ಎಂಎಲ್ ಸಿ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ..!!! ಈಶ್ವರಪ್ಪ ಪುತ್ರ ಕಾಂತೇಶ್ ಗೆ ತಮ್ಮ ವಿರುದ್ದ ಸ್ಪರ್ಧಿಸಲು ಪಂಥಾಹ್ವಾನ|ayanur manjunath
ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣಕ್ಕೆ ಇಳಿಯಬೇಕು ಎಂದು ನಿರ್ಧಾರ ಮಾಡಿದ್ದೇನೆ. ಶೀಘ್ರದಲ್ಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಚುನಾವಣಾ ಆಖಾಡಕ್ಕೆ ಇಳಿಯುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸಾರ್ವಜನಿಕ ವೇದಿಕೆಯಲ್ಲಿ ಕೂಡ ನಿಲುವು ಪ್ರಕಟಿಸಿದ್ದೇನೆ. ಪಕ್ಷದ ವೇದಿಕೆಯಲ್ಲಿ ಕೂಡ ನನ್ನ ವಿನಂತಿಯನ್ನು ಸಲ್ಲಿಸಿದ್ದೇನೆ. ಆದರೆ, ವಿನಂತಿಗೆ ಪೂರಕವಾಗಿ ನನಗೆ ಪಕ್ಷದಿಂದ ಟಿಕೆಟ್ ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಆದರೆ ಕೆಲವರ ಮಕ್ಕಳ…