಟವಾಡುತ್ತಿದ್ದರು. ನಂತರ ಕೆಲಸದ ನಿಮಿತ್ತ ಮಗುವನ್ನು ಮನೆಯೊಳಗೆ ಬಿಟ್ಟಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಅನ್ನು ತೆಗೆಯಲು ಹೋಗಿದ್ದಾರೆ. ಈ ವೇಳೆ ಒಂದೂವರೆ ವರ್ಷದ ಮಗು ಅಪ್ಪನನ್ನೇ ಹಿಂಬಾಲಿಸಿಕೊಂಡು ಬಂದಿದೆ. ಆದರೆ, ಇದ್ಯಾವುದರ ಅರಿವು ಇರದ…