ಅಗಲಿದ ಸೈನಿಕನಿಗೆ ವೀರ ನಮನ – ಸಾವಿರಾರು ಜನರಿಂದ ಅಂತಿಮ ದರ್ಶನ : ತವರಿನ ಮಣ್ಣಲ್ಲಿ ಲೀನವಾದ ಯೋಧ ಸಂದೀಪ್|tribute
ರಿಪ್ಪನ್ಪೇಟೆ : ಸಕಲ ಸರ್ಕಾರಿ ಗೌರವದೊಂದಿಗೆ ಅಗಲಿದ ಯೋಧ ಸಂದೀಪ್ ರವರ ಅಂತ್ಯಕ್ರಿಯೆ ಪಟ್ಟಣದ ಹಿಂದೂ ರುಧ್ರಭೂಮಿಯಲ್ಲಿ ಜರುಗಿತು. ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಶಾಸಕ ಹರತಾಳು ಹಾಲಪ್ಪ ,ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಧರ್ಮಂತ ಗಂಗಾರಾಮ ಕೋರಿ,ಡಿವೈಸ್ಪಿ ಗಜಾನನ ವಾಮನ ಸುತಾರ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು. ವಿನಾಯಕ ವೃತ್ತದಲ್ಲಿ ಶಿವಮೊಗ್ಗ ಜಿಲಾ ಪೊಲೀಸ್ ವತಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು. ವಿನಾಯಕ…