Headlines

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ – ಇಬ್ಬರು ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಎರಡು ಅಂಗಡಿಗಳ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬೆಳ್ಳೂರು ಗ್ರಾಮದ ಬಂಗ್ಲಿದಿಬ್ಬ ಸರ್ಕಲ್ ನಲ್ಲಿರುವ ದಿನಸಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಚಂದ್ರಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಬೆಳ್ಳೂರು ಗ್ರಾಮದ ಕೋಳಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ…

Read More

ಕೊರೊನಾ ಪಾಸಿಟಿವ್ ಹಿನ್ನಲೆ ರಜೆ ಮೇಲೆ ಹೋಗಿದ್ದ ಕಾನ್ಸ್ ಟೇಬಲ್ ನಾಪತ್ತೆ – ಅದೇ ಸ್ಟೇಷನ್ ನಲ್ಲಿ ದಾಖಲಾಯ್ತು ಕೇಸ್|missing

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್​ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್​ಐಆರ್ ಕೂಡ ದಾಖಲಾಗಿದೆ.   ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ  24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ.  ಆನಂತರ  ವಾಪಸ್‌ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ…

Read More

ರಿಪ್ಪನ್‌ಪೇಟೆ : ನುಗ್ಗೆಕಾಯಿ ಕಿತ್ತ ವಿಚಾರದಲ್ಲಿ ಗಲಾಟೆ – ಒಬ್ಬನಿಗೆ ಮೂವರಿಂದ ಹಲ್ಲೆ,ಜೀವಬೆದರಿಕೆ|Assault

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಲ ಗ್ರಾಮದಲ್ಲಿ ನುಗ್ಗೆಕಾಯಿ ವಿಚಾರಕ್ಕೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆಯೊಂದು ನಡೆದಿದೆ.  ಸೋಮವಾರ ಸಂಜೆ ಕೆಂಚನಾಲ ಗ್ರಾಮದ ರಾಮ್ ಕುಮಾರ್  ರಿಪ್ಪನ್​ಪೇಟೆಗೆ ಹೋಗಿ ವಾಪಸ್​ ಮನೆಗೆ ಬರುವಾಗ, ಅದೇ ಗ್ರಾಮದ ನಿವಾಸಿ  ನಾಗೇಶ್ ತನ್ನ ಮನೆ ಹಿತ್ತಲಿನಲ್ಲಿ  ಬೆಳೆದಿದ್ದ ನುಗ್ಗೆಕಾಯಿಯನ್ನು ಕೀಳುತ್ತಿರುವುದು ಕಾಣಿಸಿದೆ. ಸಹಜವಾಗಿಯೇ ನಮ್ಮನೆಯ ಹಿತ್ಲಿಂದ ಯಾಕೆ ನುಗ್ಗೆಕಾಯಿ ಕಿತ್ಕೊಂಡು ಹೋಗ್ತಿದ್ದಿಯಾ, ಹೇಳೋದು ಕೇಳೋದು ಏನು ಇಲ್ವಾ ಎಂದು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ಸಿಟ್ಟಾದ ವ್ಯಕ್ತಿ ಅದು ನಿನ್ನ…

Read More

ಶ್ರೀಕ್ಷೇತ್ರ ಹೊಂಬುಜಾ ಮಠದಲ್ಲಿ ಹಲವು ಭಾವುಕ ಕ್ಷಣಗಳಿಗೆ ಸಾಕ್ಷಿಯಾದ ಶಿಬಿರ|hombuja

ರಿಪ್ಪನ್‌ಪೇಟೆ : ಸಮೀಪದ ಶ್ರೀಕ್ಷೇತ್ರ ಹೊಂಬುಜದಲ್ಲಿ ಇಂದು ಭಾವುಕ ಕ್ಷಣಗಳಿಗೆ ಸಾಕ್ಷಿಯಾಗುವಂತಹ ಕಾರ್ಯಕ್ರಮವೊಂದನ್ನು ಹೊಂಬುಜ ಮಠದ ವತಿಯಿಂದ ಆಯೋಜಿಸಲಾಗಿತ್ತು. ಕೆಲವೊಂದು ಕಾರಣಗಳಿಂದ ಕೈ ಮತ್ತು ಕಾಲು ಕಳೆದುಕೊಂಡ 72 ವಿಕಲಚೇತನರಿಗೆ ಕೈ ಮತ್ತು ಕಾಲು ಉಚಿತವಾಗಿ ಜೋಡಿಸುವ ಕಾರ್ಯಕ್ರಮದಲ್ಲಿ ಕಣ್ಣಂಚನ್ನು ತೇವಗೊಳಿಸುವಂತಹ ಕೆಲವೊಂದು ಘಟನೆಗಳು ನಡೆದವು. ಹನ್ನೊಂದು ವರ್ಷದ ವಿಕಲಚೇತನ ಬಾಲಕ ಅಪಘಾತದಲ್ಲಿ ಎರಡು ವರ್ಷದ ಹಿಂದೆ ಕಾಲು ಕಳೆದುಕೊಂಡು ತನ್ನ ಬಾಳಿನಲ್ಲಿನ ಇನ್ನು ನಡೆಯಲು ಸಾಧ್ಯವೇ ಇಲ್ಲವೆನೋ ಎಂಬ ಮನಸ್ಥಿತಿಯಲ್ಲಿದ್ದ… ಆ ಬಾಲಕನಿಗೆ ಕಾಲು ಜೋಡಿಸುತ್ತಲೇ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ತೀರ್ಥಹಳ್ಳಿ ಕಾಂಗ್ರೆಸ್ ನ ಜೋಡೆತ್ತುಗಳ ವಾಗ್ದಾಳಿ|RMM-KIMMANE

ತೀರ್ಥಹಳ್ಳಿ : ಜನರಿಂದ ಆಯ್ಕೆಯಾದಂತಹ ಒಬ್ಬ ಜನಪ್ರತಿನಿಧಿಯನ್ನು ಒಬ್ಬ ಅಧಿಕಾರಿ ಹೊಡಿಯುತ್ತಾರೆ ಅಂದ್ರೆ ಏನರ್ಥ ? ಜ್ಞಾನೇಂದ್ರ ಗೆ ವಿಧಾನಸಭೆಯಲ್ಲಿ ಯಾವುದಾದರೂ ಅಧಿಕಾರಿ ಹೊಡೆದರೆ ಅದರ ಉತ್ತರ ಏನು ?ಒಬ್ಬ ಅಧಿಕಾರಿ ಆರಗ ಜ್ಞಾನೇಂದ್ರ ಅವರಿಗೆ ಹೊಡೆದರೆ ಅವರನ್ನು ಅಧಿಕಾರದಲ್ಲಿ ಇಡುತ್ತಾರ ಇವರಿಗೆ ಕಾಮನ್ ಸೆನ್ಸ್ ಬೇಡವಾ ? ನನ್ನ ಅನಿಸಿಕೆ ಜ್ಞಾನೇಂದ್ರರಂತವರಿಗೆ ಅಧಿಕಾರ ಕೊಟ್ಟಿದ್ದೆ ತಪ್ಪು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ಪಿಡಿಓ ಅವರನ್ನು ಕೆಲಸದಿಂದ ತೆಗೆಯಬೇಕು ಎಂದು ಮಂಗಳವಾರ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೊಟ್ಟಮೊದಲ ವಿಮಾನ|airport

ಶಿವಮೊಗ್ಗದ ಸೋಗಾನೆಯ ನೂತನ ಕುವೆಂಪು ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಇವತ್ತು ಮಧ್ಯಾಹ್ನ ಬಂದಿಳಿದಿದೆ. ಪ್ರಾಯೋಗಿಕವಾಗಿ ವಾಯು ಸೇನೆಯ ಬೋಯಿಂಗ್ ವಿಮಾನ ಸೋಗಾನೆಯ ಕುವೆಂಪು ವಿಮಾನ ನಿಲ್ದಾಣದ ರನ್ ವೇಯಲ್ಲಿ ಬಂದಿಳಿದಿದ್ದು ಯಾವುದೇ ಅಡೆತಡೆ ಉಂಟಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ವಾಯು ಸೇನೆಯ ಬೋಯಿಂಗ್ 737 – 7HI ಮಾದರಿಯ ವಿಮಾನ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದೆ. ಮಧ್ಯಾಹ್ನ 12 ಗಂಟೆಗೆ ಈ ವಿಮಾನ ದೆಹಲಿಯಿಂದ ಹೊರಟಿತ್ತ್ತು. ಮಧ್ಯಾಹ್ನ 2.30ರ ಹೊತ್ತಿಗೆ ವಿಮಾನ ಲ್ಯಾಂಡ್…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಲು ಸಂಪುಟ ನಿರ್ಧಾರ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸೋಮವಾರ ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ. ಈ ಹಿಂದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಕುವೆಂಪು ಅವರ ಹೆಸರನ್ನು ಪ್ರಸ್ತಾಪಿಸಿದ್ದರು.  ’20ನೇ ಶತಮಾನ ಕಂಡ ಈ ದೇಶದ ಶ್ರೇಷ್ಠ ಕವಿ. ಜ್ಞಾನಪೀಠ ಪ್ರಶಸ್ತಿ ಪಡೆದವರು. ರಾಜ್ಯದ ಗೀತೆಯನ್ನು ರಚಿಸಿದ ರಾಷ್ಟ್ರಕವಿ ಕುವೆಂಪು ಅವರ…

Read More

ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು|robbery

ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ನಗರದ ವಿನೋಬನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾರಕಾಸ್ತ್ರಗಳೊಂದಿಗೆ ಒಬ್ಬಂಟಿಯಾಗಿ ಬರುವ ವ್ಯಕ್ತಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಖತರ್ ನಾಕ್ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಬಸವನ ಗಂಗೂರು ಚಾನೆಲ್ ಮೇಲೆ ಬೊಮ್ಮನ್ ಕಟ್ಟೆಯ ಅನಿಲ್ ಕುಮಾರ್(42), ಕೋಹಳ್ಳಿಯ ಶಿವನಾಯ್ಕ (34), ಆಯನೂರಿನ ಶಿವಕುಮಾರ್ (45) ಮತ್ತು ಸಿರಿಗೆರೆಯ ಖಲೀಂ ಬಂಧಿತ ಆರೋಪಿಗಳು. ಈ ದರೋಡೆ ಸಂಚಿನ ಬಗ್ಗೆ ಮಾಹಿತಿ ತಿಳಿದ ವಿನೋಬನಗರ ಪಿಎಸ್ಐ ಸಾಗರ್ಕರ್ ನೇತೃತ್ವದಲ್ಲಿ ಪೊಲೀಸರ ತಂಡ…

Read More

ಫೆ.24 ರ ಶುಕ್ರವಾರ ಶ್ರೀಕ್ಷೇತ್ರ ಹೊಂಬುಜಾಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ – ಹುಂಚದಕಟ್ಟೆಯಲ್ಲಿ ಗ್ರಾಮ ವಾಸ್ತವ್ಯ|JDS

ತೀರ್ಥಹಳ್ಳಿ : ಫೆ 23 ಮತ್ತು 24 ರಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ ನಡೆಯಲಿದ್ದು ಫೆ.24 ರ ಶುಕ್ರವಾರ ಶ್ರೀ ಕ್ಷೇತ್ರ ಹೊಂಬುಜಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಫೆ.23 ರಂದು ಹುಂಚದಕಟ್ಟೆ ಗ್ರಾಮದಲ್ಲಿ ರಾತ್ರಿ ಗ್ರಾಮ ವಾಸ್ತವ್ಯ ಹೂಡಲಿರುವ ಮಾಜಿ ಸಿಎಂ ಕುಮಾರಸ್ವಾಮಿ ಶುಕ್ರವಾರ ಬೆಳಿಗ್ಗೆ ನಿಟ್ಟೂರು ನಾರಾಯಣ ಗುರು ಮಠಕ್ಕೆ ಭೇಟಿ ನೀಡಿ ನಂತರ ಹೊಂಬುಜಾ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಕುಮಾರಸ್ವಾಮಿಯವರ ಪಂಚರತ್ನ ರಥಯಾತ್ರೆ ಸಾಗುವುದು…

Read More

ಶಿವ ನಾಮ ಸ್ಮರಣೆಯಿಂದ ಸಂಕಷ್ಟ ಪರಿಹಾರ – ಮಳಲಿ ಶ್ರೀಗಳು|shivarathri

ಶಿವ ನಾಮಸ್ಮರಣೆಯಿಂದ ಸಂಕಷ್ಟ ಪರಿಹಾರ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ : ಸಂಸ್ಕೃತಿ ಸಂಸ್ಕಾರ ಪ್ರತಿಯೊಬ್ಬರು ನಿತ್ಯ ಬದುಕಿನಲ್ಲಿ ಅಳವಡಿಸಿಕೊಂಡಾಗ ಬದುಕು ನೆಮ್ಮದಿಯಿಂದ ಕೂಡಿರುತ್ತದೆ. ಶಿವರಾತ್ರಿಯ ದಿನ ಮಾತ್ರ ಶಿವನಾಮಸ್ಮರಣೆ ಮಾಡಿದರೆ ಸಾಲದು ನಿತ್ಯ ಶಿವಮಂತ್ರ ಪಠಿಸುವುದರಿಂದ ಸಂಕಷ್ಟ ಹರಿಹಾರವಾಗುವುದು ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡಯ ಇತಿಹಾಸ ಪ್ರಸಿದ್ದ ಹಾಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಮಹಾಶಿವರಾತ್ರಿಯ ಅಂಗವಾಗಿ ಹಾಲೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಧರ್ಮಸಭೆಯ…

Read More
Exit mobile version