Headlines

Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು

Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ  – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು ರಿಪ್ಪನ್ ಪೇಟೆ : ಮಲೆನಾಡಿನ ವಿದ್ಯಾರ್ಥಿಗಳು ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪೋಷಕರ,ಶಿಕ್ಷಕರ ಹಾಗೂ ತಮ್ಮ ಪ್ರತಿಭೆಯ ಸಹಕಾರದಿಂದ ಉನ್ನತ ಶಿಕ್ಷಣವನ್ನು ಪಡೆದು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಅಂತ ಮಲೆನಾಡಿನಲ್ಲಿ ಕೆಲ ಕಿಡಿಗೇಡಿಗಳ ವಿದ್ಯಾರ್ಥಿಗಳ ಪುಂಡಾಟಿಕೆಯ ಅಟ್ಟಹಾಸದಿಂದ ಪೋಷಕರು ಶಿಕ್ಷಕರು ಬೆಚ್ಚಿ ಬಿದ್ದಿದ್ದಾರೆ ಹಾಗೂ ಗ್ರಾಮಸ್ಥರು ಮರ್ಯಾದೆಗೆ ಅಂಜಿ ತಲೆ ಬಾಗಿಸುವಂಥಾಗಿದೆ….

Read More

ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ

ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಮಾರುತಿ ಸುಜುಕಿ ಕಾರ್ ನ ಅಧಿಕೃತ ಡೀಲರ್ ಶ್ರುತಿ ಮೋಟಾರ್ಸ್ ರವರ ನೂತನ ಶೋರೂಂ ಹೊಸನಗರ ಪಟ್ಟಣದಲ್ಲಿ ನಾಳೆ (ಗುರುವಾರ) ಶುಭಾರಂಭಗೊಳ್ಳಲಿದೆ. ಹೊಸನಗರ ಪಟ್ಟಣದ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಶ್ರುಯಿ ಅರೆನಾ ಮೋಟಾರ್ಸ್ ರವರ ನೂತನ ಶಾಖೆ ನಾಳೆ ಬೆಳಿಗ್ಗೆ 08 ಗಂಟೆಗೆ ಶುಭಾರಂಭಗೊಳ್ಳಲಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ…

Read More

JDS ಪಕ್ಷದಿಂದ ವಿಧಾನಸಭೆ ಉಪ ನಾಯಕಿಯಾಗಿ ಶಾರದಾ ಪೂರ್ಯಾ ನಾಯಕ್ ಆಯ್ಕೆ|

ವಿಧಾನಸಭೆಯ ಜೆಡಿಎಸ್ ಪಕ್ಷದಿಂದ ನಾಯಕರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪ ನಾಯಕಿಯನ್ನಾಗಿ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಪಕ್ಷದ ವರಿಷ್ಠರು ವಿಧಾನಸಭೆಯ ನಾಯಕರನ್ನಾಗಿ ನೇಮಿಸಿದ್ದರೇ, ಉಪ ನಾಯಕಿಯನ್ನಾಗಿ ಶಿವಮೊಗ್ಗ ಗ್ರಾಮಾಂತರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕಿಯಾಗಿರುವಂತ ಶಾರದ ಪೂರ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ಪಕ್ಷದ ಏಕೈಕ ಮಹಿಳಾ ಶಾಸಕಿಯಾಗಿರುವಂತ ಶಾರಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ…

Read More

ಚಿಕ್ಕ ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು

ಚಿಕ್ಕ ಜೇನಿ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ, ಜನ್ನಂಗಿ , ಗ್ರಾಮದ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ನೂರಾರು ಲೋಡ್ ಅಕ್ರಮ ಮರಳು ಶೇಖರಿಸಿದ್ದರೂ ಅಕ್ರಮ ವ್ಯವಹಾರದಲ್ಲಿ ಮೌನ ಸಮ್ಮತಿ ನೀಡಿರುವ ಆಡಳಿತ ವ್ಯವಸ್ಥೆಯಿಂದ ಅಪಾರ ಪ್ರಮಾಣದ ಸಂಪತ್ತು ನಾಶವಾಗುತ್ತಿದೆ. ಶಾಂತಪುರ ಸೇತುವೆಯಿಂದ ಪ್ರಾರಂಭವಾಗಿ ಹತ್ತಾರು ಸ್ಥಳಗಳಲ್ಲಿ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು…

Read More

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೈಡ್ – ಆವರಣದಲ್ಲಿ ಪತ್ತೆಯಾಯ್ತು ಮೊಬೈಲ್,ಬೀಡಿ ಬೆಂಕಿಪೊಟ್ಟಣ|raid

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ವಿಶೇಷ ಅತಿಥ್ಯ ಮುಂದುವರೆದಿದೆ. ಕ್ರಿಮಿನಲ್ ಪ್ರಕರಣಗಳಲ್ಲಿ ಜೈಲು ಶಿಕ್ಷೆ ವಿಧಿಸಿ ಸಮಾಜದಲ್ಲಿ ಸುಧಾರಿತ ವ್ಯಕ್ತಿಗಳಾಗಿ ಹೊರಗೆ ಬರಲಿ ಎಂಬ ಕಲ್ಪನೆ ಕಲ್ಪನೆಯಾಗಿ ಉಳಿದಿದೆ. ಸುಧಾರಿತ ವ್ಯಕ್ತಿಗಳಾಗುವ ಕ್ರಿಮಿನಲ್ ಗಳಿಗೆ ಜೈಲಿನಲ್ಲಿ ಮೊಬೈಲು, ಬೀಡಿಗಳು, ಗಾಂಜಾಗಳು ಸಪ್ಲೆ ಆಗುತ್ತಿವೆ ಎಂದರೆ ಅಚ್ಚರಿ ಪಡುವಂತಾಗಿದೆ. ಜೈಲು ಸಿಬ್ಬಂದಿಗಳೇ ಅಪರಾಧಿಗಳ ಜೊತೆ ಕೈ ಜೋಡಿಸುತ್ತಿದ್ದಾರಾ ಎಂಬ ಅನುಮಾನ ಹೆಚ್ಚಾಗಿದೆ. ಈ ಅನುಮಾನಕ್ಕೆ ಈ ಎಫ್ಐಆರ್ ಪುಷ್ಠಿ ನೀಡುತ್ತಿದೆ. ಅ. 21 ರಂದು ಕೇಂದ್ರ ಕಾರಾಗೃಹದಲ್ಲಿ ತುಂಗ…

Read More

ಆನಂದಪುರ ಸಮೀಪದ ಕೆಂಜಿಗಾಪುರದಲ್ಲಿ ಒಂಟಿ ಮನೆ ದರೋಡೆ – ಒಂದೇ ವಾರದಲ್ಲಿ ಎರಡು ಬಾರಿ ದರೋಡೆಗೊಳಗಾದ ಭಟ್ಟರ ಮನೆ|Robbery

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆತಂಕ ಮೂಡಿಸುವಂತಹ ದರೋಡೆ ಪ್ರಕರಣವೊಂದು ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಡೆದಿದೆ. ಆನಂದಪುರ ಸಮೀಪದ ಕೆಂಜಿಗಾಪುರ ಭಟ್ಟರೊಬ್ಬರ ಮನೆಯಲ್ಲಿ ರಾಬರಿ ನಡೆದಿದೆ. ಎಫ್​ಐಆರ್​ನಲ್ಲಿ ದಾಖಲಾಗಿರುವ ಪ್ರಕಾರ ಎರಡು ಸಲ ರಾಬರಿ ನಡೆದಿದೆ. ಸ್ಥಳೀಯರು ಹೇಳುವ ಪ್ರಕಾರ ಮೂರು ಸಲ ನಡೆದಿರಬಹುದು ಎನ್ನಲಾಗುತ್ತದೆ.  ಒಂದೇ ಮನೆಯನ್ನು ಟಾರ್ಗೆಟ್ ಮಾಡಿ ಕೇವಲ ಒಂದು ವಾರದಲ್ಲಿ ಎರಡು ಸಲ ರಾಬರಿ ಮಾಡಲಾಗಿದೆ.  ಹಿರಿಯ ವೃದ್ಧರನ್ನ ಕೈ ಕಾಲು ಕಟ್ಟಿ ರಾಬರಿ ಮಾಡಿ ಹೋಗುತ್ತಿರುವವರು ಯಾರು?…

Read More

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ…

Read More

ತೀರ್ಥಹಳ್ಳಿ ತಾಲ್ಲೂಕಿನ ದರಲಗೋಡು “ನೆಸ್ಟ್ ಹೋಂ ಸ್ಟೇ” ಮೇಲೆ ದಾಳಿ : 9 ಜನರ ವಿರುದ್ಧ ಎಫ್ಐಆರ್‌ ದಾಖಲು !

ತೀರ್ಥಹಳ್ಳಿ : ತಾಲೂಕಿನ ದರಲಗೋಡಿನಲ್ಲಿರುವ  ನೆಸ್ಟ್ ಹೋಮ್ ಸ್ಟೇ‌ಯಲ್ಲಿ ಜೂಜಾಡುತ್ತಿದ್ದವರ ಮೇಲೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ‌ಯಲ್ಲಿ 9 ಜನರಿದ್ದು ಅವರ ಮೊಬೈಲ್ ಮತ್ತು ಇಸ್ಪೀಟ್ ಆಟಕ್ಕೆ ಪಣವಾಗಿಟ್ಟಿದ್ದ 30,270 ರೂ. ಹಣವನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ.  ದರಲಗೋಡಿನ ನೆಸ್ಟ್ ಹೋಮ್ ಸ್ಟೇಯಲ್ಲಿ ಇಸ್ಪೀಟ್ ಆಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ  ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮ ಅವರ ನೇತೃತ್ವದಲ್ಲಿ ಭಾನುವಾರ ಸಂಜೆ ದಾಳಿ ನಡೆಸಲಾಗಿದೆ. ಪರವಾನಗಿ ಇಲ್ಲದೆ ಇಸ್ಪೀಟ್ ಆಟವಾಡಲು ಅವಕಾಶ ಮಾಡಿಕೊಟ್ಟ ಕಾರಣ…

Read More

SHIVAMOGGA | ಹುಕ್ಕಾಬಾರ್ ಮೇಲೆ ದಾಳಿ

SHIVAMOGGA | ಹುಕ್ಕಾಬಾರ್ ಮೇಲೆ ದಾಳಿ ಶಿವಮೊಗ್ಗದ ಗೋಪಾಳದಲ್ಲಿರುವ ಹುಕ್ಕಾಬಾರ್ ಮೇಲೆ ದಾಳಿ ನಡೆಸಿ ತೆರವುಗೊಳಿಸಿದ ಘಟನೆ ನಡೆದಿದೆ. ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ ನಡೆಸಿ ತೆರವುಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಉಪ ಪೋಲಿಸ್ ನಿರೀಕ್ಷಕರಾದ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಗಳು ಹಾಗೂ…

Read More

ರಿಪ್ಪನ್‌ಪೇಟೆ : ತಳಲೆಯಲ್ಲಿ ಭಾರಿ ಮಳೆಗೆ ಮನೆಯ ಗೋಡೆ ಕುಸಿತ|ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆ – ಅಭಿನಂದನೆ|Rpet

ರಿಪ್ಪನ್‌ಪೇಟೆ : ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇದರ ಪರಿಣಾಮ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿತವಾಗಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ ಸುರಿದ ಭಾರಿ ಮಳೆಗೆ ತಳಲೆ ಗ್ರಾಮದ ಈಶ್ವರಪ್ಪ ಎಂಬುವವರ ಮನೆಯ ಗೋಡೆ ಕುಸಿದಿದ್ದು ಯಾವುದೇ ಪ್ರಾಣಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆಯಾದ ಯುವ ಪ್ರತಿಭೆಗೆ ಮಂಜುನಾಥ್ ಗೌಡರವರಿಂದ ಅಭಿನಂದನೆ: ರಿಪ್ಪನ್‌ಪೇಟೆ…

Read More