Headlines

ಡಿ ಬಾಸ್ ಅಂಡ್ ಗ್ಯಾಂಗ್ ಮಾಡಿದ ದೌರ್ಜನ್ಯಕ್ಕೆ ವೇಟರ್ ಹೆಂಡತಿ ಪೊರಕೆ ಹಿಡಿದು ನಿಂತಿದ್ದಳು : ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ

ಬೆಂಗಳೂರು: ನಟ ದರ್ಶನ್​ರವರ ಲೋನ್ ಗೆ ಜಾಮೀನು ಕೇಸ್​ನಲ್ಲಿ ಸಿನಿಮಾ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಎಂಟ್ರಿಯಾಗಿದ್ದು, ಮೈಸೂರು ನಗರದಲ್ಲಿ ಪೊಲೀಸ್​ ಸ್ಟೇಷನ್​ಗಳು ಸೆಟಲ್​ಮೆಂಟ್​ ಸ್ಟೇಷನ್​ ಆಗಿದೆ. ಜನ ಸಾಮಾನ್ಯರಿಗೆ ನ್ಯಾಯವೇ ಸಿಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಗುರುವಾರ ಬೆಳಗ್ಗೆ ಗೃಹ ಸಚಿವ ಬೊಮ್ಮಾಯಿ ಅವರನ್ನು ಭೇಟಿಯಾದ ಇಂದ್ರಜಿತ್​ ಲಂಕೇಶ್​, ದರ್ಶನ್ ಹೆಸರಲ್ಲಿ ವಂಚನೆ ಯತ್ನ ಪ್ರಕರಣ, ಮೈಸೂರಿನಲ್ಲಿ ನಡೆದಿರೋ ಗಲಾಟೆ, ಮೈಸೂರಿನ ಸ್ಟಾರ್ ಹೋಟೆಲ್ ಒಂದರಲ್ಲಿ ನಡೆದಿರೋ ದಲಿತನ ಮೇಲಿನ ಹಲ್ಲೆ, ಅಲ್ಲಿನ ಬೆಳವಣಿಗೆ ಕುರಿತು ಮಾಹಿತಿಯನ್ನೊಳಗೊಂಡ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ , ಶಾಲಾ ಮಕ್ಕಳಿಗೆ ಸಿಹಿ ಹಂಚಿಕೆ

ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ , ಶಾಲಾ ಮಕ್ಕಳಿಗೆ ಸಿಹಿ ಹಂಚಿಕೆ ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ – ಹೊಸನಗರ ಕ್ಷೇತ್ರದ ಶಾಸಕರಾದ  ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಿಪ್ಪನ್‌ಪೇಟೆ ಘಟಕದ ಅಧ್ಯಕ್ಷ ಗಣಪತಿ ಗವಟೂರು ನೇತ್ರತ್ವದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ…

Read More

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ರೈಲಿಗೆ ತಲೆವೊಡ್ಡಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನಂದಪುರದ ಮುಂಬಾಳು ಗ್ರಾಮದಲ್ಲಿ ‌ಗುರುವಾರ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗುರುಮೂರ್ತಿ (37) ಎಂದು ಗುರುತಿಸಲಾಗಿದೆ. ದೇಹ ಮತ್ತು ರುಂಡ ಬೇರೆ ಬೇರೆ ಆಗಿ ಹಾರಿಬಿದ್ದಿದೆ. ಗುರುಮೂರ್ತಿ ಮುಂಬಾಳು ಗ್ರಾಮದ ನಿವಾಸಿ ಎಂದು ಗೊತ್ತಾಗಿದ್ದುಈತ ತೀರ್ಥಹಳ್ಳಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ | person who was drowning was found dead

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ  ಸೊರಬ :  ನಿನ್ನೆ ನೀರುಪಾಲಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲಾಗಿದ್ದರು. ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸೊರಬ ತಾಲೂಕಿನ ಬಿದರೆಗೇರಿ ಗ್ರಾಮದ ಮಂಜಪ್ಪ (45) ತೂಬುಹೊಂಡದಲ್ಲಿ ಕೈಕಾಲು ತೊಳೆಯಲು ನೀರಿಗೆ ಇಳಿದಿದ್ದರು. ನೀರಿಗೆ ಇಳಿದ ವ್ಯಕ್ತಿ ಮತ್ತೆ ಮೇಲೆ ಬಂದಿರಲಿಲ್ಲ. ನಿನ್ನೆ ಸಂಜೆ 4-5 ರ ಸಮಯದಲ್ಲಿ ಈ ಘಟನೆ ನಡೆದಿದೆ. ಆತನಿಗಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆದಿದೆ. ಇಂದು ಮಂಜಪ್ಪನವರ ಮೃತದೇಹ ಪತ್ತೆಯಾಗಿದೆ….

Read More

ಮಾಸ್ತಿಕಟ್ಟೆ ಸಮೀಪ ಕೆಎಸ್ಆರ್ ಟಿಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ :

ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಯಡೂರು ಗ್ರಾಮದ ಮೇಕೇರಿಯಲ್ಲಿ ಈಚರ್ ಲಾರಿಯೊಂದು ಕೆಎಸ್ಆರ್ ಟಿಸಿ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮತ್ತು ಹಲವು ಕಾಲೇಜ್ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈಚರ್  ಲಾರಿಯು ಕುಂದಾಪುರದಿಂದ ಶಿವಮೊಗ್ಗಕ್ಕೆ ಇಟ್ಟಿಗೆಯನ್ನು ತುಂಬಿಸಿಕೊಂಡು ಹೋಗುತ್ತಿತ್ತು.ಕೆ ಎಸ್ ಆರ್ ಟಿ ಸಿ ಬಸ್ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತಿತ್ತು.ಈ ಸಂಧರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಅಪಘಾತದಿಂದ…

Read More

ಮರ ಬಿದ್ದು ರಸ್ತೆ ಸಂಚಾರ ಹಾಗೂ ವಿದ್ಯುತ್ ಸಂಪರ್ಕ ಕಡಿತ:

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಪೂಜಾರದಿಂಬ ಎಂಬಲ್ಲಿ  ರಸ್ತೆ ಮೇಲೆ ಮರ ಬಿದ್ದು ಬಟ್ಟೆಮಲ್ಲಪ್ಪ ರಿಪ್ಪನ್ ಪೇಟೆ ರಸ್ತೆಸಂಪರ್ಕ ಕಡಿತಗೊಂಡಿದೆ.  ಮರ ಬಿದ್ದ ಸ್ಥಳದಲ್ಲಿ ವಿದ್ಯುತ್ ಕಂಬವಿದ್ದು, ವಿದ್ಯುತ್ ವಯರ್ ಗಳು ತುಂಡಾಗಿ ಬಿದ್ದಿದ್ದು ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  ಸಂಬಂಧಪಟ್ಟ ಇಲಾಖೆ ಸೂಕ್ತಕ್ರಮ ಕೈಗೊಂಡು ವಿದ್ಯುತ್ ಸಂಪರ್ಕ ಸರಿಪಡಿಸುವುದರೊಂದಿಗೆ, ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ವರದಿ: ದೇವರಾಜ್ ರಿಪ್ಪನ್ ಪೇಟೆ ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ…

Read More

ರೈತರಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|farmer loan

2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು, ರೈತರನ್ನು ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ಉತ್ತೇಜಿಸಲು ಹಾಗೂ ತೋಟಗಾರಿಕೆಯಲ್ಲಿ ಕೊಯ್ಲೋತ್ತರ ನಿರ್ವಾಹಣಾ ಚಟುವಟಿಕೆಗಳ ಕಾರ್ಯಕ್ರಮಗಳಡಿಯಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು , ಮೋಹಕ ಕೀಟ ಬಲೆಗಳು/ಜಿಗುಟಾದ ಬಲೆಗಳು, ಸೌರ ಶಕ್ತಿ. ಕೃತಕ ಬುದ್ದಿಯ ಕೀಟ ನಿಯಂತ್ರಕ ಬಲೆಗಳು, ಸೋಲಾರ್ ಪಂಪ್ ಸೆಟ್, ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಕೊರುಗೇಟೆಡ್ ಬಾಕ್ಸ್‍ಗಳ ಖರೀದಿಸಲು ಸಾಮಾನ್ಯ…

Read More

ಮನುಷ್ಯ ಸಮಾಜಮುಖಿಯಾಗಿ ಯೋಚಿಸಿ ಬದುಕಬೇಕು ಹಾಗೂ ಇತರರಿಗೆ ಮಾದರಿಯಾಗಬೇಕು :ಮಳಲಿ ಶ್ರೀ

ರಿಪ್ಪನ್ ಪೇಟೆ:ನಾನು ನನ್ನದು ಎಂಬುದಕ್ಕಿಂತ ನಾವು ನಮ್ಮದು ಎಂಬ ಮನೋಭಾವ ಇದ್ದಾಗ ಮಾತ್ರ ಬೆಳೆಯಲಿಕ್ಕೆ ಸಾದ್ಯ ಎಂದು ಮಳಲಿಮಠದ .ಡಾ.ಶ್ರೀ ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು. ಬುಧವಾರ ಹೊಸನಗರ ತಾಲೂಕಿನ ಮಸರೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ. ಶ್ರಾವಣ ಮಾಸದ ಅಂಗವಾಗಿ  ಹಮ್ಮಿಕೊಂಡ. ವಿಶೇಷ ರುದ್ರಾಭಿಷೇಕ ಪೂಜಾ ಕಾರ್ಯಕ್ರಮದ ದಿವ್ಯ ಸಾನಿದ್ಯ ವಹಿಸಿ ಆಶೀರ್ವಚನ ನೀಡಿದ  ಅವರು . ಮನುಷ್ಯ ಸಮಾಜಮುಖಿಯಾಗಿ ಯೋಚಿಸಿ ಬದುಕಬೇಕು ಹಾಗೂ ಇತರರಿಗೆ ಮಾದರಿಯಾಗಬೇಕು. ನಾನು ನನ್ನಿಂದಲೆ ಎಂಬ ಅಹಂಕಾರವನ್ನು ಬಿಡಬೇಕು ಎಂದರು….

Read More

ಕಲಿಕಾ ಹಬ್ಬವು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿ|GJC

ರಿಪ್ಪನ್ ಪೇಟೆ : ಮಕ್ಕಳ ಕಲಿಕೆ ಮೇಲೆ ಕೊರೊನಾ ಮಹಾಮಾರಿಯಿಂದ ದುಷ್ಪಪರಿಣಾಮ ಉಂಟಾಗಿತ್ತು. ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದೆ. ಸದ್ಯ ಕಲಿಕಾ  ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಹಮ್ಮಿಕೊಂಡಿದೆ ಎಂದು ಶಿವಮೊಗ್ಗ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಪರಮೇಶ್ವರಪ್ಪ ಹೇಳಿದರು. ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಪ್ರೌಢ ಶಾಲೆಯಲ್ಲಿ…

Read More

ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಯುವಕ ಸ್ಥಳದಲ್ಲೇ ಸಾವು – ಇನ್ನೋರ್ವ ಗಂಭೀರ|Accident

ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪ ಗ್ಯಾಸ್ ಸಿಲಿಂಡರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ಆಯನೂರು ಕಡೆ ಹೊರಟಿದ್ದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಗೆ ಹಾಗೂ ಆಯನೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬೈಕ್ ನ ನಡುವೆ ಈ ಅಪಘಾತ ಸಂಭವಿಸಿದ್ದು. ಸ್ಥಳದಲ್ಲೇ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಆಯನೂರು ಕೋಟೆ ನಿವಾಸಿ ಯಶವಂತ್ ಎಂಬ ವ್ಯಕ್ತಿ ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ. ಬೈಕ್ ನ ಹಿಂಬದಿ ಕೂತಿದ್ದ ವ್ಯಕ್ತಿಯ ಕಾಲು ಮುರಿದಿದ್ದು ತಕ್ಷಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ…

Read More