ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ವರ್ಷದ ಮೊದಲ ವರ್ಷಧಾರೆ ::

ರಿಪ್ಪನ್ ಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇಂದು ಸಂಜೆ ಈ ವರ್ಷದ ಮೊದಲ ವರ್ಷಧಾರೆಯಿಂದ ಪ್ರಾಣಿಗಳ ಸಂಕುಲಕ್ಕೆ ಮತ್ತು ನಾಗರಿಕರಿಗೆ ಸಂತಸವಾಗಿದೆ. ಕಳೆದ 5 ತಿಂಗಳಿಂದ ಮಳೆಯಿಲ್ಲದೆ ಬೇಸತ್ತು ಹೋಗಿದ್ದ ಪ್ರಾಣಿ ಸಂಕುಲಕ್ಕೆ. ಗಿಡಮರ ಮರಗಳಿಗೆ. ಸಸ್ಯ ಜೀವಿಗಳಿಗೆ  ಹಾಗೂ ನಾಗರೀಕರಿಗೆ ಇಂದು ಸಂಜೆ ಸುರಿದ ಮಳೆಯಿಂದ  ಸಂತಸದ ಜೊತೆಗೆ ರಣ ತಾಪಕ್ಕೆ ಬೇಸತ್ತು ಹೋಗಿದ್ದ ಮನಗಳಿಗೆ ಹಾಗೂ ಜೀವಸಂಕುಲಕ್ಕೆ ತಂಪೇರದಂತಾಗಿದೆ  ಕಳೆದ 5 ತಿಂಗಳಿನಿಂದ ರಿಪ್ಪನ್ ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯ ಅಭಾವದಿಂದ…

Read More

ಹುಲಿಕಲ್ ಘಾಟಿಯಲ್ಲಿ ದುರ್ಗಾಂಬ ಬಸ್ ಸಂಪೂರ್ಣ ಬೆಂಕಿಗಾಹುತಿ – 36 ಪ್ರಯಾಣಿಕರು ಪಾರು

A Durgaamba bus traveling from Kundapura to Shivamogga caught fire near Hulikal–Balebare Ghat on Friday afternoon. All 36 passengers escaped safely without injuries. ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪದ ಮುಖ್ಯರಸ್ತೆಯಲ್ಲಿ ಇಂದು ಮಧ್ಯಾಹ್ನ ಸುಮಾರು 2.45ರ ವೇಳೆಗೆ ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ದುರ್ಗಾಂಬಾ ಬಸ್‌ನ ಇಂಜಿನ್ ಭಾಗದಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಕವಾಗಿ ಹರಡಿದ ಪರಿಣಾಮ ಬಸ್ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದೆ. ಘಟನೆಯ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ರಿಪ್ಪನ್‌ಪೇಟೆ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಪ್ರಜ್ವಲ್ ಎನ್ ಎಮ್ ಉತ್ತರಾಖಂಡ ರಾಜ್ಯದ ರುದ್ರಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ 23ನೇ ಯುವ ವಾಲಿಬಾಲ್ ಚಾಂಪಿಯನ್‌ ಶಿಪ್ ಗೆ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟೀಯ ಮಟ್ಟದ  ವಾಲಿಬಾಲ್ (21ವರ್ಷದೊಳಗಿನ ವಯೋಮಿತಿ) ಪಂದ್ಯವು ಇದೇ ತಿಂಗಳ 11 ರಿಂದ 16 ರವರೆಗೆ ಉತ್ತರಾಖಂಡ ರಾಜ್ಯದ ರುದ್ರಪುರದಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ವಿದ್ಯಾ ನಗರ ನಿವಾಸಿಗಳಾದ ಶಿಕ್ಷಕರಾದ ಮಹೇಶ್ವರ ಆಚಾರಿ ಹಾಗೂ ಮೀನಾಕ್ಷಿ ದಂಪತಿಗಳ…

Read More

ಪ್ರಿಯತಮೆ ಕೈಕೊಟ್ಟಳೆಂದು ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ :

ಪ್ರೀತಿಸಿದ ಹುಡುಗಿ ಮೋಸ ಮಾಡಿದಳೆಂದು ನೊಂದ ಯುವಕ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ದಿಲೀಪ್ ಎಂಬಾತ ಮೃತ ಯುವಕನಾಗಿದ್ದಾನೆ. ಕೆಲವು ವರ್ಷಗಳಿಂದ ದಿಲೀಪ್ ಮತ್ತು ಕುಟುಂಬಸ್ಥರು ಬೆಂಗಳೂರಿನಲ್ಲಿ ವಾಸವಿದ್ದುಕೊಂಡು ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದರು. ಯುವಕನಿಗೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದ ಯುವತಿಯೋರ್ವಳ ಪರಿಚಯವಾಗಿದ್ದು, ಬಳಿಕ ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ಆದರೆ ನಂತರದ ದಿನಗಳಲ್ಲಿ ಮನೆಯವರ…

Read More

ಕುಟುಂಬದವರೊಂದಿಗೆ ಆಗಮಿಸಿ ಮತ ಚಲಾಯಿಸಿದ ಬೇಳೂರು ಗೋಪಾಲಕೃಷ್ಣ|election

ಸಾಗರ : ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರು ಬೇಳೂರು ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಮ್ಮ ಪತ್ನಿ ರಂಜಿತರಾಧ ಮತ್ತು ಕುಟುಂಬದ ಸದಸ್ಯರೊಂದಿಗೆ ಬೇಳೂರು ಸರ್ಕಾರಿ ಶಾಲೆಯ ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.

Read More

ಬಿಜೆಪಿ ಪಕ್ಷದ ಯುವ ಮುಖಂಡನ ಬರ್ಬರ ಹತ್ಯೆ : ಶಿವಮೊಗ್ಗ ನಗರ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ

ಬಿಜೆಪಿ ಯುವ ಮುಖಂಡನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಮಂಗಳೂರು ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್ ನೆಟ್ಟಾರು(32) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಫಾರ್ಮ್ ಹೊಂದಿರುವ ಪ್ರವೀಣ್ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಫಾರ್ಮ್ ಮುಚ್ಚಿ ಮನೆಗೆ ಹೋಗಲು ಸಿದ್ಧವಾಗುತ್ತಿದ್ದ ವೇಳೆ ಈ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ. ಬೈಕ್‌ನಲ್ಲಿ ಬಂದ ಇಬ್ಬರು…

Read More

ಕಾಡುಹಂದಿಯ ಅಕ್ರಮ ಬೇಟೆ: 64 ಕೆಜಿ ಮಾಂಸ ವಶ, ಓರ್ವ ವಶಕ್ಕೆ

Zonal forest officials have arrested a man in an operation on charges of illegally hunting and butchering wild boars on a farm. ಕಾಡುಹಂದಿಯ ಅಕ್ರಮ ಬೇಟೆ: 64 ಕೆಜಿ ಮಾಂಸ ವಶ, ಓರ್ವ ವಶಕ್ಕೆ Zonal forest officials have arrested a man in an operation on charges of illegally hunting and butchering wild boars on a farm. ಶಿವಮೊಗ್ಗ :…

Read More

ಲಕ್ನೋ ಏರ್ ಪೋರ್ಟ್ ನಲ್ಲಿ ತಪ್ಪಿದ ಮತ್ತೊಂದು ವಿಮಾನ ದುರಂತ: 250 ಹಜ್ ಯಾತ್ರಿಕರು ಪಾರು! |WATCH ವೀಡಿಯೋ

ಲಕ್ನೋ ಏರ್ ಪೋರ್ಟ್ ನಲ್ಲಿ ತಪ್ಪಿದ ಮತ್ತೊಂದು ವಿಮಾನ ದುರಂತ: 250 ಹಜ್ ಯಾತ್ರಿಕರು ಪಾರು! |WATCH ವೀಡಿಯೋ ವಿಮಾನ ಲ್ಯಾಂಡಿಂಗ್ ವೇಳೆ ತಾಂತ್ರಿಕ ದೋಷ ಉಂಟಾದ ಹಿನ್ನೆಲೆ ಲಖನೌ ಏರ್ ಪೋರ್ಟ್ ನಲ್ಲಿ ಭಾರಿ ದುರಂತ ತಪ್ಪಿದೆ.ನಿನ್ನೆ ಭಾನುವಾರ ಲಕ್ನೋ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಮಾನ ಲ್ಯಾಂಡಿಂಗ್ ವೇಳೆ ವಿಮಾನದ ಚಕ್ರದಲ್ಲಿ ಕಿಡಿ ಕಂಡು ಬಂದು ಬೆಂಕಿ ಕಾಣಿಸಿಕೊಂಡಿದೆ. ಹೈಡ್ರೋಲಿಕ್ ಸೋರಿಕೆಯಿಂದ ಈ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ…

Read More

ದೇವರ ಮೊರೆಹೋದ ಶರಾವತಿ ಸಂತ್ರಸ್ಥರು : ಕಲ್ಲುಕೊಪ್ಪ ದಿಂದ ಧರ್ಮಸ್ಥಳದ ವರೆಗೆ ಪಾದಯಾತ್ರೆ !

ತೀರ್ಥಹಳ್ಳಿ : ತಾಲೂಕಿನಾದ್ಯಂತ ಇತ್ತೀಚಿಗೆ ಅತೀ ಹೆಚ್ಚು ಸುದ್ದಿ ಮಾಡಿದ್ದೂ ಎಂದರೆ ಅದು ಶರಾವತಿ ಸಂತ್ರಸ್ತರ ಹೋರಾಟ. ಹೌದು ಈಗಾಗಲೇ ತಾಲೂಕಿನ ಹಣಗೇರೆ ಕಟ್ಟೆ ಸಮೀಪ ಕಲ್ಲುಕೊಪ್ಪದಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ಮಾಡಿ ರಾಜ್ಯಾದ್ಯಂತ ಸುದ್ದಿ ಮಾಡಿದ್ದ ಶರಾವತಿ ಮುಳುಗಡೆ ಸಂತ್ರಸ್ತರು ಈಗ ದೇವರ ಮೊರೆ ಹೋಗಿದ್ದಾರೆ.   ಕಲ್ಲುಕೊಪ್ಪದಿಂದ ಸುಮಾರು 21 ಜನ  ಧರ್ಮಸ್ಥಳಕ್ಕೆ ಕಾಲ್ನಡಿಗೆ ಮೂಲಕ ಪಾದಯಾತ್ರೆ ಸಂಚರಿಸಲಿದ್ದಾರೆ. ಬರಿ ಕಾಲಿನಲ್ಲಿ ಅಂದಾಜು 200 ಕಿ ಮೀ ನೆಡೆದು ಧರ್ಮಸ್ಥಳದ  ಮಂಜುನಾಥನಿಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ.  ಸಂಕ್ಲಾಪುರ ಮತ್ತು…

Read More

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…

Read More