Headlines

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ – ಪತಿ‌, ಅತ್ತೆ ಮತ್ತು ನಾದಿನಿಗೆ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್|Crime News

ಶಿವಮೊಗ್ಗ : ಗೃಹಿಣಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಗಂಡ, ಅತ್ತೆ, ನಾದಿನಿಗೆ ಕಠಿಣ ಜೈಲು ಶಿಕ್ಷೆ, ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ ಇನ್ನು ಆರು ತಿಂಗಳು ಜೈಲು ಶಿಕ್ಷೆ ಮುಂದುರಿಯಲಿದೆ ಆದೇಶಿಸಿದೆ. ಶಿವಮೊಗ್ಗ ನಗರದ ಗೃಹಿಣಿಯೊಬ್ಬರು 2020ರ ಮೇ 18ರಂದು ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಸಂಬಂಧ ಗೃಹಿಣಿಯ ತಾಯಿ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಗಂಡನ ಮನೆಯಲ್ಲಿ ವರದಕ್ಷಿಣೆ ತರುವಂತೆ, ಬೈಕ್ ಕೊಡಿಸುವಂತೆ ಕಿರುಕುಳ…

Read More

ರಿಪ್ಪನ್‌ಪೇಟೆ : ಮೂವರು ಹೆಣ್ಣು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿಗಳು|missing

ಮೂರು ಹೆಣ್ಣು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿಗಳು ರಿಪ್ಪನ್ ಪೇಟೆ : ಚಿಕ್ಕವಯಸ್ಸಿನ ಮೂರು ಹೆಣ್ಣು ಮಕ್ಕಳನ್ನು ಬಿಟ್ಟು ದಂಪತಿಗಳು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ ನಡೆದಿದೆ. ಮಾದಾಪುರ ಗ್ರಾಮದ ಅನುಷಾ (45) ಹಾಗೂ ವಿಜಯ್ (50) ಮೂರು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿರುವ ದಂಪತಿಗಳು. ದಿನಾಂಕ 25-3-2023 ರಂದು ತೆರಳಿದ್ದ ಅನುಷಾ ಮತ್ತು ವಿಜಯ್ ಮನೆಗೆ ಮರಳಿ ಬರಲಿಲ್ಲ.ಸಂಬಂಧಿಕರು ಅಥವಾ ಪರಿಚಯಸ್ಥರ ಮನೆಗೆ ಹೋಗಿರಬಹುದು ಎಂದು…

Read More

ಕಾಲೇಜಿನ ಗ್ರಂಥಾಲಯದಲ್ಲಿ ಪ್ರತ್ಯಕ್ಷವಾದ ಹಾವು – ಭಯ ಮೂಡಿಸಿದ್ದ ಬರೋಬ್ಬರಿ 8 ಅಡಿ ಉದ್ದದ ಹಾವು

ಶಿವಮೊಗ್ಗ ನಗರದ ಸಹ್ಯಾದ್ರಿ ಸೈನ್ಸ್ ಕಾಲೇಜು ಆವರಣದಲ್ಲಿರುವ ಗ್ರಂಥಾಲಯದಲ್ಲಿಯೇ ಹಾವೊಂದು ಕಾಣಿಸಿಕೊಂಡಿತ್ತು.  ಮೊನ್ನೆ ಕಾಲೇಜಿನ ಗ್ರಂಥಾಲಯದಲ್ಲಿ ಸುಮಾರು 8 ಅಡಿ ಉದ್ದದ ಹಾವೊಂದು ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಪುಸ್ತಕಗಳ ರಾಶಿಯ ಅಡಿಯಲ್ಲಿ ಸೇರಿಕೊಂಡಿದ್ದ ಹಾವು, ಆಗಾಗ ಸದ್ದು ಮಾಡುತ್ತಿತ್ತು. ಮೊದಲೇ ನಿಶ್ಚಬ್ಧವಾಗಿದ್ದ ಲೈಬ್ರರಿಯಲ್ಲಿ ಹಾವಿನ ಸದ್ದು ತುಸು ಜೋರಾಗಿಯೇ ಕೇಳಿಬರುತ್ತಿತ್ತು.  ಇನ್ನೂ ಏನು ಶಬ್ಧವಾಗುತ್ತಿದೆ ಎಂದು ನೋಡಿದ ಸಿಬ್ಬಂದಿ ಹಾವೊಂದು ಗೃಂಥಾಲಯವನ್ನು ಸೇರಿಕೊಂಡಿರುವುದು ಗೊತ್ತಾಗಿದೆ. ತಕ್ಷಣ ಹಾವನ್ನು ಸುರಕ್ಷಿತವಾಗಿ ಹಿಡಿಯಬಲ್ಲ ಸ್ನೇಕ್​ ಜಯಂತ್ ಬಾಬುರನ್ನ ಸಂಪರ್ಕಿಸಿದ್ದಾರೆ.  ಕರೆ…

Read More

ಅಕ್ರಮ ಮರಳು ಸಾಗಿಸುತಿದ್ದ ಲಾರಿ ವಶ – ಚಾಲಕ ಹಾಗೂ ಮಾಲೀಕನ ವಿರುದ್ದ ಪ್ರಕರಣ ದಾಖಲು|illegal-sand-mining

ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿಯನ್ನು ವಶಪಡಿಸಿಕೊಂಡು ಚಾಲಕ ಮತ್ತು ಮಾಲೀಕರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಹೊಸನಗರದ ಮುಡುಬ ಸೇತುವೆಯಿಂದ ಮರಳನ್ನು ಎತ್ತಿ ಕೆಎ-15 -7188 ಕ್ರಮ ಸಂಖ್ಯೆಯ ಟ್ರಿಪ್ಪರ್ ಲಾರಿಯಲ್ಲಿ 80 ಅಡಿ ಮರಳು ತುಂಬಿಸಿಕೊಂಡು ಬರುವಾಗ ಸಾಗರದ ಬಿಹೆಚ್ ರಸ್ತೆಯಲ್ಲಿರುವ ಆಚಾರ್ ಸರ್ಕಲ್ ಬಳಿ ದಾರಿಯನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಮರಳು ಸಾಗಾಣಿಕೆಗೆ ಬೇಕಾದ ಪರವಾನಗಿ ಇಲ್ಲದ ಕಾರಣ ಚಾಲಕ…

Read More

ನೀತಿಸಂಹಿತೆ ಉಲ್ಲಂಘನೆ – ಸಾಗರ ಬ್ಲಾಕ್ ಕಾಂಗ್ರೆಸ್ ಮುಖಂಡನ ಮೇಲೆ ಪ್ರಕರಣ ದಾಖಲು|election-code-of-coduct

ಶಿವಮೊಗ್ಗ ಜಿಲ್ಲೆ ಸಾಗರ ಬ್ಲಾಕ್​ ಕಾಂಗ್ರೆಸ್​ನ ಮುಖಂಡರ ವಿರುದ್ಧ ಚುನಾವಣಾ ನೀತಿ ಸಂಹಿತೆ ಅಡಿಯಲ್ಲಿ ಕೇಸ್ ದಾಖಲಾಗಿದೆ.  ಕಳೆದ ಮಾರ್ಚ್​ 30 ರಂದು  ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್​ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಾಗಿತ್ತು. ಈ ಸಂಬಂಧ  ಬ್ಲಾಕ್ ಕಾಂಗ್ರೆಸ್‌ ಸಮಿತಿ ಸಾಗರದ ಪ್ರಧಾನ ಕಾರ್ಯದರ್ಶಿ ಮಹಾಬಲೇಶ ಕೌತಿ ರವರು ಸಾಗರ ಉಪ ವಿಭಾಗಾಧಿಕಾರಿ ಬಳಿ ಅನುಮತಿ ಕೇಳಿದ್ದರು.  ಈ ಸಂಬಂಧ ಚುನಾವಣಾ ಅಧಿಕಾರಿಯಾದ ಎಸಿಯವರು  ಷರತ್ತು ಬದ್ಧ ಅನುಮತಿಯನ್ನು…

Read More

ಹೊಸನಗರ ತಾಲೂಕಿನ ಪಶು ಆಸ್ಪತ್ರೆಗಳು ವೈದ್ಯರು, ಸಿಬ್ಬಂದಿಗಳಿಲ್ಲದೇ ಭಣಗುಟ್ಟುತ್ತಿವೆ – 22 ಆಸ್ಪತ್ರೆಗೆ ಇಬ್ಬರೇ ವೈದ್ಯರು

ರಿಪ್ಪನ್‌ಪೇಟೆ : ಮಲೆನಾಡಿನ ಹೆಬ್ಬಾಗಿಲು ಎಂದೇ ಖ್ಯಾತಿಗಳಿಸಿರುವ ಶಿವಮೊಗ್ಗ ಜಿಲ್ಲೆಯ ಮಧ್ಯ ಮಲೆನಾಡಿನ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ 22 ಪಶು ಅಸ್ಪತ್ರೆಗೆ 2 ಜನ ವೈದ್ಯಾಧಿಕಾರಿಗಳು ಬಿಟ್ಟರೆ ಇನ್ನೂ ಯಾರು ಇರುವುದಿಲ್ಲ ರಾಜಕಾರಣಿಗಳ ಇಚ್ಚಾ ಶಕ್ತಿಯ ಕೊರತೆಯಿಂದಾಗಿ  ತಾಲೂಕಿನಾದ್ಯಂತ ಭಣಗುಟ್ಟುತ್ತಿವೆ ಪಶ ಆಸ್ಪತ್ರೆಗಳು. ರಾಜ್ಯ ಬಿಜೆಪಿ ಸರ್ಕಾರ ಹೈನುಗಾರಿಕೆಗೆ ಹೆಚ್ಚಿನ ಅಧ್ಯತೆ ನೀಡಲಾಗಿದೆ ಎಂದು ಹೇಳಿಕೊಳ್ಳುತ್ತಿದ್ದು ಹೊಸನಗರ ತಾಲ್ಲೂಕ್ ಮಾತ್ರ ಹೈನು ಉದ್ಯಮ ಸೇರಿದಂತೆ ಗೋವುಗಳ ಲಾಲನೆ ಪಾಲನೆ ರಾಜಕೀಯ ಮುಖಂಡರ ಇಚ್ಚಾಶಕ್ತಿಯ ಕೊರತೆಯಿಂದಾಗಿ ಹಿಂದುಳಿಯುವಂತಾಗಿದೆ. ರಿಪ್ಪನ್‌ಪೇಟೆಯ…

Read More

ತೀರ್ಥಹಳ್ಳಿ : ಆತಂಕಕ್ಕೆ ಕಾರಣವಾಗಿದ್ದ ಚಿರತೆಯ ಮೃತದೇಹ ಮಲ್ಲೇಸರ ಅರಣ್ಯ ಪ್ರದೇಶದಲ್ಲಿ ಪತ್ತೆ|leopard

ತೀರ್ಥಹಳ್ಳಿ- ಮಲ್ಲೇಸರ ಸಿಂದೋಡಿ ಬಳಿಯ ಅರಣ್ಯ ಸಮೀಪದಲ್ಲಿ ಚಿರತೆಯ ಮೃತದೇಹ ಪತ್ತೆ !! ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಲ್ಲೇಸರ ಗ್ರಾಮದಲ್ಲಿ ಕಳೆದ ಕೆಲ ತಿಂಗಳಿನಿಂದ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯ ಮೃತದೇಹ ಪತ್ತೆಯಾಗಿದೆ. ಹಲವಾರು ತಿಂಗಳಿನಿಂದ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯನ್ನು ಸೆರೆಹಿಡಿಯಲು ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿಗಳು ಗ್ರಾಮಸ್ಥರ ನೆರವಿನೊಂದಿಗೆ ಬೋನನ್ನು ಸಿದ್ದಪಡಿಸಿ ಇಟ್ಟಿದ್ದರು. ಆದರೂ ಚಿರತೆಯ ಚಲವಲನದ ಕುರಿತು ಯಾವುದೇ ಮಾಹಿತಿ ಸಿಕ್ಕಿರಲಿಲ್ಲ ಆದರೆ ಇಂದು ಚಿರತೆ ಸೆರೆಹಿಡಿಯಲು ಇಟ್ಟಿದ್ದ ಬೋನಿನ ಸಮೀಪದ ಅರಣ್ಯದಲ್ಲಿ ಚಿರತೆಯ…

Read More

ಶಿವಮೊಗ್ಗ – ಚೆಕ್ ಪೋಸ್ಟ್ ನಲ್ಲಿ ಪೊಲೀಸರನ್ನು ಕಂಡೊಡನೆ ಕಾರು ಬಿಟ್ಟು ಇಬ್ಬರು ಪರಾರಿ|ಯಾಕೆ ಗೊತ್ತಾ..?? ಈ ಸುದ್ದಿ ನೋಡಿ

ಶಿವಮೊಗ್ಗ : ಚೆಕ್ ಪೋಸ್ಟ್ ನಲ್ಲಿ ಪೊಲೀಸರನ್ನು ಕಂಡೊಡನೆ ಕಾರು ಬಿಟ್ಟು ಇಬ್ಬರು ಪರಾರಿಯಾಗಿದ್ದಾರೆ,ಕಾರು ತಪಾಸಣೆ ನಡೆಸಿದಾಗ ಗೋ ಕಳ್ಳಸಾಗಣೆ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲಾ ಪ್ರಮುಖ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸಲಾಗುತಿದ್ದು,ಈ ವೇಳೆ ಕಾರಿನಲ್ಲಿ ಗೋವುಗಳ ಕಳ್ಳಸಾಗಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಕಾರಿನಲ್ಲಿ ಎರಡು ಎತ್ತುಗಳಿದ್ದು ಒಂದು ಸಾವನ್ನಪ್ಪಿದೆ.ಇನ್ನೊಂದು ಎತ್ತನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಸೋಮಿನಕೊಪ್ಪದ ಚೆಕ್‍ಪೋಸ್ಟ್‌ನಲ್ಲಿ ರಾತ್ರಿ 1 ಗಂಟೆ ಹೊತ್ತಿಗೆ ವಾಹನ ತಪಾಸಣೆ ವೇಳೆ…

Read More

ಯಡಿಯೂರಪ್ಪ ನೇತೃತ್ವದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬರುತ್ತೇವೆ – ಸಿಎಂ ಬೊಮ್ಮಾಯಿ|CM

ತೀರ್ಥಹಳ್ಳಿ : ದೇಶದ ಇತಿಹಾಸದಲ್ಲಿ ಕಡಿಮೆ ಅವಧಿಯಲ್ಲಿ ವಿಶ್ವದ ಅತೀ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಬಿಜೆಪಿ ತತ್ವ-ಸಿದ್ದಾಂತದಡಿ ಹುಟ್ಟಿ, ಅದನ್ನು ಬದಲಾಯಿಸದೇ ಕೆಲಸ ಮಾಡುತ್ತಿದೆ. ವಿಶ್ವದಲ್ಲಿ ದೊಡ್ಡ ಪಕ್ಷವಾಗಬೇಕಾದರೇ ಅಷ್ಟೇ ಜನರ ವಿಶ್ವಾಸ ಪಕ್ಷ ಗಳಿಸಬೇಕು. ವಿಶ್ವವೇ ಇವತ್ತು ಭಾರತದತ್ತ ನೋಡುವ ನಾಯಕತ್ವ ಬಿಜೆಪಿ ಹಾಗೂ ದೇಶಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ತಾಲೂಕಿನ ತೂದೂರು ಗ್ರಾಮದಲ್ಲಿ ಗುರುವಾರ ಮಂಡಗದ್ದೆ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ನಾಯಕತ್ವದ ಜೊತೆಗೆ…

Read More

ಹಂದಿ ಅಣ್ಣಿ‌ ಹತ್ಯೆ ಆರೋಪಿಗಳ ಮೇಲಿನ ದಾಳಿ ಪ್ರಕರಣ – ತಮಿಳ್ ರಮೇಶ್ ಮತ್ತು ದೀಪು ಬೆಂಗಳೂರಲ್ಲಿ ಸೆರೆಂಡರ್|surrender

ಚೀಲೂರಿನ ಗೋವಿನ ಕೋವಿಯಲ್ಲಿ ನಡೆದಿದ್ದ ಡಬ್ಬಲ್​ ಅಟ್ಯಾಕ್ ಪ್ರಕರಣ ಸಂಬಂಧ  ದಾವಣಗೆರೆ ಪೊಲೀಸರು ಆರೋಪಿಗಳು ತನಿಖೆ ಇನ್ನೂ ಸಹ ಮುಂದುವರಿಸಿದ್ದಾರೆ. ಈ ಮಧ್ಯೆ ಆಂಧ್ರದಲ್ಲಿ ಆರೋಪಿಗಳು ಸೆರೆಂಡರ್ ಆಗಿದ್ದರು ಎಂಬ ಫೇಕ್​ ನ್ಯೂಸ್​ನ್ನ ಕೂಡ ಉದ್ದೇಶ ಪೂರ್ವಕ ಕಾಣದ ಕೈಯ್ಯೊಂದು ಹರಿಬಿಟ್ಟಿತ್ತು. ಆದರೆ ಇದೇ ಶರಣಾಗತಿ ಸುದ್ದಿ ಇದೀಗ ನಿಜವಾಗಿದೆ. ಕಳೆದ ಮಾರ್ಚ್ 15 ರಂದು ಹಂದಿ ಅಣ್ಣಿ ಕೊಲೆಯ ಆರೋಪಿಗಳಾದ ಆಂಜನೇಯ ಮತ್ತು ಮಧು ಮೇಲೆ ತಮಿಳ್ ರಮೇಶ್​ ನ ಗ್ಯಾಂಗ್ ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು….

Read More