ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ,ಆರ್ ಎಂಎಂ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ನೂಕುನುಗ್ಗಲು – ಕಮಲ ತೊರೆದು ಕೈ ಹಿಡಿದ 50ಕ್ಕೂ ಹೆಚ್ಚು ಕಾರ್ಯಕರ್ತರು
ತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥ್ ಗೌಡ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ಕ್ಷೇತ್ರದಾದ್ಯಂತ ನೂಕುನುಗ್ಗಲು ಪ್ರಾರಂಭವಾಗಿದೆ.ಇಂದು ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಅಧಿಕೃತ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಕಿಮ್ಮನೆ ರತ್ನಾಕರ್ ಅವರ ನಾಯಕತ್ವವನ್ನು ಮೆಚ್ಚಿ ಪಟ್ಟಣದ ಯಡೇಹಳ್ಳಿಕೆರೆ ಬಾಲರಾಜ್ ಮತ್ತು ಅವರ 50 ಕ್ಕೂ ಹೆಚ್ಚು ಸ್ನೇಹಿತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಮುಖ್ಯ…