KSRTC ಬಸ್ ನಲ್ಲಿದ್ದ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸಿದ ಚಾಲಕ – ಪ್ರಯಾಣಿಕರ ಆಕ್ರೋಶ
ತಾಂತ್ರಿಕ ದೋಷದಿಂದ ಕೆಎಸ್ಆರ್ಟಿಸಿ ಬಸ್ ಕೆಟ್ಟು ನಿಂತು, ಪ್ರಯಾಣಿಕರು ಸುಮಾರು ಮೂರು ಗಂಟೆ ಪರದಾಡುವಂತಾಯಿತು. ಸಾಗರ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಪರ್ಯಾಯ ಬಸ್ ವ್ಯವಸ್ಥೆ ಮಾಡದ್ದಕ್ಕೆ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಹಿಡಿಶಾಪ ಹಾಕಿದರು. ಶಿವಮೊಗ್ಗ – ಸಾಗರ – ಕಾರವಾರ ಮಾರ್ಗದ ಕೆಎಸ್ಅರ್ಟಿಸಿ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಸಾಗರ ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸನ್ನು ರಿಪೇರಿಗೆ ಕೊಂಡೊಯ್ಯಲಾಯಿತು. ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಆ ಬಸ್ಸಿನಲ್ಲಿದ್ದರು. ಬೆಳಗ್ಗೆ 10.30ರ ಹೊತ್ತಿಗೆ ಸಾಗರ…