Headlines

ಈಜಲು ತೆರಳಿದ್ದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು – ಓರ್ವನ ಶವ ಪತ್ತೆ|tunga

ತೀರ್ಥಹಳ್ಳಿ : ಇಲ್ಲಿನ ತೀರ್ಥಮತ್ತೂರಿನಲ್ಲಿ ಈಜಲು ಇಳಿದ ಇಬ್ಬರು ಪ್ರಾಧ್ಯಾಪಕರು ನೀರು ಪಾಲಾಗಿರುವ ಘಟನೆ ಇಂದು ನಡೆದಿದೆ. ತೀರ್ಥಮತ್ತೂರು ಬಳಿ 8-10 ಜನ ಪ್ರಾಧ್ಯಾಪಕರು ತುಂಗ ನದಿಗೆ ಇಳಿದಾಗ ಓರ್ವ ಪ್ರಾಧ್ಯಾಪಕರು ನೀರು ಪಾಲಾಗಿದ್ದು ಅವರನ್ನು ರಕ್ಷಿಸಲು ಮತ್ತೋರ್ವ ಪ್ರಾಧ್ಯಾಪಕರು ಮುಂದಾಗಿದ್ದು ಅವರೂ ಸಹ ನೀರು ಪಾಲಾಗಿದ್ದಾರೆ. ನಿಟ್ಟೆ ಕಾಲೇಜಿನ ಪ್ರಾಧ್ಯಾಪಕರಾದ ಪುನೀತ್ ಮತ್ತು ಬಾಲಾಜಿ ನೀರುಪಾಲಾದ ದುರ್ಧೈವಿಗಳಾಗಿದ್ದಾರೆ. ದಕ್ಷಿಣ ಕನ್ನಡದ ನಿಟ್ಟೆ ಕಾಲೇಜಿನ 8 ರಿಂದ ಹತ್ತು ಜನ ಪ್ರಾಧ್ಯಾಪಕರು ತೀರ್ಥಮತ್ತೂರಿನ ಯೋಗ ನರಸಿಂಹ ಮಠಕ್ಜೆ…

Read More

ಫಾರ್ಚೂನರ್ ಕಾರಿನಲ್ಲಿ ಗಾಂಜಾ ಸಾಗಿಸುತಿದ್ದ ಮೂವರನ್ನು ಬಂಧಿಸಿದ ತೀರ್ಥಹಳ್ಳಿ ಪೊಲೀಸರು|arrested

ಶಿವಮೊಗ್ಗದಿಂದ ಫಾರ್ಚುನರ್ ಕಾರಿನಲ್ಲಿ ಗಾಂಜಾ ಸಾಗಿಸುತಿದ್ದ ಮೂವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ಯುವಕರಾದ ಯೂಸುಫ್ ಖಾನ್ , ಅತೀಫ್, ಮನೋಜ್ ಎನ್ನುವ ಮೂವರು ತೀರ್ಥಹಳ್ಳಿ ಮೂಲದ ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಗಜಾನನಾ ವಾಮನ್ ಸುತಾರ್ ಅವರ ಮಾರ್ಗದರ್ಶನದಲ್ಲಿ ಮಾಲೂರು ಠಾಣೆಯ ನವೀನ್ ಮಠಪತಿ ಅವರ ನೇತೃತ್ವದಲ್ಲಿ ಠಾಣೆಯ ಸಿಬ್ಬಂದಿಗಳು ಸೇರಿ ಫಾರ್ಚೂನರ್ ಕಾರನ್ನು ತಡೆದು ಪರಿಶೀಲಿಸಿದಾಗ 200 ಗ್ರಾಂ ಗಾಂಜಾ ಪತ್ತೆಯಾಗಿದೆ. ಕಾರನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಖಚಿತ ಮಾಹಿತಿಯ…

Read More

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖ (50)ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಕುಳಿತಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆಯಲ್ಲಿ ಸ್ಥಳೀಯರು ವೈದ್ಯರಾದ ಅನಂತ್ ಮಯ್ಯ ರವರಿಗೆ ಮಾಹಿತಿ ತಿಳಿಸಿದ್ದು ಕೂಡಲೇ ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಅವರು ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಧೃಡ ಪಡಿಸಿದ್ದಾರೆ….

Read More

ಗಣೇಶ ಚತುರ್ಥಿ, ಮೊಹರಂ ಹಬ್ಬ; ರಾಜ್ಯ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಬಿಡುಗಡೆ:

ಬೆಂಗಳೂರು: ಗಣೇಶ ಚತುರ್ಥಿ ಮತ್ತು ಮೊಹರಂ ಆಚರಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿನ ಹಬ್ಬಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಹಬ್ಬಗಳಲ್ಲಿ ಕೊರೊನಾ ನಿಯಮ ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜನೆ ವೇಳೆ ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಗಣೇಶ ಹಬ್ಬ ಆಚರಿಸುವ ದೇಗುಲಗಳಲ್ಲಿ ನಿತ್ಯ ಸ್ಯಾನಿಟೈಸೇಷನ್ ನಡೆಸಬೇಕು. ದೇಗುಲಗಳಲ್ಲಿ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೇಗುಲಗಳಲ್ಲಿ ಭಕ್ತರಿಗೆ ಕನಿಷ್ಠ 6 ಅಡಿ…

Read More

ಆನಂದಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮಾದರಿ ಗ್ರಾಮದ ಕಾಮಗಾರಿಯನ್ನು ನಿರ್ವಹಿಸುವ ಮತ್ತು 11 ಕೆ ವಿ ಮಾರ್ಗಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುವುದರಿಂದ ಮಲಂದೂರು, ದಾಸಕೊಪ್ಪ ,ಆನಂದಪುರ,ಜೆಡಿಸರ,ಅಡೂರು, ತುಂಬ್ರಿಕೊಪ್ಪ ಮತ್ತು ಬಳ್ಳಿಬೈಲು ಗ್ರಾಮಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6:00 ವರೆಗೆ ವಿದ್ಯುತ್ ವೆಚ್ಚಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಇಲಾಖೆಯವರು ಮನವಿ ಮಾಡಿದ್ದಾರೆ

Read More

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ ; ಕೆ.ಎಸ್.ಈಶ್ವರಪ್ಪ | KSE

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ  ; ಕೆ.ಎಸ್.ಈಶ್ವರಪ್ಪ | KSE   ಸಾಗರ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರ ಭಕ್ತರ ಬಳಗ ಸಾಗರ ವಿಭಾಗದ ವತಿಯಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರವಾಗಿ ಕಾರ್ಯರ್ತರ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಾಗರ ಪಟ್ಟಣ ಹಾಗು ಸುತ್ತಮುತ್ತ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕರ್ತರು ಆಗಮಿಸಿ ಕೆ.ಎಸ್.ಈಶ್ವರಪ್ಪಗೆ ಬೆಂಬಲ ಸೂಚಿಸಿದರು. ಕಾರ್ಯಕ್ರಮದಲ್ಲಿ ಸಾಗರ ಮಾಜಿ ನಗರ ಸಭಾ ಸದಸ್ಯರುಗಳಾದ ಮಂಜುನಾಥ್ ಕೆ.ಎಲ್. ಕಸ್ತೂರಿ ಸಾಗರ, ಮಾಜಿ…

Read More

ವಿದ್ಯಾರ್ಥಿಗಳಿಗೆ ಹೆಚ್ಚುತ್ತಿರುವ ಕೊರೊನಾ ಸೋಂಕು : ರಿಪ್ಪನ್ ಪೇಟೆಯ ಸರಕಾರಿ ಪದವಿ ಹಾಗೂ ಪಿಯು ಕಾಲೇಜು ಸೀಲ್ ಡೌನ್……!

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕು ದಂಡಾಧಿಕಾರಿಗಳ ಆದೇಶದ ಮೇರೆಗೆ  ರಿಪ್ಪನ್ ಪೇಟೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಎರಡು ಕಾಲೇಜುಗಳನ್ನು ಸೀಲ್ ಡೌನ್ ಮಾಡಿದ್ದಾರೆ.  ಕಳೆದ ಒಂದು ವಾರದಲ್ಲಿ ಪದವಿ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಹಾಗೂ ಪದವಿಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳಿಗೆ ಕೊರೊನಾ  ಸೋಂಕು  ತಗಲಿದ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ಸೀಲ್ ಡೌನ್ ಮಾಡಲಾಗಿದೆ….

Read More

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : ಯುವಕ ದುರ್ಮರಣ!

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ! ಶಿವಮೊಗ್ಗ : ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಹಿನ್ನೆಲೆ, ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿದ್ದು, ಇದೀಗ ಸಂಭ್ರಮಾಚರಣೆಯ ವೇಳೆ 2 ಬೈಕಗಳು ಮುಖಾಮುಖಿ ಡಿಕ್ಕಿ ಹೊಡೆದು…

Read More

ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ

ಏ.24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ 9 ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಧಾರ್ಮಿಕ ಧರ್ಮ ಸಮಾರಂಭ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಗುಳಿಗುಳಿ ಶ್ರೀ ಶಂಕರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗದ ಆಂದಾಲ್ಸ್ ರಾಘುಭಟ್ರು ನೇತೃತ್ವದಲ್ಲಿ ಹಾರೋಹಿತ್ತಲು ನಾಗಭೂಷಣ ಭಟ್ರು.ಮತ್ತು ಶಿರಸಿಯ ಶ್ರೀಕಾಂತ ಭಟ್ರು ಇವರ ಪುರೋಹಿತ್ವದಲ್ಲಿ 9 ನೇ ವರ್ಷದ ವರ್ಧಂತ್ಯುತ್ಸವ ಅಂಗವಾಗಿ ಕುಂಭಾಭಿಷೇಕ ಹಾಗೂ ಕಲಾ ಹೋಮ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯಗಳೊAದಿಗೆ ಧಾರ್ಮಿಕ ಧರ್ಮಸಮಾರಂಭವನ್ನು ಆಯೋಜಿಸಲಾಗಿದೆ…

Read More

ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ|kaveri issue

ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ ಶಿವಮೊಗ್ಗ : ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಬೆಳ್ಳಂಬೆಳಗ್ಗೆ ಕಾವೇರಿ ಹೋರಾಟ ನಡೆಸಿದ ಕನ್ನಡ ಪರ ಸಂಘಟನೆಗಳು, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಕರವೇ ಹಾಗೂ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕಾವೇರಿ ನಮ್ಮದು, ಕಾವೇರಿ…

Read More
Exit mobile version