ಹಲವು ದಶಕದ ಸಮಸ್ಯೆ ಕೇವಲ ಭರವಸೆಯಲ್ಲೆ ಕಳೆಯಿತು:ಸೇತುವೆ ಇಲ್ಲದೇ ಹಳಿಯೂರು ಗ್ರಾಮಸ್ಥರ ನರಕಯಾತನೆ

ರಿಪ್ಪನ್ ಪೇಟೆ: ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷದಿಂದ ಗವಟೂರು ಗ್ರಾಮದ ಹಳಿಯೂರು (ಮತ್ತಿಮನೆ, ಸಂಪಳ್ಳಿ ಸಂಪರ್ಕ)ಭಾಗದ ಜನರು ಕಳೆದ 60 ವರ್ಷಗಳಿಂದ ಸೇತುವೆ ಇಲ್ಲದೆ ಮಳೆಗಾಲದ ಸಂದರ್ಭದಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ.  ದಿನ ನಿತ್ಯದ ವಸ್ತುಗಳನ್ನು ಖರೀದಿಸುವರು, ಶಾಲೆಗೆ ಹೋಗುವ ಮಕ್ಕಳು, ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಹೋಗೋಕೆ ಆಗದೇ ಪರದಾಡುತ್ತಿರುವ ಊರಿನ ಜನರು, ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ ಇತ್ಯಾದಿ ಮೂಲಭೂತ ಸೌಕರ್ಯಗಳ ಸಮಯಕ್ಕೆ ಸರಿಯಾಗಿ ಪಡೆಯಲು ಕೃಷಿಕರು ಸೇತುವೆ ಇಲ್ಲದೆ ಸಂಕಟಪಡುತ್ತಿದ್ದಾರೆ. ಗ್ರಾಮಸ್ಥರು ಸೇತುವೆ ರಸ್ತೆ ಇಲ್ಲದೆ ಬೇಸತ್ತು…

Read More

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ MLA Belur Gopalakrishna emphasized the importance of rural sports for youth health and leadership while inaugurating a district-level floodlight volleyball tournament at Talale village near Ripponpete. ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರಿಂದ ಗ್ರಾಮದ ಹಿತ ಕಾಪಾಡುವ ಜೊತೆಗೆ ಯುವಜನರ ದೈಹಿಕ-ಮಾನಸಿಕ ಆರೋಗ್ಯವನ್ನೂ ವೃದ್ಧಿಸಬಹುದು ಎಂದು ಸಾಗರ–ಹೊಸನಗರ ವಿಧಾನಸಭಾ…

Read More

ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದ ಪಟ್ಟಣ ಪಂಚಾಯತಿ ಸದಸ್ಯನ ಸದಸ್ಯತ್ವ ವಜಾ|dismiss

ಕೋಳಿ ಅಂಗಡಿ ಮಾಲೀಕರೊಬ್ಬರಿಂದ ಇತ್ತೀಚೆಗೆ ಲಂಚ ಪಡೆಯುವಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕಾರ್ಗಲ್-ಜೋಗ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ. ಹರೀಶ್ ಗೌಡ ಸದಸ್ಯತ್ವವನ್ನು ವಜಾಗೊಳಿಸಲಾಗಿದೆ.  ಜೋಗದ 8ನೇ ವಾರ್ಡ್ ಸದಸ್ಯ ಹರೀಶ್ ಗೌಡ ಬಜಾರ್ ಲೈನ್‍ನ ಕೋಳಿ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಗೆ ಪರವಾನಿಗೆ ಮಾಡಿಸಿಕೊಡುವುದಾಗಿ 50 ಸಾವಿರ ರೂ.ಲಂಚ ಕೇಳಿದ್ದರು. ಮನೆಯಲ್ಲಿ ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಗಾಬರಿಗೊಳಗಾದ ಹರೀಶ್ ಗೌಡ ಹಣವನ್ನು…

Read More

ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ:  ಐವರಿಗೆ ಗಾಯ

ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ:  ಐವರಿಗೆ ಗಾಯ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ಜೀಪ್ ಹಾಗೂ ಟಿಟಿ ಮುಖಾಮುಖಿ ಢಿಕ್ಕಿಯಾಗಿ 5 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ. ಜೀಪ್ ನಲ್ಲಿದ್ದ 8 ಜನರಲ್ಲಿ ಮೂವರಿಗೆ ಗಂಭೀರ…

Read More

ರಿಪ್ಪನ್‌ಪೇಟೆಯ ಶಿಕ್ಷಕ ತಿಮ್ಮಪ್ಪರವರಿಗೆ ಒಲಿದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ |Rpet news

ರಿಪ್ಪನ್‌ಪೇಟೆಯ ಶಿಕ್ಷಕ ತಿಮ್ಮಪ್ಪರವರಿಗೆ ಒಲಿದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ | ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ತಿಮ್ಮಪ್ಪ ಸಿ ರವರು ಸೇರಿದಂತೆ ಹೊಸನಗರ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಒಲಿದಿದೆ. ಮೂಲತಃ ಆಯನೂರು ಸಮೀಪದ ಕುಂಸಿ ಗ್ರಾಮದ ನಿವಾಸಿ ತಿಮ್ಮಪ್ಪ ಸಿ ರವರು ಕಳೆದ 14 ವರ್ಷಗಳಿಂದ ಪಟ್ಟಣದ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ತಿಮ್ಮಪ್ಪ ಸಿ ರವರಿಗೆ…

Read More

ರಿಪ್ಪನ್‌ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ತತ್ತರಿಸಿದ ಜನತೆ : ಅಂಗಡಿ ಮುಗ್ಗಟ್ಟುಗಳಿಗೆ ನುಗ್ಗಿದ ನೀರು

ರಿಪ್ಪನ್‌ಪೇಟೆ : ಭಾರಿ ಗುಡುಗು ಸಿಡಿಲು ಮಳೆಯಿಂದ ತತ್ತರಿಸಿದ ಪಟ್ಟಣದ ಜನತೆ,ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ. ಪಟ್ಟಣದ ಸುತ್ತಮುತ್ತಲಿನ ಅರಸಾಳು ,ಬೆನವಳ್ಳಿ,ದೂನ,ಬಾಳೂರು ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತ ವಾಗಿದೆ. ರಿಪ್ಪನ್‌ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ ನೀರು ಹರಿದು ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ.ತೀರ್ಥಹಳ್ಳಿ ರಸ್ತೆಯಲ್ಲಿ ಪ್ರಭಾಕರ್ ಎಂಬುವವರ ಅಂಗಡಿಗೆ ನೀರು‌ ನುಗ್ಗಿದೆ. ರಸ್ತೆಯ ಮೇಲೆ ಹರಿಯುತ್ತಿರುವ ಭಾರಿ ಪ್ರಮಾಣದ ನೀರಿನಿಂದ ಸಂಚಾರ ಅಸ್ತವ್ಯಸ್ತವಾಗಿದ್ದು,ವಿದ್ಯುತ್ ವ್ಯತ್ಯಯ ಉಂಟಾಗಿದೆ….

Read More

Viral News | ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

ಬೆಂಗಳೂರು : ಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ‌ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಪ್ರಭುಗೆ ಪ್ರಿಯಾಂಕಾ ಮೇಲೆ ಅನುಮಾನ ಇತ್ತಂತೆ. ಪತ್ನಿ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಕೂಡ ಆಡುತ್ತಿದ್ದನಂತೆ. ಮೊನ್ನೆ…

Read More

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ!

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ! ಹಾವೇರಿ : ಹಾಡ ಹಗಲೇ ಪ್ರಥಮ ದರ್ಜೆಯ ಗುತ್ತಿದಾರನನ್ನು ಮಾರಕಾಸ್ತ್ರಗಳಿಂದ ಮನಸೋಯಿಚ್ಚೆ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.ಲಾಂಗು ಮಚ್ಚುಗಳಿಂದ ತೀವ್ರ ಹಲ್ಲೆಗೊಳಗಾದ ಗುತ್ತಿಗೆದಾರ ನಡು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹಾವೇರಿಯ ಶಿವಾನಂದ ಕುನ್ನೂರು (40) ಹೀಗೆ ಬರ್ಬರವಾಗಿ ಕೊಲೆಯಾಗಿರುವ ಪ್ರಥಮ ದರ್ಜೆ ಗುತ್ತಿಗೆದಾರ.ಆಸ್ತಿ ವಿಚಾರಕ್ಕೆ ಈ…

Read More

ಹೃದಯಾಘಾತದಿಂದ ಆಹಾರ ಸಚಿವ ಉಮೇಶ್ ಕತ್ತಿ ನಿಧನ :

ಆಹಾರ ಸಚಿವ ಉಮೇಶ್ ಕತ್ತಿ (61) ಅವರು ಹೃದಯಾಘಾತದಿಂದ ಇಂದು ( ಮಂಗಳವಾರ) ರಾತ್ರಿ ನಿಧನರಾದರು. ಈ ಬಗ್ಗೆ ಎಲ್ಲ ಟಿವಿ ಮಾಧ್ಯಮಗಳು ವರದಿ ಮಾಡಿದ್ದು, ಈ ವರೆಗೆ ಆಸ್ಪತ್ರೆಯಿದ ಅಧಿಕೃತ ಘೋಷಣೆಯಾಗಿಲ್ಲ.   ನಗರದ  ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕುಟುಂಬದ ಸದಸ್ಯರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು.  ಸದ್ಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ ಕ್ಷೇತ್ರದ ಶಾಸಕರಾಗಿದ್ದು, ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ…

Read More

ಬಂಕ್ ಬಾಲು ಹತ್ಯೆಗೆ ಪ್ರತೀಕಾರವಾಗಿ ಹಂದಿ ಅಣ್ಣಿ ಹತ್ಯೆ :ಪೊಲೀಸ್ ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿಗಳು

ಜುಲೈ14 ರಂದು ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿಯ ವೃತ್ತದಲ್ಲಿ ಕುಖ್ಯಾತ ಪಾತಕಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ನಡುರಸ್ತೆಯಲ್ಲಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳ ಶೋಧಕ್ಕೆ ಶಿವಮೊಗ್ಗ ಪೊಲೀಸರು 4 ತಂಡ ಕಟ್ಟಿಕೊಂಡು ಆಖಾಡಕ್ಕೆ ಇಳಿದಿದ್ದರು. ದುಷ್ಕರ್ಮಿಗಳ ಜಾಡು ಹಿಡಿದು ಶಿವಮೊಗ್ಗ ಪೊಲೀಸ್ರು ಬೆಂಗಳೂರು, ಕೊಡಗು, ಕಾರವಾರ ಸೇರಿದಂತೆ ಹಲವೇಡೆ ಶೋಧ ಸಹ ನಡೆಸುವ ವೇಳೆಯೇ 8 ಜನ ಕೊಲೆ ಆರೋಪಿಗಳು ಕಳೆದ ಸೋಮವಾರ ರಾತ್ರಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಶರಣಾಗಿದ್ದರು….

Read More
Exit mobile version