ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ ಕಿಮ್ಮನೆ ಜಿಜ್ಞಾಸೆಯಿಂದ ಹತಾಶೆಯ ಹೇಳಿಕೆ ನೀಡುತಿದ್ದಾರೆ‌ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ   ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ರವರಿಗೆ ಸಹಿಸಲು ಸಾಧ್ಯವಿಲ್ಲದೇ ಇತಿ-ಮಿತಿ ಮೀರಿ ಆರೋಪಿಸುತ್ತಿದ್ದಾರೆ.ಆರ್.ಎಂ.ಮಂಜುನಾಥ ಗೌಡರಿಂದಾಗಿ ಮುಂದಿನ ಭಾರಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಟಿಕೇಟ್ ಸೀಗುತ್ತದೋ? ಎಂಬ ಜಿಜ್ಞಾಸೆಯಿಂದ ಈ ರೀತಿಯಲ್ಲಿ ಹತಾಶೆಯ ಹೇಳಿಕೆ ನೀಡುತ್ತಿದ್ದಾರೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅರೋಪಿಸಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಕೇವಲ ಐದು ವರ್ಷದ ಅವಧಿಯಲ್ಲಿ 1000 ಸಾವಿರ ಕೋಟಿಗೂ ಅಧಿಕ ಅನುದಾನವನ್ನು ತರಲಾಗಿದೆ.ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗಿದೆ…

Read More

ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರ : ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ

ಬೈಕ್ ಸವಾರನೊಬ್ಬ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುವಾಗ, ಅದೇ ದಾರಿಯಲ್ಲಿ ಸಾಗುತ್ತಿದ್ದ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ  ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ. ಇಂದು ಹೊಸನಗರ ತಾಲ್ಲೂಕಿನ ಪ್ರವಾಸದಲ್ಲಿದ್ದ ಶಾಸಕ ಹರತಾಳು ಹಾಲಪ್ಪರವರು ಕೊಡಚಾದ್ರಿ ಕಾಲೇಜಿನ ಮುಂಭಾಗ ತೆರಳುತ್ತಿದ್ದಾಗ ಬೈಕ್ ಅಪಘಾತವಾಗಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಬಿದ್ದಿದ್ದರು.ಕೂಡಲೇ ವಾಹನ ನಿಲ್ಲಿಸಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ಸಹಾಯಕ್ಕೆ ತೆರಳಿದ ಶಾಸಕರು ಅಪಘಾತಕ್ಕೀಡಾದ ವ್ಯಕ್ತಿಗೆ…

Read More

Ripponpete | ಬಜರಂಗದಳದ ವತಿಯಿಂದ ಗೋಶಾಲೆಗೆ ಮೇವು ಸಂಗ್ರಹ ಅಭಿಯಾನ

Ripponpete | ಬಜರಂಗದಳದ ವತಿಯಿಂದ ಗೋಶಾಲೆಗೆ ಮೇವು ಸಂಗ್ರಹ ಅಭಿಯಾನ ರಿಪ್ಪನ್‌ಪೇಟೆ : ನಂದಗೋಕುಲ ಗೋಶಾಲೆ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಹೊಸನಗರದಲ್ಲಿರುವ ಗೋಶಾಲೆಗೆ ಪಟ್ಟಣದ ಬಜರಂಗದಳ ಘಟಕದ ವತಿಯಿಂದ ಉಚಿತ ಮೇವು ಸಂಗ್ರಹ ಅಭಿಯಾನ ನಡೆಯಿತು. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮಸ್ಥರು ಸುಮಾರು 100 ಕ್ಕೂ ಹೆಚ್ಚು ಹೊರೆ ಹುಲ್ಲನ್ನು ನೀಡುವ ಮೂಲಕ ಈ ಮೇವು ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.ಈ ಮೂಲಕ ಮೇವುಗಳನ್ನು ಹೊಸನಗರದ ರಮಿತ್ ನೇತ್ರತ್ವದ ಗೋಶಾಲೆಗೆ ಕಳುಹಿಸಿಕೊಡಲಾಗಿದೆ. ಈ…

Read More

ಅಬ್ಬರಿಸಿ ಬೊಬ್ಬಿರಿದರೇ ಇಲ್ಯಾರಿಗೂ ಭಯವಿಲ್ಲ | ಶಿವಣ್ಣ ಅಭಿಮಾನಿಗಳಿಂದ ಮನೆ ಮೇಲೆ ಮುತ್ತಿಗೆ ಬೆನ್ನಲ್ಲೇ ಮತ್ತೊಂದು ಪೋಸ್ಟ್ ಮೂಲಕ ಟಾಂಗ್ ಕೊಟ್ಟ ಕುಮಾರ್ ಬಂಗಾರಪ್ಪ | shivanna-kumar

ಅಬ್ಬರಿಸಿ ಬೊಬ್ಬಿರಿದರೇ ಇಲ್ಯಾರಿಗೂ ಭಯವಿಲ್ಲ | ಶಿವಣ್ಣ ಅಭಿಮಾನಿಗಳಿಂದ ಮನೆ ಮೇಲೆ ಮುತ್ತಿಗೆ ಬೆನ್ನಲ್ಲೇ ಮತ್ತೊಂದು ಪೋಸ್ಟ್ ಮೂಲಕ ಟಾಂಗ್ ಕೊಟ್ಟ ಕುಮಾರ್ ಬಂಗಾರಪ್ಪ | shivanna-kumar ಚಲನಚಿತ್ರ ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆಂದು ಶಿವಣ್ಣ ಅಭಿಮಾನಿಗಳು ಬೆಂಗಳೂರಿನಲ್ಲಿರುವ ಮಾಜಿ ಸಚಿವ‌ ಕುಮಾರ್ ಬಂಗಾರಪ್ಪನವರ ಮನೆ ಮೇಲೆ ಮುತ್ತಿಗೆ ಹಾಕಿರುವ ಬೆನ್ನಲ್ಲೇ ಕುಮಾರ್ ಬಂಗಾರಪ್ಪ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಪೋಸ್ಟ್ ಹಾಕುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ರವರಿಗೆ ಎಕ್ಸ್ ಖಾತೆ ಮತ್ತು…

Read More

ರಿಪ್ಪನ್ ಪೇಟೆ ಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ – ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ|Ramadan

ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮುಪ್ತಿ ಇಜ್ ಹಾರ್ ಅಹಮದ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ ಒಂದು ತಿಂಗಳಿನಿಂದ ಉಪವಾಸ ಹಾಗೂ ಧಾರ್ಮಿಕ ಆಚರಣೆಗಳ ವಿಧಿವಿಧಾನಗಳನ್ನು ಪಾಲಿಸಿದ ಅವರುಗಳು ಶುಕ್ರವಾರ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ  ಇಂದು…

Read More

ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ನವಜಾತ ಶಿಶು ಸಾವು – ಆಸ್ಪತ್ರೆಯ ಗಾಜು ಒಡೆದು ಕುಟುಂಬಸ್ಥರ ಆಕ್ರೋಶ|hospital

ಶಿವಮೊಗ್ಗ: ನಗರದ ಸುಬ್ಬಯ್ಯ ಆಸ್ಪತ್ರೆಯಲ್ಲಿ ಹೆರಿಗೆಯಾದ ಕೆಲವೇ ಗಂಟೆಯಲ್ಲಿ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವಿಗೀಡಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಪೂಜಿ ನಗರದ ಭಾಗ್ಯ ಮತ್ತು ನಾಗರಾಜ್ ದಂಪತಿಗಳಿಗೆ ಚೊಚ್ಚಲ ಗಂಡು ಮಗುವಿಗೆ ನಿನ್ನೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿದ ತಕ್ಷಣ ತೂಕಹಾಕಿಲ್ಲ ಮಗುವಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದೆ ವೈದ್ಯರೇ ಸಾವಿಗೆ ಕಾರಣವಾಗಿದ್ದಾರೆ ಎಂದು ಪೋಷಕರು ಮತ್ತು ಪೋಷಕರ ಕಡೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗು ಸಾವಿಗೆ ಮುಂಚೆ ವೈದ್ಯರು ಉಸಿರಾಟ ತೊಂದರೆ…

Read More

ದಿಗ್ವಿಜಯ ನ್ಯೂಸ್​ ನ ಸುದ್ದಿ ಸಂಪಾದಕ ಪ್ರಶಾಂತ್​ ರಿಪ್ಪನ್ ಪೇಟೆ ರವರಿಗೆ “ಆರೂಢ ಶ್ರೀ” ಪ್ರಶಸ್ತಿ ಪ್ರದಾನ :

  ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಶ್ರೀ ಆರೂಢ ಮಠದ ಶ್ರೋ ಬ್ರ ಬೃಹ್ಮಲೀನ ಸದ್ಗುರು ಶ್ರೀ ಸದಾಶಿವಾನಂದ ಮಹಾಸ್ವಾಮಿಗಳವರ 12ನೇ ವರ್ಷದ ಪುಣ್ಯಸ್ಮರಣೆ ಹಾಗೂ 42ನೇ ಅಖಿಲ ಕರ್ನಾಟಕ ವೇದಾಂತ ಪರಿಷತ್ ಸಮಾರಂಭದಲ್ಲಿ ದಿಗ್ವಿಜಯ ವಾಹಿನಿಯ ನಿರೂಪಕ , ನಿರ್ಮಾಪಕರಾದ ಪ್ರಶಾಂತ್ ರಿಪ್ಪನ್ ಪೇಟೆ ಅವರಿಗೆ ‘ ಆರೂಢ ಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ ಪ್ರಶಾಂತ ರಿಪ್ಪನ್ ಪೇಟೆ ಅವರಿಗೆ…

Read More

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station ರಿಪ್ಪನ್‌ಪೇಟೆ : ಅರಸಾಳು ರೈಲ್ವೆ ಸ್ಟೇಷನ್ ಬಳಿಯಲ್ಲಿ ಭಾರಿ ಮಳೆಗೆ ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಗುರುವಾರ ಸಂಜೆ ನಡೆದಿದೆ. ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ರೈಲ್ವೆ ಹಳಿಯ ಮೇಲೆ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಸ್ಥಳಕ್ಕೆ…

Read More

ತೀರ್ಥಹಳ್ಳಿ: ತಾಲೂಕು ಪಂಚಾಯತ್ ಅಧಿಕಾರವದಿ ಮುಕ್ತಾಯ,ವಿದಾಯ ಸಭೆ:

ತೀರ್ಥಹಳ್ಳಿ: 5 ವರ್ಷಗಳ ಕಾಲ  ಆಡಳಿತ ನಡೆಸಿ ತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಇಂದು ತನ್ನ ಅವಧಿಯನ್ನು ಪೂರೈಸಿದೆ. ಜನಪ್ರತಿನಿಧಿಗಳಾಗಿ ಸೇವೆ ಸಲ್ಲಿಸಿದ 13 ಜನ ಸದಸ್ಯರುಗಳ ಅಂತಿಮ ವಿಧಾಯಸಭೆ ಇಂದು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು  ತಾಲ್ಲೂಕು  ಅಧ್ಯಕ್ಷೆ ಶ್ರೀಮತಿ ನವಮಣಿ ರವಿಕುಮಾರವರು ಉಪಾಧ್ಯಕ್ಷೆ ಶ್ರೀಮತಿ ಯಶೋಧ ಮಂಜುನಾಥ .ಸದಸ್ಯರುಗಳಾದ ಸಾಲೆಕೊಪ್ಪ ರಾಮ ಚಂದ್ರ. ಕುಕ್ಕೆ ಪ್ರಶಾಂತ್ ,ಕೆಳಕೆರೆ ದಿವಾಕರ್ .ಶ್ರುತಿ ವೆಂಕಟೇಶ್.   ಲಕ್ಷ್ಮಿ ಉಮೇಶ್,  ಗೀತಾ ಸದಾನಂದ ಶೆಟ್ಟಿ,  ವೀಣಾ ಗಿರೀಷ್,ಸುಮಾ ಉದಯ . ಚಂದವಳ್ಳಿ ಸೋಮಶೇಖರ್. ಬೇಗುವಳ್ಳಿ…

Read More

ಅಪಘಾತಪಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.! – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು..!!??

ಅಪಘಾತಪಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.! – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು..!!?? ಹೊಸನಗರ: ಡಿಸೇಲ್ ಹಾಕಿಸುತ್ತಿದ್ದ ಪಿಕಪ್ ವಾಹನಕ್ಕೆ ರಾಷ್ಟ್ರೀಯ ಪ್ರಕೃತಿ ವಿಕೋಪ‌ ನಿರ್ವಹಣಾ ತಂಡ (NDRF ) ದ ವಾಹನ ಡಿಕ್ಕಿ ಹೊಡೆದಿದ್ದಲ್ಲದೆ, , ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಅದರ ಸಿಬ್ಬಂದಿಗಳು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಮೂಗಿನಲ್ಲಿ ರಕ್ತ ಬರುವ ಹಾಗೇ  NDRF ಸಿಬ್ಬಂದಿಗಳು ಹಲ್ಲೆ ಮಾಡಿದ್ದಾರೆ ಎಂದು ವ್ಯಕ್ತಿ ಆರೋಪಿಸಿದ್ದಾರೆ. ಹೊಸನಗರ ಪೆಟ್ರೋಲ್ ಬಂಕ್…

Read More
Exit mobile version